ಆ್ಯಪ್ನಗರ

ಕೊರೊನಾ ಲಕ್ಷಣ: ಆಸ್ಪತ್ರೆಗೆ ದಾಖಲಾದ ಬಿಜೆಪಿ ವಕ್ತಾರ ಸಂಬೀತ್ ಪಾತ್ರಾ!

ಕೊರೊನಾ ವೈರಸ್ ರೋಗ ಲಕ್ಷಣ ಕಂಡುಬಂದ ಕಾರಣಕ್ಕೆ, ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗುರುಗ್ರಾಮ್‌ ಬಳಿಯಿರುವ ಮೇದಾಂತ ಆಸ್ಪತ್ರೆಯಲ್ಲಿ ಪಾತ್ರಾ ಅವರನ್ನು ದಾಖಲಿಸಲಾಗಿದೆ.

Vijaya Karnataka Web 28 May 2020, 4:32 pm
ನವದೆಹಲಿ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಕೊರೊನಾ ವೈರಸ್ ರೋಗ ಲಕ್ಷಣ ಕಂಡುಬಂದ ಕಾರಣಕ್ಕೆ, ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೋವಿಡ್-19 ಗುಣಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ, ಸಂಬೀತ್ ಪಾತ್ರಾ ಗುರುಗ್ರಾಮ್‌ ಬಳಿಯಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚವಾಣ್‌ಗೆ ತಗುಲಿದ ಕೊರೊನಾ ವೈರಸ್ ಸೋಂಕು!

ಆದರೆ ಸಂಬೀತ್ ಪಾತ್ರಾ ಅವರಿಗೆ ಕೊರೊನ ವೈರಸ್ ಸೋಂಕು ತಗುಲಿದೆಯಾ ಅಥವಾ ಇಲ್ಲವಾ ಎಂಬುದು ಇನ್ನೂ ದೃಢಪಟ್ಟಿಲ್ಲ. ಮೇದಾಂತ ಆಸ್ಪತ್ರೆ ವೈದ್ಯರು ಪಾತ್ರಾ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿಯ ಪ್ರಖರ ವಕ್ತಾರರಾಗಿರುವ ಸಂಬೀರ್ ಪಾತ್ರಾ, ಮಾಧ್ಯಮಗಳಲ್ಲಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ನಿಲುವುಗಳನ್ನು ಅತ್ಯಂತ ವಸ್ತುನಿಷ್ಠವಾಗಿ ಪ್ರಚುರಪಡಿಸುವಲ್ಲಿ ಖ್ಯಾತಿ ಗಳಿಸಿದ್ದಾರೆ.

ಕಾಂಗ್ರೆಸ್ ನಾಯಕ ಸಂಜಯ್ ಝಾ ಅವರಿಗೆ ಕೊರೊನಾ ಪಾಸಿಟಿವ್: ಶೀಘ್ರ ಚೇತರಿಕೆಗೆ ಗಣ್ಯರ ಪ್ರಾರ್ಥನೆ!

ತಮ್ಮ ಪ್ರಖರ ಮಾತುಗಳಿಂದಲೇ ವಿಪಕ್ಷಗಳ ವಕ್ತಾರರ ಬಾಯಿ ಮುಚ್ಚಿಸುವಲ್ಲಿ ನಿಸ್ಸೀಮರಾಗಿರುವ ಸಂಬೀತ್ ಪಾತ್ರಾ, ತಮ್ಮ ಮಾತೃ ರಾಜ್ಯ ಒಡಿಶಾದಲ್ಲೂ ಪಕ್ಷ ಸಂಘಟನೆಯಲ್ಲಿ ಅತ್ಯಂತ ಪ್ರಮುಖ ಪಾತ್ರ ನಿರ್ವಜಿಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ