ಆ್ಯಪ್ನಗರ

ಮಸೀದಿ ಧ್ವಂಸ: ಸುಪ್ರೀಂ ತೀರ್ಪಿನಿಂದ ಅಡ್ವಾಣಿ, ಜೋಷಿಗೆ ಹೆಚ್ಚಿದ ಸಂಕಷ್ಟ

1992ರಲ್ಲಿ ಬಾಬರಿ ಮಸೀದಿ ಕೆಡವಿದ್ದನ್ನು ಕಾನೂನಿನ ಉಲ್ಲಂಘನೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಶನಿವಾರದ ಐತಿಹಾಸಿಕ ಅಯೋಧ್ಯೆ ತೀರ್ಪಿನಲ್ಲಿ ಸಂವಿಧಾನ ಪೀಠ ಈ ವಿಷಯವನ್ನು ಉಲ್ಲೇಖಿಸಿದೆ.

Vijaya Karnataka 9 Nov 2019, 7:16 pm

ಹೊಸದಿಲ್ಲಿ: ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಹಿರಿಯ ಬಿಜೆಪಿ ಮುಖಂಡರಾದ ಎಲ್‌ಕೆ ಆಡ್ವಾಣಿ, ಮುರಳಿ ಮನೋಹರ ಜೋಶಿ ಹಾಗೂ ಉಮಾ ಭಾರತಿಗೆ ಸಂಕಷ್ಟ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ.
Vijaya Karnataka Web LK Advani Uma Bharti Murli Manohar Joshi


1992ರಲ್ಲಿ ಬಾಬರಿ ಮಸೀದಿ ಕೆಡವಿದ್ದನ್ನು ಕಾನೂನಿನ ಉಲ್ಲಂಘನೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಶನಿವಾರದ ಐತಿಹಾಸಿಕ ಅಯೋಧ್ಯೆ ತೀರ್ಪಿನಲ್ಲಿ ಸಂವಿಧಾನ ಪೀಠ ಈ ವಿಷಯವನ್ನು ಉಲ್ಲೇಖಿಸಿದೆ.

ಅಯೋಧ್ಯೆ ಮಹಾತೀರ್ಪಿನ ಗಮನಾರ್ಹ ಅಂಶಗಳ ಸಮಗ್ರ ಒಳನೋಟ

''ಪ್ರಾರ್ಥನಾ ಕೇಂದ್ರವನ್ನು ಉದ್ದೇಶಪೂರ್ವಕವಾಗಿ ಕೆಡವಿದ್ದು ಕಾನೂನಿನ ಉಲ್ಲಂಘನೆ. ಮುಸ್ಲಿಂ ಸಮುದಾಯದವರಿಗೆ ಪ್ರಾರ್ಥನೆಗಾಗಿ ಪರ್ಯಾಯ ವ್ಯವಸ್ಥೆ ಮಾಡಲೇಬೇಕು. ಆದ ಅನಾಹುತಕ್ಕೆ ಪರಿಹಾರ ಒದಗಿಸಲೇಬೇಕು. ಮುಸ್ಲಿಂ ಸಮುದಾಯದ ಹಕ್ಕುಗಳ ಉಲ್ಲಂಘನೆಯನ್ನು ನ್ಯಾಯಾಲಯ ಲಕ್ಷಿಸದಿದ್ದರೆ, ನ್ಯಾಯ ಉಳಿಯದು. ಎಲ್ಲಾ ನಂಬಿಕೆಗಳನ್ನೂ ಸಮಾನವಾಗಿ ಕಾಣಬೇಕೆಂದು ಸಂವಿಧಾನ ಪ್ರತಿಪಾದಿಸುತ್ತದೆ,'' ಎಂದು ನ್ಯಾಯಪೀಠ ಹೇಳಿದೆ.

1992ರ ಡಿಸೆಂಬರ್‌ 6ರಂದು 16ನೇ ಶತಮಾನದ ಬಾಬರಿ ಮಸೀದಿಯನ್ನು ಬಲಪಂಥೀಯ ಕಾರ್ಯಕರ್ತರು ಧ್ವಂಸ ಗೊಳಿಸಿದ್ದರು. ಈ ಸಂದರ್ಭ ಭುಗಿಲೆದ್ದ ಹಿಂದೂ-ಮುಸ್ಲಿಂ ಗಲಭೆಯಲ್ಲಿ3000ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆಡ್ವಾಣಿ, ಜೋಶಿ ಮತ್ತು ಉಮಾ ಭಾರತಿ ಸೇರಿದಂತೆ ಹಲವು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ.

ಬೇರೆ ಯಾವುದೇ ತೀರ್ಪು ಇದಕ್ಕಿಂತ ಉತ್ತಮವಾಗಿರಲು ಸಾಧ್ಯವಿಲ್ಲ: ಸಂತೋಷ್ ಹೆಗ್ಡೆ

ಆಡ್ವಾಣಿ, ಸಿಂಘಾಲ್‌ರನ್ನು ಸ್ಮರಿಸಿದ ಹಿಂದೂ ನಾಯಕರು

ಬಿಜೆಪಿ ಮುಖಂಡರು ಹಾಗೂ ಹಿಂದೂ ಸಂಘಟನೆಗಳ ಬಹುತೇಕ ನಾಯಕರು ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು ಹಿನ್ನೆಲೆಯಲ್ಲಿ ರಾಮ ಮಂದಿರ ನಿರ್ಮಾಣ ಹೋರಾಟದ ಮುಂಚೂಣಿಯಲ್ಲಿದ್ದ ಹಿರಿಯ ನಾಯಕ ಎಲ್‌. ಆಡ್ವಾಣಿ ಹಾಗೂ ವಿಎಚ್‌ಪಿ ಮಾಜಿ ಮುಖ್ಯಸ್ಥ ಅಶೋಕ್‌ ಸಿಂಘಾಲ್‌ ಅವರನ್ನು ಸ್ಮರಿಸಿದ್ದಾರೆ. ಬಿಜೆಪಿ ನಾಯಕ ಮುರಳಿ ಮನೋಹರ ಜೋಶಿ, ಉಮಾ ಭಾರತಿ , ಆರ್‌ಎಸ್‌ಎಸ್‌ ಚಿಂತಕರಾದ ಕೆ.ಎನ್‌. ಗೋವಿಂದಾಚಾರ್ಯ ಅವರು ಆಡ್ವಾಣಿ, ಸಿಂಘಾಲ್‌ ಅವರ ಪರಿಶ್ರಮವನ್ನು ಈ ಸಂದರ್ಭದಲ್ಲಿ ದೇಶ ನೆನಪಿಸಿಕೊಳ್ಳಬೇಕು ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ