ಆ್ಯಪ್ನಗರ

ಉನ್ನಾವೊ ಅತ್ಯಾಚಾರ ಕೇಸ್‌: ಬಿಜೆಪಿಯಿಂದ ಆರೋಪಿ ಕುಲದೀಪ್ ಸೆಂಗಾರ್‌ ಉಚ್ಛಾಟನೆ

ಅತ್ಯಾಚಾರ ಆರೋಪದಡಿ ಬಂಧಿತರಾಗಿ ಕಾರಾಗೃಹದಲ್ಲಿರುವ ಶಾಸಕ ಕುಲ್‌ದೀಪ್‌ ಸಿಂಗ್‌ ಸೆಂಗರ್‌ ಅವರ ಕೈವಾಡದ ಬಗ್ಗೆ ಮತ್ತೊಮ್ಮೆ ಸಂಶಯ ಮೂಡಿದ್ದು, ಅಪಘಾತ ಪ್ರಕರಣದಲ್ಲಿಯೂ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

TIMESOFINDIA.COM 1 Aug 2019, 3:32 pm
ಹೊಸದಿಲ್ಲಿ: ಉನ್ನಾವೊ ಅತ್ಯಾಚಾರ ಕೇಸ್‌ ಆರೋಪಿ ಕುಲದೀಪ್ ಸೆಂಗಾರ್‌ರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಿದೆ. ಉನ್ನಾವೋದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಹಾಗೂ ಅವರ ಕುಟುಂಬಕ್ಕೆ ಬೆದರಿಕೆ ನೀಡಿದ ಆರೋಪದ ಬಳಿಕ ಬಿಜೆಪಿ ಹಾಗೂ ಕುಲದೀಪ್‌ ವಿರುದ್ಧ ಹೆಚ್ಚು ಆಕ್ರೋಶ ವ್ಯಕ್ತವಾದ ಹಿನ್ನೆಲೆ ಅವರನ್ನು ಉಚ್ಛಾಟಿಸಿದೆ ಎಂದು ತಿಳಿದುಬಂದಿದೆ.
Vijaya Karnataka Web kuldeep sengar


ಇನ್ನು, ಉನ್ನಾವೊ ಅತ್ಯಾಚಾರ ಸಂತ್ರಸ್ತೆ ಹಾಗೂ ಆಕೆಯ ಕುಟುಂಬಸ್ಥರಿದ್ದ ಕಾರಿಗೆ ಟ್ರಕ್‌ನಿಂದ ಗುದ್ದಿಸಿ ಹತ್ಯೆಗೆ ಯತ್ನಿಸಿದ ಆರೋಪ ನಡೆದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಅತ್ಯಾಚಾರ ಸಂತ್ರಸ್ತೆಯನ್ನು ಹಾಗೂ ಆಕೆಯ ಕುಟುಂಬವನ್ನು ನಾಶ ಮಾಡಲು ಬಿಜೆಪಿ ನಾಯಕ ಯತ್ನಿಸಿದ್ದಾರೆ ಎಂದು ಕುಟುಂಬ ಆರೋಪಿಸಿತ್ತು. ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ಭಾನುವಾರ ಅಪಘಾತ ನಡೆದಿತ್ತು.

ಈ ಅಪಘಾತ ನಡೆದ ಬಳಿಕ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌ ನೇತೃತ್ವದ ಸರಕಾರದ ವಿರುದ್ಧ ವಿಪಕ್ಷಗಳು ಹಾಗೂ ಸಾರ್ವಜನಿಕರಿಂದ ಹೆಚ್ಚು ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆ ಮಂಗಳವಾರ ಉತ್ತರ ಪ್ರದೇಶ ಸರಕಾರದ ಶಿಫಾರಸಿನ ಮೇರೆಗೆ ಕೇಂದ್ರ ಸರಕಾರ ಈ ಕೇಸನ್ನು ಸಿಬಿಐಗೆ ಹಸ್ತಾಂತರಿಸಿತ್ತು. ಬಿಜೆಪಿ ಶಾಸಕ ಕುಲ್‌ದೀಪ್‌ ಸೆಂಗಾರ್‌ ಹಾಗೂ 10 ಮಂದಿ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ.

ಅತ್ಯಾಚಾರ ಕೇಸ್‌ನಡಿ ಏಪ್ರಿಲ್‌ 13ರಂದು ಬಿಜೆಪಿ ನಾಯಕರಾಗಿದ್ದ ಕುಲದೀಪ್‌ ಸೆಂಗಾರ್‌ರನ್ನು ಬಂಧಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ