ಆ್ಯಪ್ನಗರ

ಐಎಂಎ ವಂಚನೆ: 209 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಇ.ಡಿ

ಕರ್ನಾಟಕದಲ್ಲಿ ಸಾವಿರಾರು ಮಂದಿಗೆ ಕೋಟ್ಯಂತರ ರೂ ವಂಚಿಸಿರುವ ಬೆಂಗಳೂರಿನ ಐ ಮಾನಿಟರಿ ಅಡ್ವೈಸರೀಸ್ (ಐಎಂಎ) ಹಗರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಐಎಂಎ ಜ್ಯುವೆಲ್ಸ್ ಸಂಸ್ಥೆಯ 197 ಕೋಟಿ ರೂ ಮೌಲ್ಯದ ಸೊತ್ತುಗಳು ಮತ್ತು 12 ಕೋಟಿ ರೂ ಬ್ಯಾಂಕ್ ಠೇವಣಿಗಳನ್ನು ಅಕ್ರಮ ಹಣ ವರ್ಗಾವಣೆ (ಲೇವಾದೇವಿ) ವ್ಯವಹಾರ ತಡೆ ಕಾಯ್ದೆ ಅಡಿಯಲ್ಲಿ ಬೆಂಗಳೂರಿನ ಪ್ರಾದೇಶಿಕ ಕಚೇರಿ ಮುಟ್ಟುಗೋಲು ಹಾಕಿಕೊಂಡಿದೆ.

TNN 28 Jun 2019, 3:33 pm
ಬೆಂಗಳೂರು/ಹೊಸದಿಲ್ಲಿ: ಸಾವಿರಾರು ಠೇವಣಿದಾರರಿಗೆ ಕೋಟ್ಯಂತರ ರೂಪಾಯಿಗಳನ್ನು ವಂಚಿಸಿದ ಬೆಂಗಳೂರಿನ ಐಎಂಎ (ಐ ಮಾನಿಟರಿ ಅಡ್ವೈಸರಿ) ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) 209 ಕೋಟಿ ರೂ ಮೌಲ್ಯದ ಸೊತ್ತುಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.
Vijaya Karnataka Web ED logo


ಅಕ್ರಮ ಹಣ ವರ್ಗಾವಣೆ (ಲೇವಾದೇವಿ) ವ್ಯವಹಾರ ತಡೆ ಕಾಯ್ದೆ ಅಡಿಯಲ್ಲಿ ಐಎಂಎ ಜ್ಯುವೆಲ್ಸ್ ಸಂಸ್ಥೆಯ 197 ಕೋಟಿ ರೂ ಮೌಲ್ಯದ ಸೊತ್ತುಗಳು ಮತ್ತು 12 ಕೋಟಿ ರೂ ಬ್ಯಾಂಕ್ ಠೇವಣಿಗಳನ್ನು ಬೆಂಗಳೂರಿನ ಪ್ರಾದೇಶಿಕ ಕಚೇರಿ ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಇ.ಡಿ ಪ್ರಧಾನ ಕಚೇರಿ ಹೊಸದಿಲ್ಲಿಯಲ್ಲಿ ತಿಳಿಸಿದೆ.

ಒಟ್ಟಾರೆ ಮುಟ್ಟುಗೋಲು ಹಾಕಿಕೊಂಡಿರುವ ಸೊತ್ತಿನ ಮೌಲ್ಯ 209 ಕೋಟಿ ರೂಪಾಯಿಗಳು ಎಂದು ಇ.ಡಿ ಪ್ರಕಟಣೆ ತಿಳಿಸಿದೆ.

ಐಎಂಎ ಗ್ರೂಪ್ ಆಫ್ ಕಂಪನೀಸ್ ವಿರುದ್ಧ ಜಾರಿ ನಿರ್ದೇಶನಾಲಯ ಇತ್ತೀಚೆಗೆ ಪ್ರಕರಣ ದಾಖಲಿಸಿಕೊಂಡಿತ್ತು. ಸಂಸ್ಥೆಯ ಪ್ರವರ್ತಕ ಹಾಗೂ ಆಡಳಿತ ನಿರ್ದೇಶಕ ಮೊಹಮ್ಮದ್ ಮನ್ಸೂರ್ ಖಾನ್ ಹೂಡಿಕದಾರರಿಗೆ 40,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸಿ ತಲೆಮರೆಸಿಕೊಂಡ ಬಳಿಕ ಆತನ ವಿರುದ್ಧ ಇ.ಡಿ ಮನಿ ಲ್ಯಾಂಡರಿಂಗ್ ಕಾಯಿದೆಯಡಿ ಕ್ರಿಮಿನಲ್ ಕೇಸು ದಾಖಲಿಸಿಕೊಂಡಿತ್ತು.

ಕರ್ನಾಟಕ ಸರಕಾರ ಈ ಹಗರಣದ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ