ಆ್ಯಪ್ನಗರ

ವಾರದೊಳಗೆ ಅಯೋಧ್ಯೆ ಟ್ರಸ್ಟ್‌ ರಚನೆ?

ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಉಸ್ತುವಾರಿ ವಹಿಸಲಿರುವ ಉದ್ದೇಶಿತ ಟ್ರಸ್ಟ್‌ ರಚನೆಯನ್ನು ಒಂದು ವಾರದೊಳಗೆ ಅಂತಿಮಗೊಳಿಸಿ, ಕೇಂದ್ರ ಗೃಹ ಸಚಿವಾಲಯ ಘೋಷಣೆ ಹೊರಡಿಸುವ ಸಾಧ್ಯತೆ ಇದೆ...

Vijaya Karnataka Web 28 Jan 2020, 10:37 pm
ಹೊಸದಿಲ್ಲಿ: ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಉಸ್ತುವಾರಿ ವಹಿಸಲಿರುವ ಉದ್ದೇಶಿತ ಟ್ರಸ್ಟ್‌ ರಚನೆಯನ್ನು ಒಂದು ವಾರದೊಳಗೆ ಅಂತಿಮಗೊಳಿಸಿ, ಕೇಂದ್ರ ಗೃಹ ಸಚಿವಾಲಯ ಘೋಷಣೆ ಹೊರಡಿಸುವ ಸಾಧ್ಯತೆ ಇದೆ.
Vijaya Karnataka Web ರಾಮಮಂದಿರ
ರಾಮಮಂದಿರ


ಸುಪ್ರೀಂ ಕೋರ್ಟ್‌ ಆದೇಶದ ಅನುಸಾರ ಮಸೀದಿ ನಿರ್ಮಾಣಕ್ಕೆ ಅಯೋಧ್ಯೆಯಲ್ಲಿಪರ್ಯಾಯ ಜಾಗವನ್ನು ಈ ಅವಧಿಯಲ್ಲಿಯೇ ಗುರುತಿಸುವ ನಿರೀಕ್ಷೆ ಇದೆ. ಟ್ರಸ್ಟ್‌ ರಚನೆ ಮತ್ತು ಮಸೀದಿ ಪರ್ಯಾಯ ಜಾಗಕ್ಕೆ ಸಂಬಂಧಿಸಿದಂತೆ ಸಚಿವಾಲಯ ಸಿದ್ಧತೆ ಮಾಡಿಕೊಂಡಿದೆ.

ಇಡೀ ಪ್ರಕ್ರಿಯೆಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟದ ಸಮ್ಮತಿಗಾಗಿ ಕಳಿಸಿಕೊಡಲಿದ್ದು, ಒಂದು ವಾರದೊಳಗೆ ಎಲ್ಲವೂ ಅಖೈರುಗೊಳ್ಳಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ವಿವಾದಿತ ಜಾಗದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮತ್ತು ಬಾಬರಿ ಮಸೀದಿಗೆ ಪರ್ಯಾಯ ಭೂಮಿ ನೀಡಲು 3-4 ತಿಂಗಳೊಳಗೆ ಟ್ರಸ್ಟ್‌ ರಚಿಸುವಂತೆ ಕೇಂದ್ರ ಸರಕಾರಕ್ಕೆಸುಪ್ರೀಂ ಕೋರ್ಟ್‌ ಆದೇಶಿಸಿತ್ತು.

ವಿವಾದಿತ 2.77 ಎಕರೆ ಜಮೀನು ಪ್ರಕರಣದ ಅರ್ಜಿದಾರ ರಾಮಲಲ್ಲಾಗೆ ನೀಡಲು ಆದೇಶಿಸಿದೆ. ರಾಮಮಂದಿರ ನಿರ್ಮಾಣದ ಹೊಣೆಯನ್ನು ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ನೀಡಿತ್ತು, ಮೂರು ತಿಂಗಳೊಳಗಾಗಿ ನಿಯಮ ರೂಪಿಸುವಂತೆ ಸೂಚಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ