ಆ್ಯಪ್ನಗರ

ಶವವಾಗಿ ಪತ್ತೆಯಾದ ಬಿಜೆಪಿ ನಾಯಕ

ವರದಿಗಳ ಪ್ರಕಾರ ಭಾನುವಾರ ಮುಂಜಾನೆ ವಾಯು ವಿಹಾರಕ್ಕೆಂದು ಹೋಗಿದ್ದ ಠಾಕ್ರೆ ಮೈದಾನವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ವಾರ್ಲಾ ಠಾಣೆಯ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

Times Now 20 Jan 2019, 11:16 am
ಬರ್ವಾನಿ: ರಾಜಕೀಯ ಅಸಹಿಷ್ಣುತೆಗೆ ಇನ್ನೊಂದು ನಿದರ್ಶನವೆಂಬಂತೆ ಮಧ್ಯಪ್ರದೇಶದ ಬಿಜೆಪಿ ನಾಯಕ ಮನೋಜ್ ಠಾಕ್ರೆ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ.
Vijaya Karnataka Web Manoj Thackeray


ವರದಿಗಳ ಪ್ರಕಾರ ಭಾನುವಾರ ಮುಂಜಾನೆ ವಾಯು ವಿಹಾರಕ್ಕೆಂದು ಹೋಗಿದ್ದ ಠಾಕ್ರೆ ಮೈದಾನವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ವಾರ್ಲಾ ಠಾಣೆಯ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ (ಜನವರಿ 17) ರಾಜ್ಯದ ಮಂದ್‌ಸೌರ್‌ನ ನೈ ಅಬಾದಿ ಪ್ರದೇಶದಲ್ಲಿ ಬಿಜೆಪಿ ನಾಯಕ ಪ್ರಹ್ಲಾದ್ ಬಂದ್ವಾರ್ ಅವರ ಹತ್ಯೆಯಾಗಿತ್ತು. ಈ ಕರಾಳ ಕೃತ್ಯದ ಬೆನ್ನ ಹಿಂದೆಯೇ ಪಕ್ಷದ ಇನ್ನೊಬ್ಬ ನಾಯಕ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ.

ಪ್ರಹ್ಲಾದ್ ಅವರ ಹತ್ಯೆಗೆ ಸಂಬಂಧಿಸಿದಂತೆ ಮನೀಶ್ ಬೈರಾಗಿ ಎಂಬಾತನನ್ನು ಬಂಧಿಸಲಾಗಿದ್ದು, ಆತ ಬಿಜೆಪಿ ಕಾರ್ಯಕರ್ತನೇ ಎನ್ನಲಾಗುತ್ತಿದೆ.

ಬಿಹಾರದಲ್ಲಿ ಕೂಡ ಕಳೆದ ವಾರ ಬಿಜೆಪಿ ನಾಯಕನ ಕೊಲೆಯಾಗಿತ್ತು. ಅವರು ಮೆಡಿಕಲ್ ಸ್ಟೋರ್‌ನಲ್ಲಿದ್ದಾಗ ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿ ಗುಂಡು ಹಾರಿಸಿದ್ದ. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ