ಆ್ಯಪ್ನಗರ

ಮಕ್ಕಳ ಕಳ್ಳರೆಂದು ಭಾವಿಸಿ ಗುಂಪಿನಿಂದ ಥಳಿತ: ಭಿಕ್ಷುಕಿ ಸಾವು

ಮಕ್ಕಳ ಕಳ್ಳರೆಂದು ಭಾವಿಸಿ ಭಿಕ್ಷುಕರ ಗುಂಪೊಂದನ್ನು ಸಾರ್ವಜನಿಕರು ಅಟ್ಟಾಡಿಸಿ ಹೊಡೆದಿದ್ದು, ತೀವ್ರ ಗಾಯಗೊಂಡ ಭಿಕ್ಷುಕಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಪ್ರಕರಣ ಗುಜರಾತ್‌ನ ವಡಾಜ್‌ನಲ್ಲಿ ವರದಿಯಾಗಿದೆ.

TNN 26 Jun 2018, 8:59 pm
ಅಹಮದಾಬಾದ್: ಮಕ್ಕಳ ಕಳ್ಳರೆಂದು ಭಾವಿಸಿ ಭಿಕ್ಷುಕರ ಗುಂಪೊಂದನ್ನು ಸಾರ್ವಜನಿಕರು ಅಟ್ಟಾಡಿಸಿ ಹೊಡೆದಿದ್ದು, ತೀವ್ರ ಗಾಯಗೊಂಡ ಭಿಕ್ಷುಕಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಪ್ರಕರಣ ಗುಜರಾತ್‌ನ ವಡಾಜ್‌ನಲ್ಲಿ ವರದಿಯಾಗಿದೆ.
Vijaya Karnataka Web image (2)


ಮಂಗಳವಾರ ಸಂಜೆ ವಡಾಜ್ ಪ್ರದೇಶಕ್ಕೆ ಭಿಕ್ಷೆ ಬೇಡಲು ಗುಂಪಿನಲ್ಲಿ ತೆರಳಿದ್ದ ಮೆಲ್ದಿ ಮಾತಾ ನಾ ಛಾಪ್ರಾ ಪ್ರದೇಶದ 45 ವರ್ಷದ ಭಿಕ್ಷುಕಿ ಶಾಂತಾದೇವಿ ನಾಥ್ ಎಂಬಾಕೆ ಸಾರ್ವಜನಿಕರ ಆಕ್ರೋಶಕ್ಕೆ ಬಲಿಯಾದವಳು.

ಗುಜರಾತ್‌ನ ಕೆಲವು ಪ್ರದೇಶಗಳಲ್ಲಿ ಮಕ್ಕಳನ್ನು ಅಪಹರಿಸುವ ಗುಂಪು ಸಕ್ರೀಯವಾಗಿದೆ ಎಂಬ ಸಂದೇಶವೊಂದು ಸಾಮಾಜಿಕ ತಾಣಗಳಲ್ಲಿ ಹರಿದಾಡಿದ್ದು ಸಾರ್ವಜನಿಕರ ಕೃತ್ಯಕ್ಕೆ ಕಾರಣವಾಗಿದೆ. ಭಿಕ್ಷುಕರನ್ನು ಕಂಡ ಕೂಡಲೇ ಜನರ ಗುಂಪು ಅವರ ಮೇಲೆ ಹಲ್ಲೆ ನಡೆಸಿದೆ. ನಂತರ ಕೋಲು, ದೊಣ್ಣೆಯಿಂದ ಹೊಡೆದಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಶಾಂತಾದೇವಿ ತೀವ್ರ ಗಾಯಗೊಂಡು ಕುಸಿದು ಬಿದ್ದಿದ್ದಳು.

ತಕ್ಷಣವೇ ಆಕೆ ಮತ್ತು ಗಾಯಗೊಂಡಿದ್ದ ಇತರ ಮೂವರು ಭಿಕ್ಷುಕಿಯರನ್ನು ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು, ಆಕೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ