ಆ್ಯಪ್ನಗರ

ಲೋಕಸಭೆಯಲ್ಲಿ ಕರ್ನಾಟಕ ರಾಜಕೀಯ ಬೆಳವಣಿಗೆ ಪ್ರಸ್ತಾಪ: ಬಿಜೆಪಿಗೆ ಸಂಬಂಧವಿಲ್ಲ ಎಂದ ರಾಜನಾಥ್‌ ಸಿಂಗ್‌

ಕರ್ನಾಟಕ ರಾಜಕೀಯ ಬೆಳವಣಿಗೆಗೆ ಬಿಜೆಪಿ ಸಂಬಂಧವಿಲ್ಲ ಎಂದು ಲೋಕಸಭೆಯಲ್ಲಿ ನಡೆದ ಚರ್ಚೆಯ ವೇಳೆ ರಾಜನಾಥ್‌ ಸಿಂಗ್‌ ಸ್ಪಷ್ಟನೆ ನೀಡಿದ್ದಾರೆ.

Vijaya Karnataka Web 8 Jul 2019, 4:41 pm
ಹೊಸದಿಲ್ಲಿ: ಕರ್ನಾಟಕದಲ್ಲಿ ನಡೆಯತ್ತಿರುವ ರಾಜಕೀಯ ಬೆಳವಣಿಗೆಗಳಿಗೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸ್ಪಷ್ಟಪಡಿಸಿದ್ದಾರೆ.
Vijaya Karnataka Web ರಾಜನಾಥ್‌ ಸಿಂಗ್
ರಾಜನಾಥ್‌ ಸಿಂಗ್‌


ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ರಾಜನಾಥ್‌ ಸಿಂಗ್‌, ಸಂಸತ್ತಿನ ಘನತೆ, ಗೌರವವವನ್ನು ಕಾಪಾಡಲು ಬಿಜೆಪಿ ಸದಾ ಬದ್ಧ ಎಂದರು.

ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಶೂನ್ಯವೇಳೆಯಲ್ಲಿ ಕಾಂಗ್ರೆಸ್‌ ನಾಯಕ ಅಧಿರ್‌ ರಂಜನ್‌ ಚೌಧರಿ ಪ್ರಸ್ತಾಪಿಸಿದರು.

ಇದಕ್ಕೆ ಕೂಡಲೇ ಪ್ರತಿಕ್ರಿಯೆ ನೀಡಿ ರಕ್ಷಣಾ ಸಚಿವ, ಕರ್ನಾಟಕದಲ್ಲಿ ಪ್ರತಿ ಬಾರಿ ರಾಜಕೀಯ ಬೆಳವಣಿಗೆ ನಡೆದರೆ ಬಿಜೆಪಿ ಕರೆ ಬೆರಳು ತೋರಿಸಲಾಗುತ್ತದೆ. ಆದರೆ ರಾಜಕೀಯ ಬೆಳವಣಿಗೆಗಳ ಹಿಂದೆ ಬಿಜೆಪಿ ಹಸ್ತಕ್ಷೇಪವಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವವನ್ನು ಆರಂಭಿಸಿದ್ದೇ ರಾಹುಲ್ ಗಾಂಧಿ. ಪಕ್ಷಾಧ್ಯಕ್ಷ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದರು. ಅಲ್ಲಿಂದ ಆರಂಭವಾಯಿತು ರಾಜೀನಾಮೆ ಸರಣಿ. ಅವರಲ್ಲಿರುವ ಲೋಪವನ್ನು ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಗೂಬೆ ಕೂರಿಸಲಾಗುತ್ತಿದೆ ಎಂದು ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ