ಆ್ಯಪ್ನಗರ

ನಿರೀಕ್ಷಣಾ ಜಾಮೀನಿಗೆ ಬಿಷಪ್‌ ಮುಳಕ್ಕಲ್ ಅರ್ಜಿ

ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿರುವ ಜಲಂಧರ್‌ನ ರೋಮನ್‌ ಕ್ಯಾಥೋಲಿಕ್‌ ಬಿಷಪ್‌ ಫ್ರಾಂಕೊ ಮುಳಕ್ಕಲ್‌ ಬಂಧನ ಭೀತಿ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಮಂಗಳವಾರ ಕೇರಳ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ನ್ಯಾಯಾಲಯ ವಿಚಾರಣೆಯನ್ನು ಸೆ.25ಕ್ಕೆ ಮುಂದೂಡಿದೆ.

Vijaya Karnataka 19 Sep 2018, 9:46 am
ತಿರುವನಂತಪುರ: ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿರುವ ಜಲಂಧರ್‌ನ ರೋಮನ್‌ ಕ್ಯಾಥೋಲಿಕ್‌ ಬಿಷಪ್‌ ಫ್ರಾಂಕೊ ಮುಳಕ್ಕಲ್‌ ಬಂಧನ ಭೀತಿ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಮಂಗಳವಾರ ಕೇರಳ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ನ್ಯಾಯಾಲಯ ವಿಚಾರಣೆಯನ್ನು ಸೆ.25ಕ್ಕೆ ಮುಂದೂಡಿದೆ.
Vijaya Karnataka Web opppp


ಪೊಲೀಸರ ಸಮನ್ಸ್‌ ಹಿನ್ನೆಲೆಯಲ್ಲಿ ಸೆ.19ರಂದು ಬಿಷಪ್‌ ತನಿಖಾ ತಂಡದ ಮುಂದೆ ಹಾಜರಾಗಬೇಕಿದೆ. ವಿಚಾರಣೆ ಬಳಿಕ ಪೊಲೀಸರು ತಮ್ಮನ್ನು ಬಂಧಿಸುವ ಅಥವಾ ವಶಕ್ಕೆ ಪಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ, ಅದಕ್ಕೆ ಮುನ್ನಾ ದಿನವೇ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದರು. ಆದರೆ ಕೋರ್ಟ್‌ನಲ್ಲಿ ಸದ್ಯಕ್ಕೆ ರಿಲೀಫ್‌ ದೊರೆಯದ ಹಿನ್ನೆಲೆಯಲ್ಲಿ ಬಿಷಪ್‌ ಬಂಧನದ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ.

''ನನ್ನ ವಿರುದ್ಧ ಷಡ್ಯಂತ್ರ ರೂಪಿಸಿ ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ನನ್ನ ವಿರುದ್ಧ ಆರೋಪಗಳು ಕಪೋಲಕಲ್ಪಿತ,'' ಎಂದು ಬಿಷಪ್‌ ಅರ್ಜಿಯಲ್ಲಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

2014ರಿಂದ 2016ರ ನಡುವೆ ಬಿಷಪ್‌ ತನ್ನ ಮೇಲೆ 13 ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಸನ್ಯಾಸಿನಿ ಆರೋಪಿಸಿದ್ದಾರೆ. ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಸನ್ಯಾಸಿನಿ ವ್ಯಾಟಿಕನ್‌ ಪೋಪ್‌ ಅವರಿಗೂ ಪತ್ರ ಬರೆದಿದ್ದಾರೆ. ಬಿಷಪ್‌ ಈ ಪ್ರಕರಣವನ್ನು ಮುಚ್ಚಿಹಾಕಲು ರಾಜಕೀಯ ಮತ್ತು ಹಣದ ಬಲ ಉಪಯೋಗಿಸುತ್ತಿದ್ದಾರೆ ಎಂದು ಕ್ರೈಸ್ತ ಸನ್ಯಾಸಿನಿ ಆರೋಪಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ