ಬೆಂಗಳೂರು: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಜನವರಿ 30 ರಂದು ಕೊನೆಯಾಗಲಿದೆ. ಜಮ್ಮು- ಕಾಶ್ಮೀರದ ಶ್ರೀನಗರದಲ್ಲಿ ಸೋಮವಾರ ಬೃಹತ್ ಸಮಾರೋಪ ಸಭೆ ನಡೆಯಲಿದೆ. ಈ ಸಮಾರೋಪ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಜ್ಯ ಕಾಂಗ್ರೆಸ್ ನಾಯಕರೂ ತೆರಳಿದ್ದಾರೆ. ಜಮ್ಮು ಕಾಶ್ಮೀರದ ಶ್ರೀನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಲ್ಲಿಯ ವಾತಾವರಣದ ಬಗ್ಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಶ್ರೀನಗರದ ಹಿಮದ ವಾತಾವರಣ ಬಗ್ಗೆ ವಿಡಿಯೋ ಮಾಡಿರುವ ಡಿಕೆಶಿ ಇದು ಜೀವನದ ಮೊದಲ ಅನುಭವವಾಗಿದೆ ಎಂದು ವಿಡಿಯೋ ಮೂಲಕ ಸಂತಸ ಹಂಚಿಕೊಂಡಿದ್ದಾರೆ. “ಭಾರತ್ ಜೋಡೋ ಯಾತ್ರೆಯ ಸಮಾರೋಪದಲ್ಲಿ ಭಾಗಿಯಾಗಲು ಶ್ರೀನಗರಕ್ಕೆ ಬಂದಿದ್ದೇವೆ. ಜೀವನದ ಮೊದಲನೆ ಅನುಭವವಾಗಿದೆ. ಇಂತಹ ವಾತಾವರಣ ಯಾವತ್ತೂ ನೋಡಿಲ್ಲ ಎಂದಿದ್ದಾರೆ.
ರಾತ್ರಿ 9 ಡಿಗ್ರಿ ಇತ್ತು. ಭಾನುವಾರ ರಾತ್ರಿ ನಮಗೆಲ್ಲಾ ಡಿನ್ನರ್ ಆಯೋಜನೆ ಮಾಡಲಾಗಿತ್ತು. ನಾನು ಸ್ವಿಜ್ಜರ್ ಲ್ಯಾಂಡ್ ಹೋಗಿದ್ದೆ. ಆದರೆ ಅದಕ್ಕಿಂತಲೂ ಉತ್ತಮವಾದ ಅನುಭವ ಕಾಶ್ಮೀರವಾಗಿದೆ. ಮಳೆ ಬಿದ್ದ ಹಾಗೆ ಹಿಮ ಸುರಿಯುತ್ತಿದೆ ಎಂದು ಸೆಲ್ಫೀ ವಿಡಿಯೋ ಮಾಡಿ ಸ್ಥಳದ ವಾತಾವರಣ ಹೇಗಿದೆ ಎಂದು ವಿವರಿಸಿದ್ದಾರೆ.
150 ದಿನಗಳ ಕಾಲ ನಡೆದ ಭಾರತ್ ಜೋಡೋ ಯಾತ್ರೆ ಸೋಮವಾರ ಸಮಾರೋಪಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಶ್ರೀನಗರದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಮತ್ತಿತರ ರಾಜ್ಯ ನಾಯಕರು ಭಾಗಿಯಾಗಲಿದ್ದಾರೆ.
ಸೆಪ್ಟಂಬರ್ 7 ರಿಂದ ತಮಿಳುನಾಡಿದ ಕನ್ಯಾಕುಮಾರಿಯಲ್ಲಿ ಭಾರತ್ ಜೋಡೋ ಯಾತ್ರೆ ಆರಂಭಗೊಂಡಿತ್ತು. 150 ದಿನಗಳ ಕಾಲ ಸುದೀರ್ಘ ನಡೆಯ ಮೂಲಕ 12 ರಾಜ್ಯ ಎರಡು ಕೇಂದ್ರಾಡಳಿತ ಪ್ರದೇಶಗಳ ಮೂಲಕ ಈ ಯಾತ್ರೆ ಸಾಗಿದೆ. ಕರ್ನಾಟಕದಲ್ಲೂ 21 ದಿನಗಳ ಕಾಲ ಯಾತ್ರೆಯಲ್ಲಿ ರಾಹುಲ್ ಗಾಂಧಿ ಹೆಜ್ಜೆ ಹಾಕಿದ್ದಾರೆ. ಕೇರಳ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಹರಿಯಾಣ, ಉತ್ತರ ಪ್ರದೇಶ, ದೆಹಲಿ, ಪಂಜಾಬ್ ಮೂಲಕ ಕೊನೆಗೆ ಜಮ್ಮು ಹಾಗೂ ಕಾಶ್ಮೀರದಲ್ಲಿ ಈ ಯಾತ್ರೆ ಸಮಾರೋಪಗೊಳ್ಳುತ್ತಿದೆ.
ರಾತ್ರಿ 9 ಡಿಗ್ರಿ ಇತ್ತು. ಭಾನುವಾರ ರಾತ್ರಿ ನಮಗೆಲ್ಲಾ ಡಿನ್ನರ್ ಆಯೋಜನೆ ಮಾಡಲಾಗಿತ್ತು. ನಾನು ಸ್ವಿಜ್ಜರ್ ಲ್ಯಾಂಡ್ ಹೋಗಿದ್ದೆ. ಆದರೆ ಅದಕ್ಕಿಂತಲೂ ಉತ್ತಮವಾದ ಅನುಭವ ಕಾಶ್ಮೀರವಾಗಿದೆ. ಮಳೆ ಬಿದ್ದ ಹಾಗೆ ಹಿಮ ಸುರಿಯುತ್ತಿದೆ ಎಂದು ಸೆಲ್ಫೀ ವಿಡಿಯೋ ಮಾಡಿ ಸ್ಥಳದ ವಾತಾವರಣ ಹೇಗಿದೆ ಎಂದು ವಿವರಿಸಿದ್ದಾರೆ.
150 ದಿನಗಳ ಕಾಲ ನಡೆದ ಭಾರತ್ ಜೋಡೋ ಯಾತ್ರೆ ಸೋಮವಾರ ಸಮಾರೋಪಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಶ್ರೀನಗರದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಮತ್ತಿತರ ರಾಜ್ಯ ನಾಯಕರು ಭಾಗಿಯಾಗಲಿದ್ದಾರೆ.
ಸೆಪ್ಟಂಬರ್ 7 ರಿಂದ ತಮಿಳುನಾಡಿದ ಕನ್ಯಾಕುಮಾರಿಯಲ್ಲಿ ಭಾರತ್ ಜೋಡೋ ಯಾತ್ರೆ ಆರಂಭಗೊಂಡಿತ್ತು. 150 ದಿನಗಳ ಕಾಲ ಸುದೀರ್ಘ ನಡೆಯ ಮೂಲಕ 12 ರಾಜ್ಯ ಎರಡು ಕೇಂದ್ರಾಡಳಿತ ಪ್ರದೇಶಗಳ ಮೂಲಕ ಈ ಯಾತ್ರೆ ಸಾಗಿದೆ. ಕರ್ನಾಟಕದಲ್ಲೂ 21 ದಿನಗಳ ಕಾಲ ಯಾತ್ರೆಯಲ್ಲಿ ರಾಹುಲ್ ಗಾಂಧಿ ಹೆಜ್ಜೆ ಹಾಕಿದ್ದಾರೆ. ಕೇರಳ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಹರಿಯಾಣ, ಉತ್ತರ ಪ್ರದೇಶ, ದೆಹಲಿ, ಪಂಜಾಬ್ ಮೂಲಕ ಕೊನೆಗೆ ಜಮ್ಮು ಹಾಗೂ ಕಾಶ್ಮೀರದಲ್ಲಿ ಈ ಯಾತ್ರೆ ಸಮಾರೋಪಗೊಳ್ಳುತ್ತಿದೆ.