ಆ್ಯಪ್ನಗರ

ಸೆ.30 ಬುಧವಾರ: ಇಂದು ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಅಂತಿಮ ತೀರ್ಪು!

1992ರ ಮಸೀದಿ ಧ್ವಂಸ ಪ್ರಕರಣದ ಎಲ್ಲಾ 32 ಆರೋಪಿಗಳು ತೀರ್ಪಿನ ದಿನ ಖುದ್ದು ಹಾಜರು ಇರುವಂತೆ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್‌.ಕೆ.ಯಾದವ್‌ ಸೆಪ್ಟೆಂಬರ್‌ 16ರಂದೇ ನಿರ್ದೇಶನ ನೀಡಿದ್ದರು. ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌, ವಿನಯ್‌ ಕಟಿಯಾರ್‌ ಮತ್ತು ಸಾಧ್ವಿ ರಿತಾಂಬರಾ ಕೂಡ ಆರೋಪಿಗಳ ಪಟ್ಟಿಯಲ್ಲಿದ್ದಾರೆ. ರಾಮ ಮಂದಿರ ನಿರ್ಮಾಣ ಟ್ರಸ್ಟ್‌ನ ಉಸ್ತುವಾರಿ ನೋಡಿಕೊಳ್ಳುತ್ತಿರುವ ಚಂಪತ್‌ ರಾಯ್‌ ಕೂಡ ಆರೋಪ ಎದುರಿಸುತ್ತಿದ್ದಾರೆ. ಆಡ್ವಾಣಿ, ಜೋಶಿ, ಉಮಾ ಭಾರತಿ ಕೋರ್ಟ್‌ಗೆ ಗೈರಾಗುವ ಸಾಧ್ಯತೆ ಇದೆ.

Vijaya Karnataka 30 Sep 2020, 7:07 am
ಹೊಸದಿಲ್ಲಿ: ಬಹು ನಿರೀಕ್ಷಿತ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಅಂತಿಮ ತೀರ್ಪನ್ನು ವಿಶೇಷ ನ್ಯಾಯಾಲಯ ಬುಧವಾರ ಪ್ರಕಟಿಸಲಿದೆ. ಬಿಜೆಪಿಯ ಹಿರಿಯ ನಾಯಕರಾದ ಎಲ್‌.ಕೆ.ಆಡ್ವಾಣಿ, ಡಾ.ಮುರಳಿ ಮನೋಹರ್‌ ಜೋಷಿ ಮತ್ತು ಉಮಾ ಭಾರತಿ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದು, ತೀರ್ಪು ಕುತೂಹಲ ಮೂಡಿಸಿದೆ.
Vijaya Karnataka Web vijaya-karnataka


1992ರ ಮಸೀದಿ ಧ್ವಂಸ ಪ್ರಕರಣದ ಎಲ್ಲಾ 32 ಆರೋಪಿಗಳು ತೀರ್ಪಿನ ದಿನ ಖುದ್ದು ಹಾಜರು ಇರುವಂತೆ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್‌.ಕೆ.ಯಾದವ್‌ ಸೆಪ್ಟೆಂಬರ್‌ 16ರಂದೇ ನಿರ್ದೇಶನ ನೀಡಿದ್ದರು. ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌, ವಿನಯ್‌ ಕಟಿಯಾರ್‌ ಮತ್ತು ಸಾಧ್ವಿ ರಿತಾಂಬರಾ ಕೂಡ ಆರೋಪಿಗಳ ಪಟ್ಟಿಯಲ್ಲಿದ್ದಾರೆ. ರಾಮ ಮಂದಿರ ನಿರ್ಮಾಣ ಟ್ರಸ್ಟ್‌ನ ಉಸ್ತುವಾರಿ ನೋಡಿಕೊಳ್ಳುತ್ತಿರುವ ಚಂಪತ್‌ ರಾಯ್‌ ಕೂಡ ಆರೋಪ ಎದುರಿಸುತ್ತಿದ್ದಾರೆ. ಆಡ್ವಾಣಿ, ಜೋಶಿ, ಉಮಾ ಭಾರತಿ ಕೋರ್ಟ್‌ಗೆ ಗೈರಾಗುವ ಸಾಧ್ಯತೆ ಇದೆ.

ತೀರ್ಪು ಪ್ರಕಟಣೆಗೆ ಸುಪ್ರೀಂ ಕೋರ್ಟ್‌ ಈ ಮೊದಲು ಆಗಸ್ಟ್‌ 31ರ ಗಡುವು ನಿಗದಿ ಪಡಿಸಿತ್ತು. ನಂತರ ವಿಶೇಷ ನ್ಯಾಯಾಲಯದ ಮನವಿ ಪರಿಗಣಿಸಿ ಗಡುವಿನಲ್ಲಿಒಂದು ತಿಂಗಳ ವಿಸ್ತರಣೆ ಮಾಡಿತ್ತು. ಅಲ್ಲಿಂದ ಪ್ರತಿನಿತ್ಯ ವಿಚಾರಣೆ ನಡೆಸಿದ್ದ ಕೋರ್ಟ್‌, ಈಗ ಅಂತಿಮ ತೀರ್ಪು ಪ್ರಕಟಿಸಲು ಸಜ್ಜುಗೊಂಡಿದೆ.

ಬಂದಿದೆ ದೇಸಿ ಕೊರೊನಾ ಟೆಸ್ಟ್‌ ಕಿಟ್‌; ತಪಾಸಣೆ ಸುಲಭ, ತ್ವರಿತ ಫಲಿತಾಂಶ, ವೆಚ್ಚವೂ ಕಡಿಮೆ

ದೀರ್ಘ ವಿಚಾರಣೆ! ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ 351 ಸಾಕ್ಷ್ಯ ಮತ್ತು 600 ದಾಖಲೆಗಳನ್ನು ಕೋರ್ಟ್‌ಗೆ ಸಲ್ಲಿಕೆ ಮಾಡಿದೆ. 48 ಆರೋಪಿಗಳ ವಿರುದ್ಧ ಚಾಜ್‌ರ್‍ಶೀಟ್‌ ಸಲ್ಲಿಸಲಾಗಿತ್ತು. ಈ ಪೈಕಿ ವಿಚಾರಣೆ ಅವಧಿಯಲ್ಲಿಯೇ 17 ಮಂದಿ ನಿಧನ ಹೊಂದಿದ್ದು, 32 ಮಂದಿ ಉಳಿದಿದ್ದಾರೆ. ಮೊದಲು ವಿಚಾರಣೆ ನಡೆಸಿದ್ದ ಅಧೀನ ನ್ಯಾಯಾಲಯ 2001ರಲ್ಲಿ ಗಂಭೀರ ಅಪರಾಧ ಪಿತೂರಿ ಆರೋಪವನ್ನು ಕೈಬಿಟ್ಟಿತ್ತು. 2010ರಲ್ಲಿಅಲಹಾಬಾದ್‌ ಹೈಕೋರ್ಟ್‌ ಕೂಡ ಈ ತೀರ್ಪನ್ನು ಎತ್ತಿಹಿಡಿದಿತ್ತು. ಆದರೆ 2017ರಲ್ಲಿ ಸುಪ್ರೀಂ ಕೋರ್ಟ್‌ ಅವರ ವಿರುದ್ಧದ ಪಿತೂರಿ ಆರೋಪವನ್ನು ಮರುಸ್ಥಾಪಿಸಿ ವಿಚಾರಣೆ ನಡೆಸುವಂತೆ ಆದೇಶಿಸಿತು.

ಇಂದು ಯಾರೆಲ್ಲ ಗೈರು, ಯಾರು ಹಾಜರ್‌?

ಗೈರು ಸಾಧ್ಯತೆ: ಎಲ್‌.ಕೆ.ಆಡ್ವಾಣಿ, ಡಾ.ಮುರಳಿ ಮನೋಹರ ಜೋಶಿ, ಉಮಾ ಭಾರತಿ, ಕಲ್ಯಾಣ್‌ ಸಿಂಗ್‌, ನೃತ್ಯ ಗೋಪಾಲ ದಾಸ್‌, ಸತೀಶ್‌ ಪ್ರಧಾನ್‌.

ಹಾಜರಿ ನಿರೀಕ್ಷೆ: ವಿನಯ್‌ ಕಟಿಯಾರ್‌, ಚಂಪತ್‌ ರಾಯ್‌, ಸಾಕ್ಷಿ ಮಹಾರಾಜ್‌, ಸಾಧ್ವಿ ರಿತಂಬರಾ, ಆಚಾರ್ಯ ಧರ್ಮೇಂದ್ರ ದೇವ್‌, ಜೈ ಭಗವಾನ್‌ ಗೋಯಲ್‌.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ