ಆ್ಯಪ್ನಗರ

ಲಾಕ್‌ಡೌನ್ ತೆರವು ಘೋಷಣೆಯಲ್ಲಿ ಪಾರದರ್ಶಕತೆ ಇರಲಿ: ರಾಹುಲ್ ಆಗ್ರಹ!

ವಿಡಿಯೋ ಕಾನ್ಫರೆನ್ಸ್ ಮೂಲಕ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈ ಬಾರಿ ಯಾವುದೇ ಗೊಂದಲಗಳಿಲ್ಲದೇ ಲಾಕ್‌ಡೌನ್ ತೆರವು ಘೋಷಣೆ ವೇಳೆ ಕೇಂದ್ರ ಸರ್ಕಾರ ಪಾರ್ದರ್ಶಕವಾಗಿ ವರ್ತಿಸಲಿ ಎಂದು ಆಗ್ರಹಿಸಿದ್ದಾರೆ.

Vijaya Karnataka Web 8 May 2020, 6:14 pm
ನವದೆಹಲಿ: ಇದೇ ಮೇ.17 ರಂದು ಮೂರನೇ ಹಂತದ ಲಾಕ್‌ಡೌನ್ ಮುಕ್ತಾಯವಾಗಲಿದ್ದು, ಈ ವೇಳೆ ಕೇಂದ್ರ ಸರ್ಕಾರ ಪಾರದರ್ಶಕವಾಗಿ ವರ್ತಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
Vijaya Karnataka Web Rahul Gandhi
ರಾಹುಲ್ ಗಾಂಧಿ


ವಿಡಿಯೋ ಕಾನ್ಫರೆನ್ಸ್ ಮೂಲಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಈ ಬಾರಿ ಯಾವುದೇ ಗೊಂದಲಗಳಿಲ್ಲದೇ ಲಾಕ್‌ಡೌನ್ ತೆರವು ಘೋಷಣೆ ವೇಳೆ ಕೇಂದ್ರ ಸರ್ಕಾರ ಪಾರದರ್ಶಕತೆ ತೋರಲಿ ಎಂದು ಒತ್ತಾಯಿಸಿದ್ದಾರೆ.


ವಾಣಿಜ್ಯ ಚಟುವಟಿಕೆಗಳನ್ನು ಮರಳಿ ಆರಂಭಿಸುವ ಕುರಿತು ಸರ್ಕಾರ ಸ್ಪಷ್ಟ ನಿರ್ಧಾರಗಳನ್ನು ಕೈಗೊಳ್ಳಬೇಕಿದ್ದು, ಹಂತ ಹಂತವಗಿ ವಾಣಿಜ್ಯ ಚಟುವಟಿಕೆಗಳಿಗೆ ಉತ್ತೇಜನ ನೀಡುವುದಾದರೆ ಅವುಗಳ ಕುರಿತು ಜನತೆಗೆ ಸರ್ಕಾರ ಸೂಕ್ತ ಮಾಹಿತಿ ನೀಡಬೇಕು ಎಂದು ರಾಹುಲ್ ಅಭಿಪ್ರಾಯಪಟ್ಟಿದ್ದಾರೆ.

ರಾಹುಲ್ ಜೊತೆಗಿನ ಸಂವಾದದಲ್ಲಿ ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಹೇಳಿದ್ದಿಷ್ಟು..!

ಲಾಕ್‌ಡೌನ್ ಘೋಷಣೆಯಿಂದಾಗಿ ಲಕ್ಷಾಂತರ ಜನ ಸಂಕಷ್ಟಕ್ಕೆ ಸಿಲುಕಿದ್ದು, ಇವರಿಗೆ ಪರಿಹಾರ ನೀಡುವ ಅವಶ್ಯಕತೆ ಇದೆ. ಅಲ್ಲದೇ ಈ ರೀತಿಯ ಏಕಾಏಕಿ ನಿರ್ಣಯಗಳಿಂದ ಜನರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಸರ್ಕಾರ ಸೂಕ್ತ ಪರಿಹಾರೋಪಾಯಗಳನ್ನು ಕಂಡುಹಿಡಯಬೇಕಿದೆ ಎಂದೂ ರಾಹುಲ್ ಆಗ್ರಹಿಸಿದರು.


ದೇಶದ ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ಆರ್ಥಿಕ ಸಹಾಯದ ಅವಶ್ಯಕತೆಯಿದ್ದು, ಮೋದಿ ಸರ್ಕಾರ ಈ ಕ್ಷೇತ್ರಕ್ಕೆ ಆರ್ಥಿಕ ಪ್ಯಾಕೇಜ್ ಘೋಷಿಸಬೇಕಿದೆ. ಅಲ್ಲದೇ ಬಡವರ್ಗಕ್ಕೆ ಹೆಚ್ಚಿನ ಹಣಕಾಸು ನೆರವು ಒದಗಿಸಬೇಕು ಎಂದು ರಾಹುಲ್ ಅಭಿಪ್ರಾಯಪಟ್ಟಿದ್ದಾರೆ.


ಪೆಟ್ರೋಲ್, ಡೀಸೆಲ್ ದರ ಹೆಚ್ಚಳ; ರಾಹುಲ್ ಗಾಂಧಿ ಕಿಡಿ

ಇದೇ ವೇಳೆ ಕೊರೊನಾ ವೈರಸ್ ಹಾವಳಿ ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಹೆಚ್ಚಿನ ಸಂವಹನದ ಅವಶ್ಯಕತೆಯಿದ್ದು, ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೆ ಇನ್ನೂ ಹೆಚ್ಚಿನ ಸಹಕಾರ ನೀಡಬೇಕು ಎಂದು ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ