ಆ್ಯಪ್ನಗರ

‘ಅಮೆರಿಕಾ-ಭಾರತ ಸಂವಿಧಾನ ಚರ್ಚಾ ಸ್ಪರ್ಧೆ’ ಗೆದ್ದ ಬೆಂಗಳೂರಿನ ಉನ್ನತಿ

ಶನಿವಾರ ನಡೆದ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ತಮಿಳುನಾಡು, ಕರ್ನಾಟಕ ಮತ್ತು ಕೇರಳ ರಾಜ್ಯಗಳ 16 ಸ್ಪರ್ಧಿಗಳು ಭಾಗವಹಿಸಿದ್ದರು. ಚೆನ್ನೈನಲ್ಲಿನ ಅಮೆರಿಕ ದೂತಾವಾಸ ಕಚೇರಿಯು ಲೊಯೊಲಾ ಕಾಲೇಜಿನ ಸಹಕಾರದಲ್ಲಿ ಈ ಚರ್ಚಾಸ್ಪರ್ಧೆಯನ್ನು ಆಯೋಜಿಸಿತ್ತು.

Vijaya Karnataka Web 14 Sep 2019, 10:44 pm
ಚೆನ್ನೈ: ಪ್ರತಿಷ್ಠಿತ ಅಮೆರಿಕ - ಭಾರತ ಸಂವಿಧಾನಾತ್ಮಕ ಕಾನೂನಿನ ತುಲನಾತ್ಮಕ ಚರ್ಚಾಸ್ಪರ್ಧೆಯಲ್ಲಿ ಬೆಂಗಳೂರಿನ ನ್ಯಾಷನಲ್‌ ಲಾ ಸ್ಕೂಲ್‌ ಆಫ್‌ ಇಂಡಿಯಾ ಯೂನಿವರ್ಸಿಟಿಯ ವಿದ್ಯಾರ್ಥಿನಿ ಉನ್ನತಿ ಆಶೀಶ್‌ ಘಿಯಾ ವಿಜೇತರಾಗಿದ್ದಾರೆ.
Vijaya Karnataka Web Unnati Ashish Ghia


ಚೆನ್ನೈನಲ್ಲಿ ಸೆಪ್ಟಂಬರ್ 14ರಂದು ಶನಿವಾರ ನಡೆದ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ತಮಿಳುನಾಡು, ಕರ್ನಾಟಕ ಮತ್ತು ಕೇರಳ ರಾಜ್ಯಗಳ 16 ಸ್ಪರ್ಧಿಗಳು ಭಾಗವಹಿಸಿದ್ದರು. ಚೆನ್ನೈನಲ್ಲಿನ ಅಮೆರಿಕ ದೂತಾವಾಸ ಕಚೇರಿಯು ಲೊಯೊಲಾ ಕಾಲೇಜಿನ ಸಹಕಾರದಲ್ಲಿ ಈ ಚರ್ಚಾಸ್ಪರ್ಧೆಯನ್ನು ಆಯೋಜಿಸಿತ್ತು.

ಕಾನ್ಸುಲ್‌ ಜನರಲ್‌ ರಾಬಟ್‌ ಬರ್ಜಸ್‌ ಮತ್ತು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಅವರು ಚೆನ್ನೈನ ತಾಜ್‌ ಕೋರಮಂಡಲ್‌ನಲ್ಲಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅಮೆರಿಕಾ ಕಾನ್ಸುಲ್‌ ಜನರಲ್‌ ರಾಬರ್ಟ್‌ ಬರ್ಜಸ್‌, “ವಿಶ್ವದ ಅತ್ಯಂತ ಹಳೆಯ ಮತ್ತು ಅತ್ಯಂತ ದೊಡ್ಡ ಪ್ರಜಾಪ್ರಭುತ್ವಗಳನ್ನು ಹೊಂದಿರುವ ಅಮೆರಿಕ ಮತ್ತು ಭಾರತದ ನಡುವೆ ಗಾಢವಾದ ಸಂಬಂಧವಿದೆ. ದಕ್ಷಿಣ ಭಾರತದಲ್ಲಿ ವಿವಿಧ ಸಹಭಾಗಿಗಳ ಜತೆಗೂಡಿ ಪ್ರಜಾಪ್ರಭುತ್ವದ ಮೌಲ್ಯಗಳು, ಹಕ್ಕುಗಳು ಮತ್ತು ಜವಾಬ್ದಾರಿಗಳ ಬಗ್ಗೆ ಚಿಂತನೆಗೆ ಹಚ್ಚುವ ‘ಅಮೆರಿಕ- ಭಾರತ ಸಂವಿಧಾನಾತ್ಮಕ ಕಾನೂನಿನ ತುಲನಾತ್ಮಕ ಚರ್ಚಾಸ್ಪರ್ಧೆ’ಯನ್ನು ಆಯೋಜಿಸಿರುವುದು ಸಂತಸ ತಂದಿದೆ. ಈ ದಿನದ ಚರ್ಚೆಗಳು ನನಗೆ ಸ್ಫೂರ್ತಿ ನೀಡಿವೆ. ಭಾರತದ ಈ ಭಾವಿ ಪ್ರತಿನಿಧಿಗಳಿಂದ ನಾನು ಪ್ರಭಾವಿತನಾಗಿದ್ದೇನೆ,” ಎಂದು ಹೇಳಿದರು.

ಮುಂಬಯಿ ಹೈಕೋರ್ಟ್‌ನ ಹಿರಿಯ ವಕೀಲ ಅಭಿನವ್‌ ಚಂದ್ರಚೂಡ್‌, ಹಾವರ್ಡ್‌ ಲಾ ಸ್ಕೂಲ್‌ನ ಪ್ರೊ. ಮಾರ್ಕ್‌ ತುಶ್ನೆಟ್‌, ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲೆ ಡಾ. ಮೇನಕಾ ಗುರುಸ್ವಾಮಿ, ಅಮೆರಿಕನ್‌ ಕಾನ್ಸುಲೆಟ್‌ನ ಲಾರೆನ್‌ ಲವ್‌ಲೇಸ್‌ ಚರ್ಚಾ ಸ್ಪರ್ಧೆಯ ತೀರ್ಪುಗಾರರಾಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ