ಆ್ಯಪ್ನಗರ

ಶಿವಸೇನೆ-ಬಿಜೆಪಿ ಚುನಾವಣಾ ಮೈತ್ರಿ ಈಗ ಅಧಿಕೃತ

ರಾಜ್ಯದ 48 ಲೋಕಸಭೆ ಕ್ಷೇತ್ರಗಳ ಪೈಕಿ ಬಿಜೆಪಿ 25 ಸ್ಥಾನಗಳಲ್ಲಿ ಹಾಗೂ ಶಿವಸೇನೆ 23 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.

Vijaya Karnataka 19 Feb 2019, 5:00 am
ಮುಂಬಯಿ: ಹಲವು ತಿಂಗಳುಗಳ ಆಂತರಿಕ ಸಂಘರ್ಷಕ್ಕೆ ಮಂಗಳ ಹಾಡಿರುವ ಬಿಜೆಪಿ ಮತ್ತು ಶಿವಸೇನೆ, ಮೈತ್ರಿ ಮರುಸ್ಥಾಪನೆಯನ್ನು ಸೋಮವಾರ ಅಧಿಕೃತವಾಗಿ ಪ್ರಕಟಿಸಿವೆ.
Vijaya Karnataka Web bjp


''ಉಭಯ ಪಕ್ಷಗಳ ನಡುವೆ ಚುನಾವಣಾ ಪೂರ್ವ ಹೊಂದಾಣಿಕೆ ಅಖೈರುಗೊಂಡಿದೆ. ರಾಜ್ಯದ 48 ಲೋಕಸಭೆ ಕ್ಷೇತ್ರಗಳ ಪೈಕಿ ಬಿಜೆಪಿ 25 ಸ್ಥಾನಗಳಲ್ಲಿ ಹಾಗೂ ಶಿವಸೇನೆ 23 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ವರ್ಷಾಂತ್ಯದಲ್ಲಿ ನಡೆಯುವ ವಿಧಾನಸಭೆ ಚುನಾವಣೆಯನ್ನೂ ಒಟ್ಟಾಗಿಯೇ ಎದುರಿಸುತ್ತೇವೆ,'' ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.

ಲೋಕಸಭೆ ಚುನಾವಣೆ ಬಳಿಕ ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟ 45 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ವಿಧಾನಸಭೆ ಚುನಾವಣೆಯಲ್ಲಿಯೂ ಹಿಂದಿನ ಸಲಕ್ಕಿಂತ ಉತ್ತಮ ಸಾಧನೆ ಮಾಡಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಾ ಭೇಟಿ: ಇದಕ್ಕೂ ಮೊದಲು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಶಿವಸೇನೆ ವರಿಷ್ಠ ಉದ್ಧವ್‌ ಠಾಕ್ರೆ ಅವರ ನಿವಾಸಕ್ಕೆ ತೆರಳಿ ಮೈತ್ರಿ ಒಡಂಬಡಿಕೆ ಕುರಿತು ಅಂತಿಮ ಸುತ್ತಿನ ಮಾತುಕತೆ ನಡೆಸಿದರು. ''ಒಂದೇ ಸಿದ್ಧಾಂತ ಹೊಂದಿರುವ ನಾವು ಬೇರೆಬೇರೆಯಾಗಿ ಕಣಕ್ಕೆ ಇಳಿದರೆ ಪ್ರಯೋಜನ ಇಲ್ಲ,'' ಎಂಬುದನ್ನು ಠಾಕ್ರೆ ಅವರಿಗೆ ಮನವರಿಕೆ ಮಾಡಿಕೊಟ್ಟರು.

ಠಾಕ್ರೆ ಹರ್ಷ: ಹಾಲಿ ಒಡಂಬಡಿಕೆ ಬಗ್ಗೆ ಉದ್ಧವ್‌ ಠಾಕ್ರೆ ಹರ್ಷ ವ್ಯಕ್ತಪಡಿಸಿದ್ದಾರೆ. ''ಕಳೆದ 30 ವರ್ಷಗಳಿಂದ ಶಿವಸೇನೆ ಮತ್ತು ಬಿಜೆಪಿಯನ್ನು ಜನ ನೋಡುತ್ತಿದ್ದಾರೆ. 25 ವರ್ಷಗಳಿಂದ ನಾವಿಬ್ಬರೂ ಕೂಡಿಯೇ ಚುನಾವಣೆ ಎದುರಿಸಿದ್ದೇವೆ. ಆದರೆ, ಇತ್ತೀಚಿನ 5 ವರ್ಷಗಳಿಂದ ಗೊಂದಲ ಶುರುವಾಗಿತ್ತು. ಅದು ಈಗ ನಿವಾರಣೆಯಾಗಿದೆ,'' ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ