ಆ್ಯಪ್ನಗರ

370 ರದ್ದು, ತಲಾಕ್‌ ನಿಷೇಧಕ್ಕೆ ವರ್ಷ: ದೇಶಾದ್ಯಂತ ಕಾರ್ಯಕ್ರಮ!

370ನೇ ವಿಧಿ ರದ್ದತಿ ಮತ್ತು ತ್ರಿವಳಿ ತಲಾಕ್‌ ನಿಷೇಧಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ದೇಶಾದ್ಯಂತ ಜುಲೈ 28ರಿಂದ ಆ.3ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಬಿಜೆಪಿಯು ರಾಜ್ಯ ಘಟಕಗಳಿಗೆ ಸೂಚನೆ ನೀಡಿದೆ.

Vijaya Karnataka Web 24 Jul 2020, 11:30 pm
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದತಿ ಮತ್ತು ತ್ರಿವಳಿ ತಲಾಕ್‌ ನಿಷೇಧಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ದೇಶಾದ್ಯಂತ ಜುಲೈ 28ರಿಂದ ಆ.3ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಬಿಜೆಪಿಯು ರಾಜ್ಯ ಘಟಕಗಳಿಗೆ ಸೂಚನೆ ನೀಡಿದೆ.
Vijaya Karnataka Web 370


ವರ್ಚುಯಲ್‌ ರಾರ‍ಯಲಿಗಳ ಮೂಲಕ ಈ ಎರಡೂ ಸಂಗತಿಗಳ ಮಹತ್ವದ ಬಗ್ಗೆ ಜನರಿಗೆ ತಿಳಿಸಬೇಕು. ಆ.3ರಂದು ಎಲ್ಲ ರಾಜ್ಯಗಳ ರಾಜಧಾನಿಯಲ್ಲಿ ಸುದ್ದಿಗೋಷ್ಠಿ ನಡೆಸಬೇಕು. ಆಗಸ್ಟ್‌ 5ರಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್‌ ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಶೇಷ ಕಾರ್ಯಕ್ರಮ ನಡೆಯಲಿದೆ.

ಪ್ರತಿ ಜಿಲ್ಲೆಯಲ್ಲಿ 50 ಮಂದಿ ಶಿಕ್ಷಿತರು, ಸಾಮಾಜಿಕ ಕಾರ್ಯಕರ್ತರನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು ಎಂದು ರಾಜ್ಯ ಘಟಕಗಳಿಗೆ ಸೂಚಿಸಲಾಗಿದೆ. ಕಳೆದ ವರ್ಷ ಆಗಸ್ಟ್‌ 1ರಂದು ತ್ರಿವಳಿ ತಲಾಖ್‌ ನಿಷೇಧಿಸುವ ವಿಧೇಯಕಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅಂಕಿತ ಹಾಕಿದ್ದಾರೆ. ಆ.5ರಂದು 370ನೇ ವಿಧಿ ರದ್ದುಪಡಿಸಲಾಗಿದೆ.

ಭಾರತದ ವಿರುದ್ಧ ಚೀನಾ-ಪಾಕ್‌ ಜೈವಿಕ ಸಮರ? ವುಹಾನ್‌ ಲ್ಯಾಬ್‌ನಲ್ಲೇ ಸಂಶೋಧನೆ!

ದೇಶದಲ್ಲಿ 370 ವಿಧಿ ರದ್ದಾಗಿದ್ದು, ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಕೊನೆಗೊಂಡಿದೆ. ಜತೆಗೆ ತ್ರಿವಳಿ ತಲಾಖ್‌ ಪದ್ದತಿಗೂ ನಿಷೇಧ ಹೇರಲಾಗಿದೆ. ಇನ್ನು ದೇಶದಲ್ಲಿ ಎಲ್ಲರಿಗೂ ಏಕರೂಪ ನಾಗರಿಕ ಸಂಹಿತೆ (ಯುನಿಫಾರ್‌ ಸಿವಿಲ್ ಕೋಡ್-ಯುಸಿಸಿ) ಜಾರಿ ಬಹುಕಾಲದಿಂದ ಬಿಜೆಪಿಯ ರಾಜಕೀಯ ಕಾರ್ಯಸೂಚಿಯಲ್ಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ