ಆ್ಯಪ್ನಗರ

ಹನುಮಾನ್ ದಲಿತ: ಯೋಗಿ ಹೇಳಿಕೆಗೆ ಸ್ವಪಕ್ಷದ ಶಾಸಕನೇ ಗರಂ

ಜಾತಿ-ಧರ್ಮಕ್ಕಿಂತ ದೊಡ್ಡವರಾಗಿರುವ ದೇವಾನುದೇವತೆಗಳನ್ನು, ಒಂದು ಜಾತಿಗೆ ಸಿಮೀತಗೊಳಿಸುವುದು ಸೂಕ್ತವಲ್ಲ ಎಂದು ಬೈರಿಯಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

TIMESOFINDIA.COM 29 Nov 2018, 6:17 pm
ಬಲಿಯಾ (ಉತ್ತರ ಪ್ರದೇಶ): ಹಿಂದೂ ದೇವರು ಹನುಮಂತನನ್ನು ದಲಿತ ಎಂದು ಉಲ್ಲೇಖಿಸಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಸುರೇಂದ್ರ ಸಿಂಗ್, ದೇವರನ್ನು ಜಾತಿಯ ಜತೆ ಬೆರೆಸುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ.
Vijaya Karnataka Web yogi


ಜಾತಿ-ಧರ್ಮಕ್ಕಿಂತ ದೊಡ್ಡವರಾಗಿರುವ ದೇವಾನುದೇವತೆಗಳನ್ನು, ಒಂದು ಜಾತಿಗೆ ಸಿಮೀತಗೊಳಿಸುವುದು ಸೂಕ್ತವಲ್ಲ ಎಂದು ಬೈರಿಯಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ರಾಜಸ್ಥಾನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬುಧವಾರ ನಡೆದ ಸಮಾವೇಶದಲ್ಲಿ ಮಾತನಾಡಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, 'ಹನುಮಂತ ಒಬ್ಬ ಅರಣ್ಯವಾಸಿ. ಎಲ್ಲ ಸಮುದಾಯಗಳನ್ನು ಉತ್ತರದಿಂದ ದಕ್ಷಿಣಕ್ಕೆ ಹಾಗೂ ಪೂರ್ವದಿಂದ ಪಶ್ಚಿಮಕ್ಕೆ ಸಂಪರ್ಕಿಸಲು ಕೆಲಸ ಮಾಡಿದ ಒಬ್ಬ ದಲಿತ' ಎಂದು ಉಲ್ಲೇಖಿಸಿದ್ದರು.

ಹನುಮಾನ್ ದಲಿತನೆಂದು ಹೇಳಿರುವ ಯೋಗಿ ಆದಿತ್ಯನಾಥ್ ಅವರಿಗೆ ರಾಜಸ್ಥಾನದ ಸರ್ವ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಸುರೇಶ್ ಮಿಶ್ರಾ ನೋಟಿಸ್ ಜಾರಿಗೊಳಿಸಿದ್ದು, 3 ದಿನಗಳ ಒಳಗೆ ಕ್ಷಮೆ ಕೋರುವಂತೆ ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ