ಆ್ಯಪ್ನಗರ

370ನೇ ವಿಧಿ ರದ್ದಿಗೆ ವಿರೋಧ: ಪಕ್ಷ ತ್ಯಜಿಸಿದ ಕಾಂಗ್ರೆಸ್ ನಾಯಕ

ನನ್ನ ರಾಜೀನಾಮೆ ಸ್ವೀಕೃತವಾಗಿದೆ. ನಾನು ಈಗ ಕಾರಣಗಳನ್ನು ವಿಶ್ಲೇಷಿಸುವುದಿಲ್ಲ. ನಾಳೆ ಅಥವಾ ನಂತರದ ದಿನಗಳಲ್ಲಿ ಈ ಕುರಿತು ಸ್ಪಷ್ಟನೆ ನೀಡುತ್ತೇನೆ ಎಂದು ಕತಿಯಾ ಹೇಳಿದ್ದಾರೆ.

TIMESOFINDIA.COM 6 Aug 2019, 12:21 pm
ಹೊಸದಿಲ್ಲಿ: 370ನೇ ವಿಧಿ ರದ್ದತಿಯನ್ನು ವಿರೋಧಿಸಿ ದೇಶವಾಸಿಗಳಿಂದ ಛೀಮಾರಿ ಹಾಕಿಸಿಕೊಳ್ಳುತ್ತಿರುವ ಕಾಂಗ್ರೆಸ್‌ಗೆ ತಮ್ಮದೇ ಪಕ್ಷದೊಳಗಿಂದ ಕೂಡ ವಿರೋಧ ವ್ಯಕ್ತವಾಗುತ್ತಿದೆ. ಪಕ್ಷದ ಈ ನಡೆಯನ್ನು ವಿರೋಧಿಸಿ ರಾಜ್ಯಸಭಾ ಸದಸ್ಯ ಭುವನೇಶ್ವರ್ ಕಲಿತಾ ಪಕ್ಷದ ಮತ್ತು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
Vijaya Karnataka Web Kalita


ತಾವು ಕಲಿತಾ ಅವರ ರಾಜೀನಾಮೆಯನ್ನು ಅಂಗೀಕಾರ ಮಾಡಿರುವುದಾಗಿ ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಹೇಳಿದ್ದಾರೆ. ತಮ್ಮ ರಾಜೀನಾಮೆ ಬಗ್ಗೆ ಅವರು ಸ್ಪಷ್ಟನೆ ನೀಡದಿದ್ದರೂ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪತ್ರ ಅವರು ಕೈ ನಿರ್ಧಾರದಿಂದ ಬೇಸತ್ತು ರಾಜೀನಾಮೆ ನೀಡಿದ್ದಾರೆ ಎಂಬುದನ್ನು ಸ್ಪಷ್ಟ ಪಡಿಸಿದೆ. ಅಸ್ಸಾಂನಿಂದ ಕಾಂಗ್ರೆಸ್ ರಾಜ್ಯಸಭಾ ಸಂಸದರಾಗಿರುವ ಭುಭನೇಶ್ವರ್ ಕಲಿತಾ, ಅಮಿತ್ ಶಾ ಮಂಡಿಸಿದ ಕಾಶ್ಮೀರ ಮಸೂದೆಗೆ ಬೆಂಬಲ ಸೂಚಿಸಿ ಮತದಾನ ಮಾಡಿದ್ದರು. ಪಕ್ಷದ ವಿಪ್ ಉಲ್ಲಂಘಿಸಿ ಕಲಿತಾ ಮತದಾನ ಮಾಡಿದ್ದು, ಬಳಿಕ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.


ಪಕ್ಷದ ನಿರ್ಧಾರವನ್ನು ವಿರೋಧಿಸಿ ತಾವು ರಾಜೀನಾಮೆ ನೀಡುತ್ತಿರುವುದಾಗಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.


ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿ ನರೇಂದ್ರ ಮೋದಿ ಸರಕಾರ ಐತಿಹಾಸಿಕ ಮತ್ತು ದೂರಗಾಮಿ ಪರಿಣಾಮವುಳ್ಳ ದಿಟ್ಟ ನಿರ್ಧಾರವನ್ನು ಪ್ರಕಟಿಸಿದೆ. ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ವಿವಾದಾತ್ಮಕ 370ನೇ ವಿಧಿಯನ್ನು ಸೋಮವಾರ ಕಿತ್ತು ಹಾಕಿರುವ ಸರಕಾರ, ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ ಎಂಬ
ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದೆ.

ಕೇಂದ್ರದ ಈ ನಡೆಯನ್ನು ಖಂಡಿಸಿದ್ದ ಕಾಂಗ್ರೆಸ್ ಭಾರತದ ಸಂವಿಧಾನದ ಇತಿಹಾಸದಲ್ಲಿ ಇದು ಕಪ್ಪು ದಿನ ಎಂದಿತ್ತು.

ಸಂಸತ್‌ನಲ್ಲಿ ಗೃಹ ಸಚಿವ ಅಮಿತ್ ಶಾ ತಮ್ಮ ಸರಕಾರದ ನಿರ್ಧಾರವನ್ನು ಪ್ರಕಟಿಸುತ್ತಿದ್ದಂತೆಯೇ ಕಾಂಗ್ರೆಸ್, ಪಿಡಿಪಿ ಸದಸ್ಯರು ತೀವ್ರ ಕೋಲಾಹಲ ಉಂಟುಮಾಡಿದ್ದರು. ಪಿಡಿಪಿ ಸಂಸದ ಮೀರ್ ಫಯಾಜ್ ಮತ್ತು ನಾಸಿರ್ ಅಹಮದ್ ಅವರು ಸಂವಿಧಾನದ ಪ್ರತಿ ಹರಿದುಹಾಕಲು ಯತ್ನಿಸಿದ ಘಟನೆ ಕೂಡ ನಡೆಯಿತು. ಅಷ್ಟೆ ಅಲ್ಲದೆ, ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ವಿಧಿ ರದ್ದುಗೊಳಿಸುವ ಮೂಲಕ ಬಿಜೆಪಿ ಸಂವಿಧಾನದ ಕಗ್ಗೊಲೆ ಮಾಡಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಕಿಡಿಕಾರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ