ಆ್ಯಪ್ನಗರ

ಕರ್ನಾಟಕ ಸರಕಾರ ಉರುಳಿಸಲು ಬಿಜೆಪಿ ಹಣ ಬಲ, ಅಧಿಕಾರ ಬಲ ದುರ್ಬಳಕೆ: ರಾಹುಲ್ ಗಾಂಧಿ

ಕರ್ನಾಟಕದಲ್ಲಿ ದೋಸ್ತಿ ಸರಕಾರವನ್ನು ಉರುಳಿಸಲು ಬಿಜೆಪಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಕಳೆದ ಒಂದು ವರ್ಷದಿಂದ ಆರು ಬಾರಿ ಬಿಜೆಪಿ ಈ ರೀತಿಯ ಪ್ರಯತ್ನ ಮಾಡಿದೆ ಎಂದು ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ.

Vijaya Karnataka Web 12 Jul 2019, 8:56 pm
ಅಹಮದಾಬಾದ್‌: ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿಗೆ ಬಿಜೆಪಿಯೇ ನೇರ ಹೊಣೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.
Vijaya Karnataka Web ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ


ಅಹಮದಾಬಾದ್‌ನಲ್ಲಿ ಸುದ್ದಿಗಾರರೊಂದಿಗೆ ರಾಹುಲ್‌ ಗಾಂಧಿ ಮಾತನಾಡಿದರು.

ಹಣ ಬಲ, ಅಧಿಕಾರ ಬಲ, ಬೆದರಿಕೆ ತಂತ್ರವನ್ನು ಬಿಜೆಪಿ ಅನುಸರಿಸುತ್ತಿದೆ. ರಾಜ್ಯ ಸರಕಾರಗಳನ್ನು ಉರುಳಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ ಎಂದರು.

ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರವನ್ನು ಬಿಕ್ಕಟ್ಟಿಗೆ ಸಿಲುಕಿಸಲಾಗಿದೆ. ಇದಕ್ಕೆ ಬಿಜೆಪಿ ವರಿಷ್ಠ ನಾಯಕರ ಕುಮ್ಮಕ್ಕಿದೆ ಎಂದರು.

ಇದೇ ರೀತಿ ಗೋವಾ ಮತ್ತು ಈಶಾನ್ಯ ರಾಜ್ಯಗಳಲ್ಲೂ ಬಿಜೆಪಿ ಸರಕಾರಗಳನ್ನು ಉರುಳಿಸಲು ಪ್ರಯತ್ನಿಸುತ್ತಿದೆ. ಎಲ್ಲ ಬೆಳವಣಿಗೆಗಳು ಸ್ಪಷ್ಟವಾಗಿದೆ ಎಂದು ರಾಹುಲ್ ದೂರಿದರು.

ಬಿಜೆಪಿಯು ಇದೇ ರೀತಿ ಎಲ್ಲಡೆ ಮಾಡುತ್ತಿರುವುದು ಅಧಿಕಾರದ ಸಂಪೂರ್ಣ ದುರುಪಯೋಗ ಆಗುತ್ತಿದ್ದಕ್ಕೆ ಸಾಕ್ಷಿಯಾಗಿದೆ. ಆದರೆ ಕರ್ನಾಟಕದಲ್ಲಿ ದೋಸ್ತಿ ಸರಕಾರವನ್ನು ಅಲುಗಾಡಿಸಲು ಆಗದು ಎಂದು ರಾಹುಲ್‌ ಗಾಂಧಿ ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ