ಆ್ಯಪ್ನಗರ

ಕುತೂಹಲ ಮೂಡಿಸಿದ ಬಿಎಲ್‌ ಸಂತೋಷ್‌-ಯಡಿಯೂರಪ್ಪ ಭೇಟಿ, ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ

ಕರ್ನಾಟಕ ರಾಜ್ಯ ಸಚಿವ ಸಂಪುಟ ಕಗ್ಗಂಟ್ಟು ಮುಂದುವರಿದಿದೆ. ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪಗೆ ಸಚಿವ ಸಂಪುಟ ರಚನೆ ಮಾಡಲು ಬಿಜೆಪಿ ಹೈಕಮಾಂಡ್‌ ಇನ್ನೂ ಓಕೆ ಮಾಡಿಲ್ಲ. ಬಹುತೇಕ ಶನಿವಾರ ಇದು ಪೂರ್ಣಗೊಳ್ಳುವ ನಿರೀಕ್ಷೆ ಇದೆ.

Vijaya Karnataka Web 16 Aug 2019, 6:12 pm
ಹೊಸದಿಲ್ಲಿ: ರಾಜ್ಯ ಸಚಿವ ಸಂಪುಟ ರಚನೆ ಮಾಡಲು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಭಾರಿ ಕಸರತ್ತು ನಡೆಸುತ್ತಿದ್ದಾರೆ.
Vijaya Karnataka Web ಬಿಎಲ್‌ ಸಂತೋಷ್‌, ಬಿಎಸ್‌ ಯಡಿಯೂರಪ್ಪ
ಬಿಎಲ್‌ ಸಂತೋಷ್‌, ಬಿಎಸ್‌ ಯಡಿಯೂರಪ್ಪ


ಹೊಸದಿಲ್ಲಿಯಲ್ಲಿ ಬೀಡು ಬಿಟ್ಟಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಮೋದಿ, ಅಮಿತ್ ಶಾ ಸೇರಿದಂತೆ ಕೇಂದ್ರ ಸಚಿವರನ್ನು ಭೇಟಿ ಮಾಡುತ್ತಿದ್ದಾರೆ. ಸ್ವಾಮಿ ಕಾರ್ಯ, ಸ್ವ ಕಾರ್ಯ ಎಂಬಂತೆ ನೆರೆ ಪರಿಹಾರ ಕೇಳುವ ನೆಪದಲ್ಲಿ ಸಚಿವ ಸಂಪುಟ ರಚನೆಗೆ ಗ್ರೀನ್‌ ಸಿಗ್ನಲ್‌ ಪಡೆಯಲು ಪ್ರಯತ್ನಿಸುತ್ತಿದ್ದಾರೆ.

ಈ ಸಂದರ್ಭದಲ್ಲಿಯೇ ಬಿ.ಎಲ್‌. ಸಂತೋಷ್ ಕೂಡ ಹೊಸದಿಲ್ಲಿಯಲ್ಲಿ ಬೀಡು ಬಿಟ್ಟಿರುವುದು ಭಾರಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಬಿಎಲ್‌ ಸಂತೋಷ್‌ ಅವರು ಯಡಿಯೂರಪ್ಪ ಜತೆ ಹೊಸದಿಲ್ಲಿಯ ಕರ್ನಾಟಕ ಭವನದಲ್ಲಿ ಕೆಲವು ಗಂಟೆಗಳ ಮಾತುಕತೆ ನಡೆಸಿದರು.

ಕೆಲವು ಮೂಲಗಳ ಪ್ರಕಾರ ಯಡಿಯೂರಪ್ಪ ಅವರ ಬಳಿ ಒಂದು ಸಚಿವಾಕಾಂಕ್ಷಿಗಳ ಪಟ್ಟಿ ಇದೆ. ಬಿಎಲ್‌ ಸಂತೋಷ್ ಅವರ ಬಳಿ ಮತ್ತೊಂದು ಸಚಿವಾಕಾಂಕ್ಷಿಗಳ ಪಟ್ಟಿ ಇದೆ.

ಈ ಹಿನ್ನೆಲೆಯಲ್ಲಿ ಉಭಯ ನಾಯಕರು ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ಇಬ್ಬರ ಪಟ್ಟಿಯನ್ನು ಶನಿವಾರ ಅಮಿತ್ ಶಾ ಅವರ ಮುಂದಿಡಲಾಗುತ್ತದೆ. ನಂತರ ಅಮಿತ್ ಶಾ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ.

ಬಿಜೆಪಿ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ಸಿಕ್ಕರೆ ಭಾನುವಾರ ಅಥವಾ ಸೋಮವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ನಿರೀಕ್ಷೆ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ