ಆ್ಯಪ್ನಗರ

ಆಪ್ತನ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ಸಂಸದೆ ಸ್ಮೃತಿ ಇರಾನಿ

ಉತ್ತರ ಪ್ರದೇಶದ ಅಮೇಠಿ ಕ್ಷೇತ್ರದ ನೂತನ ಸಂಸದೆಯಾಗಿ ಆಯ್ಕೆಯಾಗಿರುವ ಸ್ಮೃತಿ ಇರಾನಿ ಅವರ ಆಪ್ತ, ಬಿಜೆಪಿ ಕಾರ್ಯಕರ್ತನನ್ನು ಭಾನುವಾರ ನಸುಕಿನ ಜಾವ ಗುಂಡಿಕ್ಕಿ ಹತ್ಯೆಗೈಯ್ಯಲಾಗಿತ್ತು. ​

Vijaya Karnataka Web 26 May 2019, 5:31 pm
ಅಮೇಠಿ: ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾದ ಆಪ್ತ ಬೆಂಬಲಿಗ ಸುರೇಂದ್ರ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಸಂಸದೆ ಸ್ಮೃತಿ ಇರಾನಿ ಹೆಗಲು ಕೊಟ್ಟಿದ್ದಾರೆ.
Vijaya Karnataka Web irani


ಉತ್ತರ ಪ್ರದೇಶದ ಅಮೇಠಿ ಕ್ಷೇತ್ರದ ನೂತನ ಸಂಸದೆಯಾಗಿ ಆಯ್ಕೆಯಾಗಿರುವ ಸ್ಮೃತಿ ಇರಾನಿ ಅವರ ಆಪ್ತ, ಬಿಜೆಪಿ ಕಾರ್ಯಕರ್ತನನ್ನು ಭಾನುವಾರ ನಸುಕಿನ ಜಾವ ಗುಂಡಿಕ್ಕಿ ಹತ್ಯೆಗೈಯ್ಯಲಾಗಿತ್ತು.


ಬರೌಲಿಯಾ ಗ್ರಾಮದಲ್ಲಿರುವ ಸಿಂಗ್ ನಿವಾಸಕ್ಕೆ ನುಗ್ಗಿದ ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಪರಾರಿಯಾಗಿದ್ದರು. ತಕ್ಷಣ ಅವರನ್ನು ಲಖನೌನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಉಳಿಸಿಕೊಳ್ಳಲಾಗಲಿಲ್ಲ.

ವಿಜಯೋತ್ಸವ ಆಚರಿಸಿ ಮನೆಗೆ ಬಂದು ಮಲಗಿದ್ದ ಸಿಂಗ್ ನಸುಕಿನ ಜಾವ ತಾವೇ ಹೋಗಿ ಬಾಗಿಲು ತೆರೆದರು. ಬೈಕ್‌ನಲ್ಲಿ ಬಂದಿದ್ದ ಹಂತಕರು ಮೂರು ಬಾರಿ ಗುಂಡಿ ಹಾರಿಸಿ ಅಲ್ಲಿಂದ ಕಾಲ್ಕಿತ್ತರು ಎಂದು ತಿಳಿದುಬಂದಿದೆ.

ಮೃತರು ಗ್ರಾಮದ ಮಾಜಿ ಮುಖ್ಯಸ್ಥರೂ ಆಗಿದ್ದು, ಇರಾನಿಯವರಿಗೆ ಬಹಳ ಆಪ್ತರಾಗಿದ್ದರು .

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ