ಆ್ಯಪ್ನಗರ

ಶಬರಿಮಲೆ: ಬಿಜೆಪಿ ನಾಯಕ ಸುರೇಂದ್ರನ್‌ಗೆ ನ್ಯಾಯಾಂಗ ಬಂಧನ

ದೇಗುಲಕ್ಕೆ ತೆರಳದಂತೆ ಪೊಲೀಸರ ಸೂಚನೆಯನ್ನು ಧಿಕ್ಕರಿಸಿದ್ದ ಸುರೇಂದ್ರನ್‌ರನ್ನು ಶನಿವಾರ ರಾತ್ರಿ ಪೊಲೀಸರು ಬಂಧಿಸಿದ್ದರು.

Vijaya Karnataka Web 18 Nov 2018, 12:06 pm
ಪಂಪಾ: ಇರುಮುಡಿ ಹೊತ್ತು ಶಬರಿಮಲೆಗೆ ತೆರಳುತ್ತಿದ್ದ ಕೇರಳ ಬಿಜೆಪಿ ನಾಯಕ ಕೆ. ಸುರೇಂದ್ರನ್ ಅವರನ್ನು ಬಂಧಿಸಿರುವ ಕೇರಳ ಪೊಲೀಸರು, ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದು, ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Vijaya Karnataka Web Surendran


ಶಬರಿಮಲೆಯಲ್ಲಿ ಮಹಿಳೆಯರ ಪ್ರವೇಶ ಕುರಿತಂತೆ ಗದ್ದಲ ಉಂಟಾಗಿರುವ ಬೆನ್ನಲ್ಲೇ ದೇಗುಲಕ್ಕೆ ತೆರಳುತ್ತಿದ್ದ ಸುರೇಂದ್ರನ್ ಅವರನ್ನು ಮುಂಜಾಗ್ರತಾ ಕ್ರಮ ಎಂದು ಪೊಲೀಸರು ಬಂಧಿಸಿದ್ದರು. ಜತೆಗೆ ಅವರ ಮೇಲೆ ಜಾಮೀನುರಹಿತ ಪ್ರಕರಣ ದಾಖಲಿಸಿದ್ದರು.

ದೇಗುಲಕ್ಕೆ ತೆರಳದಂತೆ ಪೊಲೀಸರ ಸೂಚನೆಯನ್ನು ಧಿಕ್ಕರಿಸಿದ್ದ ಸುರೇಂದ್ರನ್‌ರನ್ನು ಶನಿವಾರ ರಾತ್ರಿ ಪೊಲೀಸರು ಬಂಧಿಸಿದ್ದರು. ಭಾನುವಾರ ಬೆಳಗ್ಗೆ ಅವರನ್ನು ಪತ್ತನಂತಿಟ್ಟ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿತ್ತು. ಅಲ್ಲಿ ಸುರೇಂದ್ರನ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಸುರೇಂದ್ರನ್ ಬಂಧನ ಖಂಡಿಸಿ ಕೇರಳ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ, ಹಲವೆಡೆ ರಸ್ತೆ ತಡೆ ನಡೆಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ