ಆ್ಯಪ್ನಗರ

ಸಂಸತ್ತಿನ ಬಜೆಟ್‌ ಅಧಿವೇಶನ ಆಗಸ್ಟ್‌ 7ರವರೆಗೆ ವಿಸ್ತರಣೆ

ಸಂಸತ್ತಿನ ಬಜೆಟ್‌ ಅಧಿವೇಶನ ಜುಲೈ 26ರಂದು ಕೊನೆಗೊಳ್ಳಬೇಕಾಯಿತು. ಆದರೆ ಕೆಲವು ವಿಧೇಯಕಗಳಿಗೆ ಅಂಗೀಕಾರ ಪಡೆಯಬೇಕಾಗಿರುವುದರಿಂದ ವಿಸ್ತರಣೆ ಮಾಡಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.

Vijaya Karnataka Web 25 Jul 2019, 9:32 pm
ಹೊಸದಿಲ್ಲಿ: ಸಂಸತ್ತಿನ ಬಜೆಟ್ ಅಧಿವೇಶನ ಆಗಸ್ಟ್ 7ರ ವರೆಗೆ ಮುಂದುವರಿಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಷಿ ಲೋಕಸಭೆಯಲ್ಲಿ ತಿಳಿಸಿದರು.
Vijaya Karnataka Web ಸಂಸತ್‌ ಭವನ
ಸಂಸತ್ ಭವನ


ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಹೊಸದಿಲ್ಲಿಯಲ್ಲಿ ಗುರುವಾರ ಸಂಜೆ ಈ ಕುರಿತು ನಿರ್ಧಾರ ತೆಗೆದುಕೊಂಡಿದೆ.

ಹಲವು ವಿಧೇಯಕಗಳು ಲೋಕಸಭೆಯಲ್ಲಿ ಅಂಗೀಕಾರ ಪಡೆಯಬೇಕಿರುವುದರಿಂದ ಸಂಸತ್‌ ಅಧಿವೇಶನವನ್ನು ಆಗಸ್ಟ್‌ 7ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.

ಲೋಕಸಭೆ ಅಧಿವೇಶನವನ್ನು ವಿಸ್ತರಿಸುವ ಸೂಚನೆಯನ್ನು ಕೇಂದ್ರ ಸರಕಾರ ಬುಧವಾರ ನೀಡಿತ್ತು. ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್‌ ಜಾವಡೇಕರ್‌ ಈ ಕುರಿತು ಮಾಹಿತಿ ನೀಡಿದ್ದರು.

ಲೋಕಸಭೆ ಅಧಿವೇಶನ ದಿನಗಳನ್ನು ಸಂಖ್ಯೆಯನ್ನು ಹೆಚ್ಚಿಸುವುದಕ್ಕೆ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ