ಆ್ಯಪ್ನಗರ

ನಿಷೇಧಿತ ಸಂಘಟನೆಗೆ ತೃಣಮೂಲ ಕಾಂಗ್ರೆಸ್ ಹಣ: ತನಿಖೆಗೆ ಬಾಂಗ್ಲಾದೇಶ ಒತ್ತಾಯ

ಬಾಂಗ್ಲಾದೇಶದಲ್ಲಿ ನಿಷೇಧಿಸಲಾದ ಮುಸ್ಲಿಂ ಮೂಲಭೂತವಾದಿ ಜಮಾತೆ ಇಸ್ಲಾಮಿ ಸಂಘಟನೆಗೆ ಭಾರೀ ಮೊತ್ತದ ಹಣ ಸರಬರಾಜು ಮಾಡುತ್ತಿರುವ ಬಗ್ಗೆ ತೃಣಮೂಲ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಾಂಗ್ಲಾದೇಶದ ವಿದೇಶಾಂಗ ಸಚಿವ ಅಬುಲ್ ಹಸನ್ ಮಹಮೂದ್ ಆಲಿ ಭಾರತ ಸರಕಾರವನ್ನು 4 ವರ್ಷಗಳ ಹಿಂದೆಯೇ ಒತ್ತಾಯಿಸಿದ್ದರು.

Vijaya Karnataka Web 18 Jun 2019, 5:55 pm
ಕೋಲ್ಕತ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಅಕ್ರಮ ಬಾಂಗ್ಲಾ ವಲಸಿಗರು ಮತ್ತು ಮುಸ್ಲಿಂ ಮೂಲಭೂತವಾದಿ ಸಂಘಟನೆಗಳನ್ನು ಬೆಂಬಲಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪುಷ್ಟಿ ನೀಡುವಂತಹ ಘಟನೆಗಳು ನಡೆದಿವೆ.
Vijaya Karnataka Web Mamata Banerjee


ತೃಣಮೂಲ ಕಾಂಗ್ರೆಸ್ ತನ್ನ ರಾಜಕೀಯ ಹಿತಾಸಕ್ತಿಗಾಗಿ ದೇಶದ ಹಿತಕ್ಕೆ ವಿರುದ್ಧವಾಗಿ ವರ್ತಿಸುತ್ತಿದೆ ಎಂದು ಬಿಜೆಪಿ ಪದೇ ಪದೇ ಆರೋಪಿಸುತ್ತಿದ್ದು, ಬಂಗಾಳದಲ್ಲಿ ಓಲೈಕೆ ರಾಜಕಾರಣದ ವಿರುದ್ಧ ಸಮರ ಸಾರಿದೆ. ಬಿಜೆಪಿ ಆರೋಪಕ್ಕೆ ಪೂರಕವೆಂಬಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದಲ್ಲಿ ದುರ್ಗಾಪೂಜೆಗೆ ನಿಷೇಧ ಹೇರುವುದು, ಜೈ ಶ್ರೀರಾಮ್ ಘೋಷಣೆ ಕೂಗಿದವರನ್ನು ಬಂಧಿಸುವುದು ಮುಂತಾದ ವಿಪರೀತ ಕ್ರಮಗಳನ್ನು ಕೈಗೊಂಡಿರುವ ಘಟನೆಗಳು ಇತ್ತೀಚಿನ ಲೋಕಸಭಾ ಚುನಾವಣೆ ವೇಳೆ ನಡೆದಿವೆ.

ಆದರೆ ತೃಣಮೂಲ ಕಾಂಗ್ರೆಸ್‌ ವಿರುದ್ಧ ಬಾಂಗ್ಲಾದೇಶ ಸರಕಾರವೂ ನಾಲ್ಕು ವರ್ಷಗಳ ಹಿಂದೆಯೇ ಆರೋಪ ಮಾಡಿರುವುದು ಬೆಳಕಿಗೆ ಬಂದಿದೆ.

ಬಾಂಗ್ಲಾದೇಶದಲ್ಲಿ ನಿಷೇಧಿಸಲಾದ ಮುಸ್ಲಿಂ ಮೂಲಭೂತವಾದಿ ಜಮಾತೆ ಇಸ್ಲಾಮಿ ಸಂಘಟನೆಗೆ ಭಾರೀ ಮೊತ್ತದ ಹಣ ಸರಬರಾಜು ಮಾಡುತ್ತಿರುವ ಬಗ್ಗೆ ತೃಣಮೂಲ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಾಂಗ್ಲಾದೇಶದ ವಿದೇಶಾಂಗ ಸಚಿವ ಅಬುಲ್ ಹಸನ್ ಮಹಮೂದ್ ಆಲಿ ಭಾರತ ಸರಕಾರವನ್ನು 4 ವರ್ಷಗಳ ಹಿಂದೆಯೇ ಒತ್ತಾಯಿಸಿದ್ದರು.

ನರೇಂದ್ರ ಮೋದಿ ನೇತೃತ್ವದ ಹಿಂದಿನ ಸರಕಾರದ ಅವಧಿಯಲ್ಲಿ ಭಾರತ-ಬಾಂಗ್ಲಾದೇಶ ಜಂಟಿ ಸಮಾಲೋಚನಾ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳಲು ಹೊಸದಿಲ್ಲಿಗೆ ಆಗಮಿಸಿದ್ದ ಬಾಂಗ್ಲಾ ವಿದೇಶಾಂಗ ಸಚಿವರು ಆಗಿನ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಈ ಕುರಿತು ಒತ್ತಾಯಿಸಿದ್ದರು.

ಈ ವಿಷಯವನ್ನು ಗಲ್ಫ್‌ ನ್ಯೂಸ್‌ ಡಾಟ್‌ ಕಾಮ್ ಜಾಲತಾಣ 2014ರಲ್ಲೇ ವರದಿ ಮಾಡಿತ್ತು.

'ಬಾಂಗ್ಲಾದೇಶ ವಿದೇಶಾಂಗ ಸಚಿವರು ಮಾಡಿದ ಆರೋಪಗಳು ಭಾರತದ ಆಂತರಿಕ ಭದ್ರತೆ ವಿಚಾರದಲ್ಲಿ ತೀವ್ರ ಕಳವಳ ಹುಟ್ಟಿಸಿದೆ. ಬಾಂಗ್ಲಾದೇಶದಲ್ಲಿ ಅಡಗಿಕೊಂಡಿರುವ ನಿಷೇಧಿತ ಸಂಘಟನೆ ಮುಖಂಡರ ವಿವರ ನೀಡುವಂತೆ ಭಾರತ ಸರಕಾರ ಕೋರಿದೆ' ಎಂದು ಪ್ರಧಾನಿ ಕಚೇರಿ ಮೂಲಗಳು ತಿಳಿಸಿದ್ದವು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ