ಆ್ಯಪ್ನಗರ

ಮುಗಿಯದ ಗುಂಡಿನ ಸದ್ಧು: ಉ.ಪ್ರದೇಶದಲ್ಲಿ ಬಿಜೆಪಿ ಮುಖಂಡ ಕೊಲೆ

ಖೋರಾ ಕಾಲೋನಿಯಲ್ಲಿ ದುಷ್ಕರ್ಮಿಗಳು ಬಿಜೆಪಿ ಮುಖಂಡ ಗಜೇಂದ್ರ ಭಾಟಿ ಅವರನ್ನು ಹಾಡಹಗಲೇ ಗುಂಡಿಟ್ಟು ಹತ್ಯೆಗೈದಿದ್ದಾರೆ.

Navbharat Times 2 Sep 2017, 9:14 pm
ಗಾಜಿಯಾಬಾದ್‌: ಉತ್ತರ ಪ್ರದೇಶದಲ್ಲಿ ಸರಕಾರ ಬದಲಾದರೂ ಅಪರಾಧ ಸಂಖ್ಯೆ ಇಳಿಮುಖವಾಗುವ ಲಕ್ಷಣ ಕಾಣುತ್ತಿಲ್ಲ. ಇದಕ್ಕೆ ಪುಷ್ಠಿ ನೀಡುವಂತೆ ಇಲ್ಲಿನ ಖೋರಾ ಕಾಲೋನಿಯಲ್ಲಿ ದುಷ್ಕರ್ಮಿಗಳು ಬಿಜೆಪಿ ಮುಖಂಡ ಗಜೇಂದ್ರ ಭಾಟಿ ಅವರನ್ನು ಹಾಡಹಗಲೇ ಗುಂಡಿಟ್ಟು ಹತ್ಯೆಗೈದಿದ್ದಾರೆ.
Vijaya Karnataka Web bjp local leader shoot dead in ghaziabad khora colony
ಮುಗಿಯದ ಗುಂಡಿನ ಸದ್ಧು: ಉ.ಪ್ರದೇಶದಲ್ಲಿ ಬಿಜೆಪಿ ಮುಖಂಡ ಕೊಲೆ


ಗಜೇಂದ್ರ ಭಾಟಿ ಹಾಗೂ ಅವರ ಸ್ನೇಹಿತ ಬಲಬೀರ್ ಸಿಂಗ್ ಚೌಹಾಣ್ ಅವರು ಬೈಕಿನಲ್ಲಿ ಹೋಗುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಗುಂಡಿಕ್ಕಿ ಭಾಟಿಯನ್ನು ಕೊಲೆಗೈದಿದ್ದಾರೆ.

ವಿಷಯ ತಿಳಿದಾಕ್ಷಣ ಆಸ್ಪತ್ರೆ ಬಳಿ ನೂರಾರು ಬೆಂಬಲಿಗರು ಧಾವಿಸಿದ್ದು, ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಈ ಹಿಂದೆಯೂ ಕೂಡಾ ಈ ಪ್ರದೇಶದಲ್ಲಿ ಬಿಜೆಪಿ ಮುಖಂಡರೊಬ್ಬರನ್ನು ಗುಂಡಿಟ್ಟು ಕೊಲೆ ಮಾಡಲಾಗಿತ್ತು. ಕಳೆದ ವರ್ಷ ಮೂರು ಬಿಜೆಪಿ ನಾಯಕರು ಜಮೀಲಾ ಬಿ, ಸಚಿನ್ ಶಿಲ್ಕೆ ಮತ್ತು ಅಶೋಕ್ ಜೈಸ್ವಾಲ್‌ರನ್ನು ಕೂಡಾ ಗುಂಡಿಟ್ಟು ಕೊಲೆ ಮಾಡಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ