ಆ್ಯಪ್ನಗರ

ಅಭಿನಂದನ್‌ ವರ್ಧಮಾನ್ ಭಾವಚಿತ್ರ ಬಳಸಿದ್ದಕ್ಕೆ ಬಿಜೆಪಿ ಶಾಸಕನಿಗೆ ನೋಟಿಸ್‌

ತತ್‌ಕ್ಷಣವೇ ಪೋಸ್ಟರ್‌ ತೆಗೆದುಹಾಕಿ ಗುರುವಾರದೊಳಗೆ ಉತ್ತರಿಸುವಂತೆ ಸೂಚಿಸಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಯೋಗ ತಿಳಿಸಿದೆ.

Vijaya Karnataka 14 Mar 2019, 8:34 am
ಹೊಸದಿಲ್ಲಿ: ಲೋಕಸಭೆ ಚುನಾವಣೆಯ ಪ್ರಚಾರ ಪೋಸ್ಟರ್‌ನಲ್ಲಿ ಭಾರತೀಯ ವಾಯುಪಡೆ ವಿಂಗ್‌ ಕಮಾಂಡರ್‌ ಅಭಿನಂದನ್‌ ವರ್ಧಮಾನ್‌ ಅವರ ಭಾವಚಿತ್ರ ಬಳಸಿದ ದಿಲ್ಲಿ ಬಿಜೆಪಿ ಶಾಸಕ ಓಂ ಪ್ರಕಾಶ್‌ ಶರ್ಮಾ ಅವರಿಗೆ ಚುನಾವಣಾ ಆಯೋಗ ಶೋಕಾಸ್‌ ನೋಟಿಸ್‌ ನೀಡಿದೆ.
Vijaya Karnataka Web Om Prakash.


ತತ್‌ಕ್ಷಣವೇ ಪೋಸ್ಟರ್‌ ತೆಗೆದುಹಾಕಿ ಗುರುವಾರದೊಳಗೆ ಉತ್ತರಿಸುವಂತೆ ಸೂಚಿಸಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಯೋಗ ತಿಳಿಸಿದೆ. ಶಾಸಕ ಓಂ ಪ್ರಕಾಶ್‌ ಶರ್ಮಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಬಿಜೆಪಿ ಪ್ರಚಾರ ಪೋಸ್ಟರ್‌ನಲ್ಲಿ ಪ್ರಧಾನಿ ಮೋದಿ, ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಹಾಗೂ ವಿಂಗ್‌ ಕಮಾಂಡರ್‌ ಅಭಿನಂದನ್‌ ವರ್ಧಮಾನ್‌ ಅವರ ಚಿತ್ರಗಳನ್ನು ಬಳಸಿದ್ದರು. ಅಲ್ಲದೇ ''ಪಾಕಿಸ್ತಾನ ನಮಗೆ ತಲೆಬಾಗಿದೆ.

ಕೆಚ್ಚೆದೆಯ ಯೋಧರು ಉಗ್ರ ಪೋಷಕ ಪಾಕ್‌ಗೆ ತಕ್ಕ ಶಾಸ್ತಿ ಮಾಡಿದ್ದಾರೆ. ಮೋದಿ ಅವರು ಅಭಿನಂದನ್‌ ಅವರನ್ನು ಅತ್ಯಲ್ಪ ಸಮಯದಲ್ಲಿ ಪಾಕ್‌ನಿಂದ ಭಾರತಕ್ಕೆ ಕರೆತಂದದ್ದು ಬಹುದೊಡ್ಡ ರಾಜತಾಂತ್ರಿಕ ಗೆಲುವು,'' ಎಂದು ಬರೆದಿದ್ದರು. ಪ್ರಚಾರ ಪೋಸ್ಟರ್‌ನಲ್ಲಿ ಭದ್ರತಾ ಸಿಬ್ಬಂದಿಯ ಫೋಟೊ ಬಳಸಿದ್ದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಹೇಳಿ ಆಯೋಗ ನೋಟಿಸ್‌ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ