ಆ್ಯಪ್ನಗರ

ರೇಷನ್ ಪಡೆಯಲು ರಾಷ್ಟ್ರಧ್ವಜ ಖರೀದಿ ಕಡ್ಡಾಯ!: ಕೇಂದ್ರದ ವಿರುದ್ಧ ವರುಣ್ ಗಾಂಧಿ ಕಿಡಿ

Varun Gandhi On National Flag: ರಾಷ್ಟ್ರಧ್ವಜ ಖರೀದಿ ಮಾಡದೆ ಇದ್ದರೆ ಪಡಿತರ ನೀಡುವುದಿಲ್ಲ ಎಂದು ನ್ಯಾಯಬೆಲೆ ಅಂಗಡಿಯಲ್ಲಿ ಬಲವಂತವಾಗಿ ರಾಷ್ಟ್ರಧ್ವಜ ಮಾರಾಟ ಮಾಡುತ್ತಿರುವ ವಿಡಿಯೋ ಹಂಚಿಕೊಂಡಿರುವ ಬಿಜೆಪಿ ಸಂಸದ ವರುಣ್ ಗಾಂಧಿ, ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ.

Edited byಅಮಿತ್ ಎಂ.ಎಸ್ | Vijaya Karnataka Web 10 Aug 2022, 5:50 pm

ಹೈಲೈಟ್ಸ್‌:

  • ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ವರುಣ್ ಗಾಂಧಿ
  • ಹರ್ಯಾಣದ ಕರ್ನಾಲ್‌ನಲ್ಲಿ ನಡೆದ ಘಟನೆಯ ವಿಡಿಯೋ ವೈರಲ್
  • ರಾಷ್ಟ್ರಧ್ವಜ ಖರೀದಿಸಿದರೆ ಮಾತ್ರ ಪಡಿತರ ನೀಡುವ ನಡೆಗೆ ಆಕ್ರೋಶ

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web bjp mp varun gandhi hits out at centre after buy national flag to get ration video
ರೇಷನ್ ಪಡೆಯಲು ರಾಷ್ಟ್ರಧ್ವಜ ಖರೀದಿ ಕಡ್ಡಾಯ!: ಕೇಂದ್ರದ ವಿರುದ್ಧ ವರುಣ್ ಗಾಂಧಿ ಕಿಡಿ
ಚಂಡೀಗಡ: ಬಿಜೆಪಿ ಸಂಸದ ವರುಣ್ ಗಾಂಧಿ ಅವರು ತಮ್ಮದೇ ಸರ್ಕಾರದ ವಿರುದ್ಧ ಮತ್ತೊಮ್ಮೆ ಗುಡುಗಿದ್ದಾರೆ. ತಮ್ಮ ಪಾಲಿನ ಪಡಿತರ ಪಡೆಯಲು ನ್ಯಾಯಬೆಲೆ ಅಂಗಡಿಗಳಿಗೆ ಹೋಗುವ ಜನರಿಗೆ ರಾಷ್ಟ್ರಧ್ವಜ ಖರೀದಿಗಾಗಿ 20 ರೂಪಾಯಿ ನೀಡುವಂತೆ ಬಲವಂತ ಮಾಡಲಾಗುತ್ತಿದೆ ಎಂಬ ಆರೋಪ ಮಾಡುವ ವಿಡಿಯೋಗೆ ಸಂಬಂಧಿಸಿದಂತೆ ವರುಣ್ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಡಿತರ ಅಂಗಡಿಯ ವಿಡಿಯೋ ವೈರಲ್ ಆಗಿದ್ದು, ಅನೇಕರು ಇದರ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅನೇಕ ವಿಚಾರಗಳಲ್ಲಿ ತಮ್ಮದೇ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ಪಿಲಿಭಿಟ್ ಸಂಸದ ವರುಣ್ ಗಾಂಧಿ, ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. "75ನೇ ವರ್ಷದ ಸ್ವಾತಂತ್ರ್ಯ ಮಹೋತ್ಸವದ ಆಚರಣೆಯು ಬಡವರ ಮೇಲಿನ ಹೊರೆಯಾದರೆ ಅದು ದುರದೃಷ್ಟಕರ" ಎಂದು ಅವರು ಹೇಳಿದ್ದಾರೆ.
5 ವರ್ಷದಲ್ಲಿ 10 ಲಕ್ಷ ಕೋಟಿ ಸಾಲ ಮನ್ನಾ: ತಮ್ಮದೇ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ವರುಣ್ ಗಾಂಧಿ ಟೀಕೆ

"ಪಡಿತರ ಚೀಟಿ ಹೊಂದಿರುವವರಿಗೆ ರಾಷ್ಟ್ರಧ್ವಜ ಖರೀದಿ ಮಾಡುವಂತೆ ಒತ್ತಾಯಿಸಲಾಗುತ್ತಿದೆ. ಅವರು ಅದನ್ನು ನಿರಾಕರಿಸಿದರೆ ಅವರಿಗೆ ಸಿಗಬೇಕಾದ ಧಾನ್ಯಗಳನ್ನು ಕೊಡಲು ಒಪ್ಪುತ್ತಿಲ್ಲ. ಬಡವರ ಆಹಾರದ ರೊಟ್ಟಿಯನ್ನು ಕಸಿದುಕೊಳ್ಳುವ ಮೂಲಕ, ಪ್ರತಿ ಭಾರತೀಯನ ಹೃದಯದಲ್ಲಿ ಇರುವ ತ್ರಿವರ್ಣ ಧ್ವಜಕ್ಕೆ ದುಡ್ಡು ಪಡೆಯುತ್ತಿರುವುದು ನಾಚಿಕೆಗೇಡು" ಎಂದು ವರುಣ್ ಗಾಂಧಿ ಕಿಡಿಕಾರಿದ್ದಾರೆ.


ಹರ್ಯಾಣದ ಕರ್ನಲ್‌ನಲ್ಲಿ ಸುದ್ದಿ ವಾಹಿನಿಯೊಂದು ಸೆರೆಹಿಡಿದ ವಿಡಿಯೋದಲ್ಲಿ, ರಾಜ್ಯ ಸರ್ಕಾರಿ ಸ್ವಾಮ್ಯದ ಡಿಪೋದಲ್ಲಿ ಪಡಿತರ ಪಡೆಯಲು ಹೋದ ಬಡ ಜನರಿಗೆ, 20 ರೂ ಕೊಟ್ಟು ರಾಷ್ಟ್ರಧ್ವಜ ಖರೀದಿ ಮಾಡುವಂತೆ ಬಲವಂತ ಮಾಡಲಾಗುತ್ತಿದೆ ಎಂದು ಆರೋಪಿಸುವುದು ದಾಖಲಾಗಿತ್ತು.

ಪಡಿತರ ಖರೀದಿಸುವ ಪ್ರತಿ ವ್ಯಕ್ತಿಯೂ 20 ರೂ ಕೊಟ್ಟು ಧ್ವಜ ಖರೀದಿಸಿಬೇಕು ಮತ್ತು ಅದನ್ನು ತಮ್ಮ ಮನೆಯ ಮೇಲೆ ಹಾರಿಸಬೇಕು ಎಂದು ತಮಗೆ ಆದೇಶ ಬಂದಿದೆ ಎಂಬುದಾಗಿ ರೇಷನ್ ಡಿಪೋದ ಸಿಬ್ಬಂದಿಯೊಬ್ಬರು ಹೇಳಿದ್ದಾರೆ. "ರಾಷ್ಟ್ರಧ್ವಜ ಖರೀದಿಸಲು ನಿರಾಕರಿಸುವ ಯಾರಿಗೂ ರೇಷನ್ ಕೊಡಬಾರದು ಎಂದು ನಮಗೆ ಸೂಚನೆ ಕೊಡಲಾಗಿದೆ. ನಮಗೆ ಕೊಟ್ಟ ಆದೇಶವನ್ನು ನಾವು ಪಾಲಿಸಬೇಕಿದೆ" ಎಂದು ತಿಳಿಸಿದ್ದಾರೆ.
ಮೋದಿ ತಮ್ಮ ಸ್ನೇಹಿತರಿಗೆ ನಕ್ಷತ್ರ ಕೂಡ ತಂದು ಕೊಡುತ್ತಾರೆ: ರಾಹುಲ್ ಗಾಂಧಿ ಟೀಕಾಪ್ರಹಾರ

ಈ ವಿಡಿಯೋ ವೈರಲ್ ಆದ ಬಳಿಕ ಡಿಪೋದ ಮಾಲೀಕನ ಪರವಾನಗಿಯನ್ನು ರದ್ದುಗೊಳಿಸಲಾಗಿದೆ. ಜನರ ದಾರಿತಪ್ಪಿಸಿದ್ದಕ್ಕೆ ಡಿಪೋ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇಂತಹ ಘಟನೆಗಳು ಎಲ್ಲಿಯೇ ಕಂಡುಬಂದರೂ ಆಡಳಿತಾಧಿಕಾರಿಗಳಿಗೆ ತಿಳಿಸುವಂತೆ ಅವರು ಜನರಿಗೆ ಮನವಿ ಮಾಡಿದ್ದಾರೆ. ಜನರ ಅನುಕೂಲತೆಗಾಗಿ ರೇಷನ್ ಡಿಪೋಗಳಲ್ಲಿ ರಾಷ್ಟ್ರಧ್ವಜ ಮಾರಾಟ ಮಾಡಲಾಗುತ್ತಿದೆ. ಅವರು ಬೇಕಿದ್ದರೆ ಮಾತ್ರ ಖರೀದಿ ಮಾಡಬಹುದು ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಆಕ್ರೋಶ
ಈ ವಿಡಿಯೋ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ, "ಬಡವರು ತ್ರಿವರ್ಣ ಧ್ವಜ ಖರೀದಿಸದೆ ಇದ್ದರೆ, ಕೆಲಸವಿಲ್ಲ, ಹಣವೂ ಇಲ್ಲ ಮತ್ತು ಪಡಿತರ ಕೂಡ ಇಲ್ಲ. ಯಾರ ಲಾಭಕ್ಕಾಗಿ ಮೋದಿ ಸರ್ಕಾರ ರಾಷ್ಟ್ರಧ್ವಜಕ್ಕೆ ಹಣ ವಸೂಲಿ ಮಾಡುತ್ತಿದೆ? ಖಂಡಿತವಾಗಿಯೂ ಇದು ಖಾದಿ ಕೈಗಾರಿಕೆಗೆ ಅಲ್ಲ" ಎಂದು ಕಿಡಿಕಾರಿದ್ದಾರೆ.
ಲೇಖಕರ ಬಗ್ಗೆ
ಅಮಿತ್ ಎಂ.ಎಸ್
ವಿಜಯ ಕರ್ನಾಟಕದ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತ. 2009ರಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದಾರೆ. ದಿನಪತ್ರಿಕೆಗಳು ಮತ್ತು ವೆಬ್‌ ಪೋರ್ಟಲ್‌ಗಳಲ್ಲಿ ವರದಿಗಾರಿಕೆ, ಸಿನಿಮಾ ವರದಿಗಾರಿಕೆ, ಡೆಸ್ಕ್ ಹಾಗೂ ಜಿಲ್ಲಾ ಕರೆಸ್ಪಾಂಡೆಂಟ್ ಆಗಿ ಕೆಲಸ ಮಾಡಿದ ಅನುಭವ ಇವರಿಗಿದೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳು ಪ್ರಮುಖ ಆಸಕ್ತಿಯ ವಿಭಾಗಗಳು. ಮಾನವಾಸಕ್ತಿಯ ಹಾಗೂ ಸ್ಫೂರ್ತಿದಾಯಕ ಕಥನಗಳನ್ನು ನಿರೂಪಿಸುವುದು ವೃತ್ತಿಯಲ್ಲಿನ ನೆಚ್ಚಿನ ಸಂಗತಿ. ಪ್ರವಾಸ, ಕ್ರಿಕೆಟ್, ಓದು, ಕೃಷಿ ಇತರೆ ಇವರ ಆಸಕ್ತಿ ಮತ್ತು ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ