ಆ್ಯಪ್ನಗರ

ಐದು ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದವನಿಗೆ 5 ಬಸ್ಕಿಯ 'ಶಿಕ್ಷೆ'!

Bihar Rape Case: ಬಿಹಾರದ ನವಾಡಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಐದು ವರ್ಷದ ಬಾಲಕಿಯನ್ನು ಅತ್ಯಾಚಾರ ನಡೆಸಿದ ಆರೋಪದಲ್ಲಿ ಸಿಕ್ಕಿಬಿದ್ದಿದ್ದ ವ್ಯಕ್ತಿಗೆ ಹಳ್ಳಿಯ ಪಂಚಾಯತ್‌ನಲ್ಲಿ ಐದು ಬಸ್ಕಿ ಹೊಡೆಯುವ ಶಿಕ್ಷೆ ನೀಡಲಾಗಿದೆ.

Authored byಅಮಿತ್ ಎಂ.ಎಸ್ | Vijaya Karnataka Web 26 Nov 2022, 8:37 pm

ಹೈಲೈಟ್ಸ್‌:

  • ಬಿಹಾರದ ನವಾಡಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದ ಘಟನೆ ವಿಡಿಯೋ
  • ಚಾಕೊಲೇಟ್ ನೀಡುವುದಾಗಿ ಮಗುವನ್ನು ಕರೆದೊಯ್ದು ಅತ್ಯಾಚಾರ
  • ಸಿಕ್ಕಿಬಿದ್ದ ಆರೋಪಿಗೆ ಐದು ಬಸ್ಕಿಯ ಶಿಕ್ಷೆ ವಿಧಿಸಿದ್ದ ಹಳ್ಳಿ ಪಂಚಾಯ್ತಿ

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web bihar rape
ಪಟನಾ: ಐದು ವರ್ಷದ ಬಾಲಕಿಯನ್ನು ಅತ್ಯಾಚಾರ ನಡೆಸಿದ ಆರೋಪದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ವ್ಯಕ್ತಿಯೊಬ್ಬನಿಗೆ ಐದು ಬಸ್ಕಿ ಹೊಡೆಸುವ 'ಶಿಕ್ಷೆ' ವಿಧಿಸಿದ ಘಟನೆ ಬಿಹಾರದಲ್ಲಿ ನಡೆದಿದೆ. ಇದರ ವಿಡಿಯೋ ವೈರಲ್ ಆಗಿದೆ. ಬಿಹಾರದ ನವಾಡಾ ಜಿಲ್ಲೆಯ ಗ್ರಾಮವೊಂದರಲ್ಲಿ ಈ ಘಟನೆ ವರದಿಯಾಗಿದೆ.
ಚಾಕೊಲೇಟ್ ನೀಡುವುದಾಗಿ ಮಗುವಿಗೆ ಆಮಿಷವೊಡ್ಡಿದ್ದ ಆರೋಪಿ, ಆಕೆಯನ್ನು ಕೋಳಿ ಫಾರಂಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಆತನನ್ನು ಹಿಡಿದು ಹಳ್ಳಿಯ ಪಂಚಾಯ್ತಿ ಮುಂದೆ ಹಾಜರುಪಡಿಸಲಾಗಿತ್ತು. ಆತನನ್ನು ಪೊಲೀಸರ ಕೈಗೆ ಒಪ್ಪಿಸಲು ಬಯಸದ ಗ್ರಾಮದ ಹಿರೀಕರು, ತಮ್ಮದೇ ತೀರ್ಪು ನೀಡಿದ್ದಾರೆ. ಆತ ಅತ್ಯಾಚಾರದಲ್ಲಿ ತಪ್ಪಿತಸ್ಥನಲ್ಲ ಎಂದು ಅವರು ನಿರ್ಧರಿಸಿದ್ದಾರೆ. ಆದರೆ ಏಕಾಂತದ ಸ್ಥಳಕ್ಕೆ ಬಾಲಕಿಯನ್ನು ಕರೆದೊಯ್ದದ್ದು ತಪ್ಪು ಎಂದು ಐದು ಬಸ್ಕಿಯ 'ಶಿಕ್ಷೆ' ನೀಡಿದ್ದಾರೆ.
Girls Auction: ಸಾಲ ತೀರಿಸದೆ ಇದ್ದರೆ ಹೆಣ್ಣುಮಕ್ಕಳ ಹರಾಜು: ಆಧುನಿಕ ಕಾಲದಲ್ಲಿಯೂ ಕ್ರೂರ ವ್ಯವಸ್ಥೆ

ಈ ಶಿಕ್ಷೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ವ್ಯಾಪಕ ಆಕ್ರೋಶಕ್ಕೆ ತುತ್ತಾಗಿದೆ. ಇದು ಗ್ರಾಮೀಣ ಭಾರದಲ್ಲಿನ ಪುರುಷ ಪ್ರಧಾನ ವ್ಯವಸ್ಥೆ ಹಾಗೂ ಅನ್ಯಾಯದ ವ್ಯವಸ್ಥೆ ಎಂದು ಕಿಡಿಕಾರಿದ್ದಾರೆ.


ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಟ್ಯಾಗ್ ಮಾಡಿರುವ ನೆಟ್ಟಿಗರು, ಅಪರಾಧಿಗೆ ರಾಜ್ಯ ಸರ್ಕಾರ ಶಿಕ್ಷೆ ವಿಧಿಸಲಿದೆಯೇ ಎಂದು ಪ್ರಶ್ನಿಸಿದ್ದಾರೆ. ಈ ಘಟನೆ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಮಂಗ್ಲ ತಿಳಿಸಿದ್ದಾರೆ. ಈ ಘಟನೆಯನ್ನು ಹತ್ತಿಕ್ಕಲು ಪ್ರಯತ್ನಿಸದವರು ಯಾರು ಎಂಬ ಬಗ್ಗೆ ಕೂಡ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.
ಲೇಖಕರ ಬಗ್ಗೆ
ಅಮಿತ್ ಎಂ.ಎಸ್
ವಿಜಯ ಕರ್ನಾಟಕದ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತ. 2009ರಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದಾರೆ. ದಿನಪತ್ರಿಕೆಗಳು ಮತ್ತು ವೆಬ್‌ ಪೋರ್ಟಲ್‌ಗಳಲ್ಲಿ ವರದಿಗಾರಿಕೆ, ಸಿನಿಮಾ ವರದಿಗಾರಿಕೆ, ಡೆಸ್ಕ್ ಹಾಗೂ ಜಿಲ್ಲಾ ಕರೆಸ್ಪಾಂಡೆಂಟ್ ಆಗಿ ಕೆಲಸ ಮಾಡಿದ ಅನುಭವ ಇವರಿಗಿದೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳು ಪ್ರಮುಖ ಆಸಕ್ತಿಯ ವಿಭಾಗಗಳು. ಮಾನವಾಸಕ್ತಿಯ ಹಾಗೂ ಸ್ಫೂರ್ತಿದಾಯಕ ಕಥನಗಳನ್ನು ನಿರೂಪಿಸುವುದು ವೃತ್ತಿಯಲ್ಲಿನ ನೆಚ್ಚಿನ ಸಂಗತಿ. ಪ್ರವಾಸ, ಕ್ರಿಕೆಟ್, ಓದು, ಕೃಷಿ ಇತರೆ ಇವರ ಆಸಕ್ತಿ ಮತ್ತು ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ