ಆ್ಯಪ್ನಗರ

ಬಿಜೆಪಿಯ ಶಾಸಕರಲ್ಲಿ ಕೆಲವು ದಿಲ್ಲಿಯಲ್ಲಿರುತ್ತಾರೆ, ಕೆಲವರು ಗುರುಗ್ರಾಮಕ್ಕೆ ಹೋಗಿ ಬರುತ್ತಾರೆ: ಬಿಎಸ್‌ವೈ

ಸಂಕ್ರಾಂತಿಯ ನಂತರ ಮೈತ್ರಿ ಸರಕಾರ ಪತನಗೊಳ್ಳುತ್ತದೆ ಎಂಬುದನ್ನು ಮಾಧ್ಯಮಗಳಿಂದ ತಿಳಿದುಕೊಂಡಿದ್ದೇನೆ. ಬಿಜೆಪಿಯಂತೂ ಸರಕಾರ ಉರುಳಿಸುವ ಕೆಲಸಕ್ಕೆ ಕೈ ಹಾಕುವುದಿಲ್ಲ.

Vijaya Karnataka Web 14 Jan 2019, 4:41 pm
ಹೊಸದಿಲ್ಲಿ: ಬಿಜೆಪಿ ಶಾಸಕರು, ಸಂಸದರು ಹಾಗೂ ಹಿರಿಯ ನಾಯಕರ ಸಭೆ ವರಿಷ್ಠರೊಂದಿಗೆ ಪೂರ್ಣಗೊಂಡಿದೆ. ಸಭೆ ಪೂರ್ಣಗೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.
Vijaya Karnataka Web ಯಡಿಯೂರಪ್ಪ
ಯಡಿಯೂರಪ್ಪ


ಸಭೆ ಮುಗಿದ ಹಿನ್ನೆಲೆಯಲ್ಲಿ ಕೆಲವರು ಹೊಸದಿಲ್ಲಿಯಲ್ಲೇ ಉಳಿದುಕೊಳ್ಳುತ್ತಿದ್ದಾರೆ. ಕೆಲವು ಗುರುಗ್ರಾಮಕ್ಕೆ ಹೋಗಿ ಬರುತ್ತೇವೆಂದು ತಿಳಿಸಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಯಡಿಯೂರಪ್ಪ ಮಾತನಾಡಿದರು.

ಸಂಕ್ರಾಂತಿಯ ನಂತರ ಮೈತ್ರಿ ಸರಕಾರ ಪತನಗೊಳ್ಳುತ್ತದೆ ಎಂಬುದನ್ನು ಮಾಧ್ಯಮಗಳಿಂದ ತಿಳಿದುಕೊಂಡಿದ್ದೇನೆ. ಬಿಜೆಪಿಯಂತೂ ಸರಕಾರ ಉರುಳಿಸುವ ಕೆಲಸಕ್ಕೆ ಕೈ ಹಾಕುವುದಿಲ್ಲ. ಅದು ತಾನಾಗೇ ಉರುಳಿದರೆ ನಾವು ಸರಕಾರ ರಚಿಸಲು ಸಿದ್ಧ ಎಂದು ಅವರು ಹೇಳಿದರು.

ನಾನು ಹಾಗೂ ಕೆಲವು ಹಿರಿಯ ನಾಯಕರು ಬೆಂಗಳೂರಿಗೆ ತೆರಳುತ್ತಿದ್ದೇವೆ. ಸರಕಾರ ಉರುಳಿಸುವುದು ನಮ್ಮ ಮುಖ್ಯ ಗುರಿಯಲ್ಲ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಗೆಲ್ಲಿಸುವುದೇ ನಮ್ಮ ಮುಖ್ಯ ಉದ್ದೇಶ. ಈ ವಿಷಯದ ಕುರಿತು ಹೊಸದಿಲ್ಲಿಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ