ಆ್ಯಪ್ನಗರ

ಭಯೋತ್ಪಾದಕ ಕೃತ್ಯದಲ್ಲಿ ಸಿಕ್ಕಿಸಲು RSS ಮುಖ್ಯಸ್ಥ ಭಾಗವತ್‌ ವಿರುದ್ಧ ಸಂಚು ರೂಪಿಸಿತ್ತು ಯುಪಿಎ ಸರಕಾರ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಹಿಂದೂ ಭಯೋತ್ಪಾದಕ ಎಂದು ಬಿಂಬಿಸುವ ಉದ್ದೇಶದಿಂದ ಬಾಂಬ್ ಸ್ಪೋಟ ಪ್ರಕರಣದಲ್ಲಿ ಸಿಲುಕಿಸಲು 2014ರಲ್ಲಿ ಯುಪಿಎ ಸರಕಾರ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಮೇಲೆ ಒತ್ತಡ ಹಾಕಿದ್ದರು ಎಂದು ಟೈಮ್ಸ್ ನೌ ಬಹಿರಂಗ ಪಡಿಸಿದೆ.

ಟೈಮ್ಸ್ ಆಫ್ ಇಂಡಿಯಾ 15 Jul 2017, 12:38 pm
ಹೊಸದಿಲ್ಲಿ: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು 'ಹಿಂದೂ ಭಯೋತ್ಪಾದಕ' ಎಂದು ಬಿಂಬಿಸುವ ಉದ್ದೇಶದಿಂದ ಬಾಂಬ್ ಸ್ಪೋಟ ಪ್ರಕರಣದಲ್ಲಿ ಸಿಲುಕಿಸಲು 2014ರಲ್ಲಿ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಮೇಲೆ ಯುಪಿಎ ಸರಕಾರ ಒತ್ತಡ ಹೇರಿತ್ತೆಂದು ಟೈಮ್ಸ್ ನೌ ವರದಿ ಮಾಡಿದೆ.
Vijaya Karnataka Web bhagwat was on upa terror blacklist
ಭಯೋತ್ಪಾದಕ ಕೃತ್ಯದಲ್ಲಿ ಸಿಕ್ಕಿಸಲು RSS ಮುಖ್ಯಸ್ಥ ಭಾಗವತ್‌ ವಿರುದ್ಧ ಸಂಚು ರೂಪಿಸಿತ್ತು ಯುಪಿಎ ಸರಕಾರ


ಅಜ್ಮೀರ್ ಹಾಗೂ ಮಲೆಗಾಂವ್ ಸ್ಪೋಟದ ಬಳಿಕ ಯುಪಿಎ ಸರಕಾರ ಮೊದಲ ಬಾರಿಗೆ ಹಿಂದೂ ಉಗ್ರರು ಎಂಬ ಪದ ಬಳಸಿ, ಇದರಡಿಯಲ್ಲಿ ಭಾಗವತ್ ಅವರನ್ನು ವಿಚಾರಣೆಗೆ ಒಳಪಡಿಸುವಂತೆ ಎನ್‌ಐಎ ಮೇಲೆ ಸಚಿವರೇ ಒತ್ತಡ ಹೇರಿದ್ದರೆನ್ನಲಾಗುತ್ತಿದೆ.

ಅಜ್ಮೀರ್ ಹಾಗೂ ಮಲೆಗಾಂವ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಗವತ್ ಅವರನ್ನು ವಿಚಾರಣೆಗೊಳಪಡಿಸುವಂತೆ ಅಂದಿನ ಗೃಹ ಸಚಿವ ಸುಶೀಲ್ ಕುಮಾರ್ ಶಿಂದೆ ಸೇರಿದಂತೆ ಕೆಲ ಸಚಿವರು ಎನ್‍ಐಎ ಮೇಲೆ ಒತ್ತಡ ತಂದಿದ್ದರು.

'ಬಾಂಬ್ ಸ್ಫೋಟ ನಡೆಸಲು ಭಾಗವತ್ ಅವರೇ ಪ್ರಚೋದಿಸಿದ್ದು,' ಎಂದು ಬಾಂಬ್ ಸ್ಪೋಟದ ಆರೋಪಿ ಸ್ವಾಮಿ ಅಸೀಮಾನಂದ್ ಅವರು 2014 ರ ಫೆಬ್ರವರಿಯಲ್ಲಿ ನಿಯತಕಾಲಿಕವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಹೇಳಿಕೊಂಡಿದ್ದರು.

ಆದರೆ ಯುಪಿಎ ಸರಕಾರದ ಒತ್ತಡಕ್ಕೆ ಮಣಿಯದಿದ್ದ ಎನ್‍ಐಎ, ಭಾಗವತ್ ವಿರುದ್ಧ ಯಾವುದೇ ಸಾಕ್ಷಿ ಇಲ್ಲವೆಂದು ವಿಚಾರಣೆ ನಡೆಸಲು ನಿರಾಕರಿಸಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಬಹಿರಂಗವಾಗಿಯೇ ಮಾಹಿತಿಗಳಿವೆ. ಇನ್ನೂ ಎಲ್ಲಾ ಮಾಹಿತಿಗಳು ಹೊರಗೆ ಬರಬೇಕು ಎಂದು ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ