ಆ್ಯಪ್ನಗರ

ಮನಸ್ಸು ಬದಲಿಸಿದ ಉಮಾ ಭಾರತಿ: ಭೂಮಿ ಪೂಜೆಗೆ ಅಯೋಧ್ಯೆ ತಲುಪಿದ ಬಿಜೆಪಿ ಫೈರ್ ಬ್ರ್ಯಾಂಡ್!

ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ಭವ್ಯ ರಾಮ ಮಂದಿರಕ್ಕೆ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಯೋಧ್ಯೆ ತಲುಪಿರುವ ಉಮಾ ಭಾರತಿ, ಕಾರ್ಯಕ್ರಮಕ್ಕೆ ಬರದಿರುವ ಈ ಹಿಂದಿನ ತಮ್ಮ ನಿರ್ಧಾರವನ್ನು ಬದಲಸಿದ್ದಾರೆ.

Vijaya Karnataka Web 5 Aug 2020, 11:27 am
ಅಯೋಧ್ಯೆ: ಮಾರಕ ಕೊರೊನಾ ವೈರಸ್ ಹಾವಳಿಯ ಹಿನ್ನೆಲೆಯಲ್ಲಿ ಅಅಯೋಧ್ಯೆಯಲ್ಲಿ ಇಂದು(ಬುಧವಾರ) ನಡೆಯಲಿರುವ ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮ್ಕಕೆ ಬರುವುದಿಲ್ಲ ಎಂದು ಹೇಳಿದ್ದ ಬಿಜೆಪಿ ನಾಯಕಿ ಉಮಾ ಭಾರತಿ, ಇದೀಗ ಅಯೋಧ್ಯೆಗೆ ಬಂದಿಳಿಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
Vijaya Karnataka Web Uma Bharti
ಅಯೋಧ್ಯೆ ತಲುಪಿದ ಉಮಾ ಭಾರತಿ


ಹೌದು, ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಯೋಧ್ಯೆ ತಲುಪಿರುವ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷೆ ಉಮಾ ಭಾರತಿ, ಈ ಹಿಂದಿನ ತಮ್ಮ ನಿರ್ಧಾರವನ್ನು ಬದಲಸಿದ್ದಾರೆ ಎನ್ನಲಾಗಿದೆ.

ಅಯೋಧ್ಯೆ ಭೂಮಿ ಪೂಜೆಯಲ್ಲಿ ನಾನು ಭಾಗವಹಿಸುವುದಿಲ್ಲ..! : ಬಿಜೆಪಿ ನಾಯಕಿ ಉಮಾ ಭಾರತಿ

ಕೊರೊನಾ ವೈರಸ್ ಹಾವಳಿಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರ ಆರೋಗ್ಯದ ಕುರಿತು ತಮಗೆ ಚಿಂತೆಯಾಗುತ್ತಿದೆ ಎಂದಿದ್ದ ಉಮಾ ಭಾರತಿ, ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದಿದ್ದರು.

ಇನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉತ್ತರಪ್ರದೇಶ ರಾಜ್ಯಪಾಲರಾದ ಆನಂದಿಬೆನ್‌ ಪಟೇಲ್ ಕೂಡ ಅಯೋಧ್ಯೆಗೆ ತಲುಪಿದ್ದು, ಪ್ರಧಾನಿ ಮೋದಿ ಅವರ ಆಗಮನಕ್ಕಾಗಿ ಕಾಯುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ