ಆ್ಯಪ್ನಗರ

ನನ್ನನ್ನು ನೇಣಿಗೇರಿಸಿ: ಭೋಪಾಲ್‌ ಅಪ್ರಾಪ್ತೆ ಅತ್ಯಾಚಾರ & ಕೊಲೆ ಆರೋಪಿಯ ಮೊರೆ

ಪ್ರಕರಣದ ವಿಚಾರಣೆ ಅಂತ್ಯಗೊಳ್ಳುವವರೆಗೆ ಪ್ರಸಾದ್‌ನನ್ನು ಜೈಲಿಗೆ ಕಳುಹಿಸಲಾಗಿದ್ದು, ಆತ್ಮಹತ್ಯೆ ಸಾಧ್ಯತೆ ಇರುವು ಬಗ್ಗೆ ಪೊಲೀಸರು ಜಾಗ್ರತೆ ವಹಿಸಿದ್ದಾರೆ.

Vijaya Karnataka Web 13 Jun 2019, 10:24 am
ಭೋಪಾಲ್‌: ಕುಡಿದ ಅಮಲಿನಲ್ಲಿದ್ದೆ. ತಪ್ಪು ನಡೆದು ಹೋಯಿತು. ನನ್ನ ತಪ್ಪನ್ನು ಒಪ್ಪಿಕೊಂಡಿದ್ದೇನೆ. ನನ್ನನ್ನು ನೇಣಿಗೇರಿಸಿ ಎಂದು 9 ವರ್ಷದ ಬಾಲಕಿಯನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪ ಎದುರಿಸುತ್ತಿರುವ 32 ವರ್ಷದ ವಿಷ್ಣು ಪ್ರಸಾದ್‌ ಕೋರ್ಟ್‌ ಮುಂದೆ ಮೊರೆಯಿಟ್ಟಿದ್ದಾನೆ.
Vijaya Karnataka Web Stop Rape


ಭೋಪಾಲ್‌ನಲ್ಲಿ ನಡೆದ ಅಪ್ರಾಪ್ತೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಕೇವಲ 48 ಗಂಟೆಗಳಲ್ಲಿ ಮಧ್ಯಪ್ರದೇಶ ಪೊಲೀಸರು ಬೇಧಿಸಿದ್ದಾರೆ. ಸಿಎಂ ಕಮಲ್‌ನಾಥ್‌ ಸಂತ್ರಸ್ತೆಯ ಕುಟುಂಬಕ್ಕೆ 48 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಲಾಗುವುದು ಮತ್ತು ಒಂದು ತಿಂಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಅಭಯ ನೀಡಿದ್ದರು.

ಪ್ರಕರಣದ ವಿಚಾರಣೆ ಅಂತ್ಯಗೊಳ್ಳುವವರೆಗೆ ಪ್ರಸಾದ್‌ನನ್ನು ಜೈಲಿಗೆ ಕಳುಹಿಸಲಾಗಿದ್ದು, ಆತ್ಮಹತ್ಯೆ ಸಾಧ್ಯತೆ ಇರುವು ಬಗ್ಗೆ ಪೊಲೀಸರು ಜಾಗ್ರತೆ ವಹಿಸಿದ್ದಾರೆ.

8 ವರ್ಷದ ಮಗಳು ಕಾಣೆಯಾಗಿರುವ ಬಗ್ಗೆ ಪೋಷಕರು ಭೋಪಾಲ್‌ ಪೊಲೀಸರಿಗೆ ದೂರು ನೀಡಿದ್ದರು. ಜೂನ್‌ 9, ರಂದು ಚರಂಡಿಯಲ್ಲಿ ಬಾಲಕಿ ಶವ ಪತ್ತೆಯಾಗಿತ್ತು. ಅತ್ಯಾಚಾರ ನಡೆಸಿದ ದುಷ್ಕರ್ಮಿ ಬಾಲಕಿಯನ್ನು ಕೊಲೆ ಮಾಡಿ ಚರಂಡಿಯಲ್ಲಿ ಎಸೆದು ಹೋಗಿದ್ದ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ