ಆ್ಯಪ್ನಗರ

ಭೀಮಾ-ಕೋರೆಗಾಂವ್‌ ಪ್ರಕರಣ: ತೇಲ್ತುಂಬ್ಡೆ, ನವಲಾಖಾಗೆ ಶರಣಾಗಲು ಸುಪ್ರೀಂ ಸೂಚನೆ

ತೇಲ್ತುಂಬ್ಡೆ ಮತ್ತು ನವಲಾಖಾ ಇಬ್ಬರಿಗೂ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ವಾದಿಸಿದರು. ಆರೋಪಿಗಳ ಪರವಾಗಿ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ವಾದಿಸಿದರು.

Agencies 17 Mar 2020, 1:41 pm

ಹೊಸದಿಲ್ಲಿ: ಮಹಾರಾಷ್ಟ್ರದ ಭೀಮಾ-ಕೋರೆಗಾಂವ್‌ ಹಿಂಸಾಚಾರ ಪ್ರಕರಣಕ್ಕೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಸಾಮಾಜಿಕ ಹೋರಾಟಗಾರರಾದ ಆನಂದ್‌ ತೇಲ್ತುಂಬ್ಡೆ ಮತ್ತು ಗೌತಮ್‌ ನವಲಾಖಾ ಅವರಿಗೆ ಮೂರು ವಾರಗಳ ಒಳಗೆ ಶರಣಾಗುವಂತೆ ಸುಪ್ರೀಂ ಕೋರ್ಟ್‌ ಸೋಮವಾರ ಆದೇಶಿಸಿದೆ.
Vijaya Karnataka Web Anand Teltumbe Goutham Navlekha


ಇಬ್ಬರೂ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಳ್ಳಿಹಾಕಿದ ನ್ಯಾಯಮೂರ್ತಿಗಳಾದ ಅರುಣ್‌ ಮಿಶ್ರಾ ಮತ್ತು ಎಂ.ಆರ್‌.ಶಾ ಅವರಿದ್ದ ದ್ವಿಸದಸ್ಯ ಪೀಠವು, ಕಾನೂನುಬಾಹಿರ ಚಟುವಟಿಕೆ ತಡೆ ಕಾಯಿದೆ (ಯುಎಪಿಎ) ಅಡಿ ದಾಖಲಾಗಿರುವ ಪ್ರಕರಣ ಕೈ ಬಿಡಲು ಯಾವುದೇ ಸಕಾರಣಗಳಿಲ್ಲ ಎಂದು ಅಭಿಪ್ರಾಯಪಟ್ಟಿತು.

ಭೀಮಾ-ಕೋರೆಗಾಂವ್‌ ಪ್ರಕರಣ ಎನ್‌ಐಎಗೆ, ಮಹಾರಾಷ್ಟ್ರ ಜೊತೆ ಕೇಂದ್ರದ ಸಂಘರ್ಷ

"ಕಳೆದ ಒಂದೂವರೆ ವರ್ಷದಿಂದ ಇಬ್ಬರೂ ಬಂಧನದಿಂದ ರಕ್ಷಣೆ ಪಡೆದಿದ್ದಾರೆ. ಹೀಗಾಗಿ ಇನ್ನು ಮೂರು ವಾರ ಒಳಗೆ ತನಿಖಾಧಿಕಾರಿಗಳ ಎದುರು ಶರಣಾಗಬೇಕು ಮತ್ತು ತಮ್ಮ ಪಾಸ್‌ಪೋರ್ಟ್‌ಗಳನ್ನೂ ತನಿಖಾಧಿಕಾರಿಗಳಿಗೆ ಒಪ್ಪಿಸಬೇಕು,'' ಎಂದು ಪೀಠವು ಆದೇಶಿಸಿತು.

ನವಲಾಖ ಕೇಸ್‌ ವಿಚಾರಣೆಯಿಂದ ಹಿಂದೆ ಸರಿದ ಮತ್ತೊಬ್ಬ ಜಸ್ಟೀಸ್‌

"ತೇಲ್ತುಂಬ್ಡೆ ಮತ್ತು ನವಲಾಖಾ ಇಬ್ಬರೂ ಮಾವೋವಾದಿಗಳಾಗಿದ್ದಾರೆ. ಪರಸ್ಪರ ಚಟುವಟಿಕೆಗಳಲ್ಲಿ ಸಹಕಾರವಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ನೀಡಬಾರದು," ಎಂದು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ವಾದಿಸಿದರು. ಆರೋಪಿಗಳ ಪರವಾಗಿ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ವಾದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ