ಆ್ಯಪ್ನಗರ

Bharat Jodo Yatra: ಐಕ್ಯತಾ ಯಾತ್ರೆ ಸಮಾರೋಪಕ್ಕೆ ಸೂಕ್ತ ಭದ್ರತೆ ನೀಡಿ: ಅಮಿತ್ ಶಾಗೆ ಖರ್ಗೆ ಪತ್ರ

Bharat Jodo Yatra in Jammu and Kashmir: ರಾಹುಲ್ ಗಾಂಧಿ ಅವರು ಸೆ. 7ರಂದು ಆರಂಭಿಸಿದ್ದ ಭಾರತ್ ಜೋಡೋ ಯಾತ್ರೆಯು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಜ. 30ರಂದು ಅಂತ್ಯಗೊಳ್ಳಲಿದೆ. ಯಾತ್ರೆಯ ವೇಳೆ ಉಂಟಾದ ಭದ್ರತಾ ಲೋಪಗಳ ಬಗ್ಗೆ ಅಮಿತ್ ಶಾ ಅವರಿಗೆ ಖರ್ಗೆ ಪತ್ರ ಬರೆದಿದ್ದಾರೆ.

Edited byಅಮಿತ್ ಎಂ.ಎಸ್ | Vijaya Karnataka 29 Jan 2023, 9:43 am

ಹೈಲೈಟ್ಸ್‌:

  • ಶ್ರೀನಗರದಲ್ಲಿ ಭಾರತ್ ಜೋಡೋ ಯಾತ್ರೆಯ ಸಮಾರೋಪಕ್ಕೆ ಕಾಂಗ್ರೆಸ್ ಸಕಲ ಸಿದ್ಧತೆ
  • ರಾಹುಲ್ ಗಾಂಧಿ ನೇತೃತ್ವದ ಯಾತ್ರೆಗೆ ಸೂಕ್ತ ಭದ್ರತೆ ಒದಗಿಸುವಂತೆ ಅಮಿತ್ ಶಾಗೆ ಪತ್ರ
  • ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ, ಸೂಕ್ತ ಭದ್ರತೆ ಒದಗಿಸಲು ಸೂಚಿಸಿ ಎಂದು ಖರ್ಗೆ ಮನವಿ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Mallikarjun Kharge
ಶ್ರೀನಗರ/ಹೊಸದಿಲ್ಲಿ: ಭದ್ರತಾ ಲೋಪದ ಕಾರಣಕ್ಕೆ ಶುಕ್ರವಾರ ಸ್ಥಗಿತಗೊಂಡಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮುನ್ನಡೆಸುತ್ತಿರುವ 'ಭಾರತ ಐಕ್ಯತಾ ಯಾತ್ರೆ' ಶನಿವಾರ ಯಶಸ್ವಿಯಾಗಿ ಮುಂದುವರಿಯಿತು. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೊರದಿಂದ ರಾಹುಲ್‌ ಅವರ ಪಾದಯಾತ್ರೆ ಆರಂಭವಾಯಿತು. ಇದಕ್ಕೂ ಮೊದಲು 2019ರ ಉಗ್ರರ ದಾಳಿಯಲ್ಲಿ ಹುತಾತ್ಮರಾಗಿದ್ದ 40 ಸಿಆರ್‌ಪಿಎಫ್‌ ಯೋಧರಿಗೆ ರಾಹುಲ್‌ ಗಾಂಧಿ ಪುಷ್ಪ ನಮನ ಸಲ್ಲಿಸಿದರು.
ಯಾತ್ರೆಗೆ ನೀಡಲಾಗಿದ್ದ ಭದ್ರತೆಯನ್ನು ಉದ್ದೇಶಪೂರ್ವಕವಾಗಿ ಕಡಿತಗೊಳಿಸಲಾಗಿದೆ. ಜಿಲ್ಲಾಡಳಿತ ಸೂಕ್ತ ಭದ್ರತೆ ನೀಡಿಲ್ಲ ಎಂಬ ಕಾಂಗ್ರೆಸ್‌ ಆರೋಪದ ಹಿನ್ನೆಲೆಯಲ್ಲಿ ಶನಿವಾರ ಐಕ್ಯತಾ ಯಾತ್ರೆಗೆ ಹೆಚ್ಚುವರಿ ಭದ್ರತೆ ಒದಗಿಸಲಾಯಿತು. ಪೊಲೀಸರ ಜತೆ ಸಿಆರ್‌ಪಿಎಫ್‌, ರಾಷ್ಟ್ರೀಯ ರೈಫಲ್ಸ್‌ ಪಡೆಯ ಯೋಧರನ್ನು ಭದ್ರತೆಗೆ ನಿಯೋಜನೆ ಮಾಡಲಾಯಿತು.
Bharat Jodo Yatra: ಪೊಲೀಸರೇ ನಾಪತ್ತೆ! ಯಾತ್ರೆ ಮೊಟಕುಗೊಳಿಸಿದ ರಾಹುಲ್ ಗಾಂಧಿ ಕಿಡಿ

ಯಾತ್ರೆಯಲ್ಲಿ ಪಾಲ್ಗೊಂಡ ಮೆಹಬೂಬಾ ಮುಫ್ತಿ
ಅವಂತಿಪೊರದಿಂದ ಆರಂಭವಾದ ಯಾತ್ರೆಯಲ್ಲಿ ರಾಹುಲ್‌ ಜತೆ ಪೀಪಲ್ಸ್‌ ಡೆಮಾಕ್ರೆಟಿಕ್‌ ಪಕ್ಷದ ಮುಖ್ಯಸ್ಥೆ ಹಾಗೂ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಪಾಲ್ಗೊಂಡರು. ಮುಫ್ತಿ ಮಗಳು ಇಲ್ತಿಜಾ, ತಾಯಿ ಸಹ ಯಾತ್ರೆಯಲ್ಲಿ ಲೇಥ್‌ಪುರದವರೆಗೂ ಹೆಜ್ಜೆ ಹಾಕಿದರು.

ಈ ವೇಳೆ ಮಾತನಾಡಿದ ಮೆಹಬೂಬಾ ಮುಫ್ತಿ, ''ರಾಹುಲ್‌ ಗಾಂಧಿ ಯಾತ್ರೆ ಕಾಶ್ಮೀರಿ ಜನತೆಗೆ ಹೊಸ ಭರವಸೆ ಮೂಡಿಸಿದೆ. 2019ರ ಬಳಿಕ ಇದೇ ಮೊದಲ ಬಾರಿಗೆ ಜನರು ಧೈರ್ಯವಾಗಿ ಮನೆಯಿಂದ ಹೊರಗೆ ಬಂದು ಯಾತ್ರೆಗೆ ಬೆಂಬಲಿಸಿದ್ದಾರೆ. ರಾಜಕೀಯ ಬದಲಾವಣೆಗೆ ಯಾತ್ರೆ ಕಾರಣವಾಗಲಿದೆ,'' ಎಂದರು.
Rahul Gandhi: ಭಾರತ್ ಜೋಡೋ ಯಾತ್ರೆ ಬಳಿಕ ಕರ್ನಾಟಕದತ್ತ ರಾಹುಲ್ ಗಾಂಧಿ ಚಿತ್ತ!

ಅಮಿತ್‌ ಶಾಗೆ ಖರ್ಗೆ ಪತ್ರ
ಶುಕ್ರವಾರ ಭಾರತ್ ಜೋಡೋ ಯಾತ್ರೆಯಲ್ಲಿ ಉಂಟಾಗಿದ್ದ ಭದ್ರತಾ ವೈಫಲ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗೃಹ ಸಚಿವ ಅಮಿತ್‌ ಶಾಗೆ ಪತ್ರ ಬರೆದಿದ್ದು, ''ಐಕ್ಯತಾ ಯಾತ್ರೆಯ ಸಮಾರೋಪದ ದಿನ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಖಡಕ್‌ ನಿರ್ದೇಶನ ನೀಡಿ. ಭದ್ರತೆ ವಿಚಾರದಲ್ಲಿ ಉಂಟಾಗಿರುವ ಲೋಪ ಸರಿಪಡಿಸಲು ಖುದ್ದು ಮಧ್ಯಪ್ರವೇಶಿಸಿ ,'' ಎಂದು ಒತ್ತಾಯಿಸಿದ್ದಾರೆ.
Bharat Jodo Yatra: ರಾಜ್ಯ ಸ್ಥಾನಮಾನ ವಾಪಸ್; ಕಾಶ್ಮೀರ ಪಂಡಿತರಿಗೂ ರಾಹುಲ್ ಗಾಂಧಿ ಭರವಸೆ!

ಸೆ.7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾದ ರಾಹುಲ್‌ ಗಾಂಧಿ ನೇತೃತ್ವದ ಯಾತ್ರೆ ಕೊನೆಯ ಚರಣದಲ್ಲಿದೆ. ಇದೇ 30 (ಸೋಮವಾರ) ರಂದು ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಸಂಪನ್ನಗೊಳ್ಳಲಿದೆ. ಸುಮಾರು 145 ದಿನಗಳು, 3,500 ಕಿಮೀ ದೂರದ ನಡಿಗೆ ಶ್ರೀನಗರದಲ್ಲಿ ಅಂತ್ಯಗೊಳ್ಳಲಿದೆ. ಅದಕ್ಕೂ ಮುನ್ನ ಭಾನುವಾರ, ನಗರದ ಲಾಲ್ ಚೌಕದಲ್ಲಿ ರಾಹುಲ್ ಗಾಂಧಿ ರಾಷ್ಟ್ರಧ್ವಜ ಹಾರಿಸುವ ಮೂಲಕ ತಮ್ಮ ಯಾತ್ರೆಯ ಸಮಾರೋಪ ಮಾಡಲಿದ್ದಾರೆ.
ಲೇಖಕರ ಬಗ್ಗೆ
ಅಮಿತ್ ಎಂ.ಎಸ್
ವಿಜಯ ಕರ್ನಾಟಕದ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತ. 2009ರಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದಾರೆ. ದಿನಪತ್ರಿಕೆಗಳು ಮತ್ತು ವೆಬ್‌ ಪೋರ್ಟಲ್‌ಗಳಲ್ಲಿ ವರದಿಗಾರಿಕೆ, ಸಿನಿಮಾ ವರದಿಗಾರಿಕೆ, ಡೆಸ್ಕ್ ಹಾಗೂ ಜಿಲ್ಲಾ ಕರೆಸ್ಪಾಂಡೆಂಟ್ ಆಗಿ ಕೆಲಸ ಮಾಡಿದ ಅನುಭವ ಇವರಿಗಿದೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳು ಪ್ರಮುಖ ಆಸಕ್ತಿಯ ವಿಭಾಗಗಳು. ಮಾನವಾಸಕ್ತಿಯ ಹಾಗೂ ಸ್ಫೂರ್ತಿದಾಯಕ ಕಥನಗಳನ್ನು ನಿರೂಪಿಸುವುದು ವೃತ್ತಿಯಲ್ಲಿನ ನೆಚ್ಚಿನ ಸಂಗತಿ. ಪ್ರವಾಸ, ಕ್ರಿಕೆಟ್, ಓದು, ಕೃಷಿ ಇತರೆ ಇವರ ಆಸಕ್ತಿ ಮತ್ತು ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ