ಆ್ಯಪ್ನಗರ

ಜಮ್ಮು: ಪಿಡಿಪಿ ಕಚೇರಿ ಮುಂಭಾಗ ರಾಷ್ಟ್ರಧ್ವಜ ಹಾರಿಸಿದ ಬಿಜೆಪಿ ಕಾರ್ಯಕರ್ತರು!

ಭಾರತದ ತ್ರಿವರ್ಣ ಧ್ವಜ ಹಾರಿಸುವುದಿಲ್ಲ ಎಂಬ ಮೆಹಬೂಬಾ ಮುಫ್ತಿ ಹೇಳಿಕೆಗೆ ಆಕ್ರೋಶ ಭುಗಿಲೆದ್ದಿದ್ದು, ಮುಫ್ತಿ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರ ಗುಂಪೊಂದು ಜಮ್ಮುವಿನಲ್ಲಿರುವ ಪಿಡಿಪಿ ಕಚೇರಿ ಮೇಲೆ ತ್ರಿವರ್ಗಣ ಧ್ವಜ ಹಾರಿಸಿದ್ದಾರೆ.

Vijaya Karnataka Web 26 Oct 2020, 4:28 pm
ಜಮ್ಮು: ಜಮ್ಮು ಮತ್ತು ಕಾಶ್ಮೀರಕ್ಕೆ ಈ ಹಿಂದೆ ಇದ್ದ ರಾಜ್ಯ ಧ್ವಜವನ್ನು ಮರಳಿ ಅಧಿಕೃತಗೊಳಿಸುವವರೆಗೂ ತಾವು ರಾಷ್ಟ್ರಧ್ವಜ ಹಾರಿಸುವುದಿಲ್ಲ ಎಂಬ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹೇಳಿಕೆಗೆ ಆಕ್ರೋಶ ಭುಗಿಲೆದ್ದಿದೆ.
Vijaya Karnataka Web PDP Office
ಪಿಡಿಪಿ ಕಚೇರಿ ಮುಂಭಾಗ ರಾಷ್ಟ್ರಧ್ವಜ ಹಾರಿಸಿದ ಬಿಜೆಪಿ ಕಾರ್ಯಕರ್ತರು


ಮೆಹಬೂಬಾ ಮುಫ್ತಿ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರ ಗುಂಪೊಂದು ಜಮ್ಮುವಿನಲ್ಲಿರುವ ಪಿಡಿಪಿ ಕಚೇರಿಗೆ ನುಗ್ಗಿ, ಕಚೇರಿ ಮುಂಭಾಗದಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸಿದೆ.

ಜಮ್ಮುವಿನಲ್ಲಿರುವ ಪಿಡಿಪಿ ಕಚೇರಿಗೆ ಏಕಾಏಕಿ ನುಗ್ಗಿದ ಬಿಜೆಪಿ ಕಾರ್ಯಕರ್ತರ ಗುಂಪು, ಭಾರತ್ ಮಾತ್ ಕೀ ಜೈ ಘೋಷಣೆ ಕೂಗುತ್ತಾ ಕಚೇರಿ ಮೇಲೆ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸಿತು.

ಬಿಹಾರ ಚುನಾವಣೆಯಲ್ಲಿ ಆರ್ಟಿಕಲ್ 370 ಪ್ರಸ್ತಾಪ: ಪ್ರಧಾನಿ ಭಾಷಣ ಟೀಕಿಸಿದ ಮೆಹಬೂಬಾ ಮುಫ್ತಿ!


ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಮೆಹಬೂಬಾ ಮುಫ್ತಿ ಈ ಕೂಡಲೇ ದೇಶದ ಕ್ಷಮೆ ಕೋರಬೇಕು ಎಂಧು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು.

ಇನ್ನು ಸುದ್ದಿ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದವೂ ಆಗಿದೆ.

ಮುಫ್ತಿ ಭೇಟಿ ಮಾಡಿದ ಅಬ್ದುಲ್ಲಾ: ಗೃಹ ಬಂಧನದಿಂದ ಬಿಡುಗಡೆಗೊಂಡ ನಾಯಕರಿಂದ ಚರ್ಚೆ!

ಶ್ರೀನಗರದಲ್ಲೂ ಪ್ರತಿಭಟನೆ:

ಅದರಂತೆ ರಾಷ್ಟ್ರಧ್ವಜದ ಕುರಿತು ಮೆಹಬೂಬಾ ಮುಫ್ತಿ ನೀಡಿರುವ ಹೇಳಿಕೆಯನ್ನು ಖಂಡಿಸಿ, ಶ್ರೀನಗರದಲ್ಲೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.


ಶ್ರೀನಗರದ ಲಾಲ್‌ಚೌಕ್‌ದಲ್ಲಿ ರಾಷ್ಟ್ರಧ್ವಜ ಹಾರಿಸಲು ಮುಂದಾದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

14 ತಿಂಗಳುಗಳ ಬಳಿಕ ಗೃಹ ಬಂಧನದಿಂದ ಬಿಡುಗಡೆಗೊಂಡ ಮೆಹಬೂಬಾ ಮುಫ್ತಿ!

ಒಟ್ಟಿನಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಿಸುವುದಿಲ್ಲ ಎಂಬ ಮೆಹಬೂಬಾ ಮುಫ್ತಿ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಮುಫ್ತಿ ಕ್ಷಮೆ ಕೋರಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ