ಆ್ಯಪ್ನಗರ

ನವೆಂಬರ್‌ನಲ್ಲಿ ಅಯೋಧ್ಯಾ ರಾಮಮಂದಿರ ನಿರ್ಮಾಣ ಆರಂಭ: ಸುಬ್ರಹ್ಮಣ್ಯಂ ಸ್ವಾಮಿ

ಜಮ್ಮು-ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ್ದಾಯ್ತು, ಈಗ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಆಗಲೇಬೇಕು ಎನ್ನುತ್ತಿದ್ದ ಬಿಜೆಪಿ ಅಂಗಳದಿಂದಲೇ ಹೊಸ ಸುದ್ದಿ ಹೊರಬಿದ್ದಿದೆ. ಇದೇ ವರ್ಷ ನವೆಂಬರ್‌ನಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಆರಂಭ ಆಗಲಿದೆಯಂತೆ!

TIMESOFINDIA.COM 15 Sep 2019, 3:34 pm

ಅಯೋಧ್ಯೆ (ಉತ್ತರ ಪ್ರದೇಶ): ಇದೇ ವರ್ಷ ನವೆಂಬರ್‌ನಲ್ಲಿ ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಹೇಳಿದ್ಧಾರೆ. ಅಷ್ಟೇ ಅಲ್ಲ, ಸುಪ್ರೀಂ ಕೋರ್ಟ್‌ ಕೂಡಾ ರಾಮಮಂದಿರ ನಿರ್ಮಾಣದ ಪರವಾಗಿಯೇ ತೀರ್ಪು ಪ್ರಕಟಿಸಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದ್ದಾರೆ.
Vijaya Karnataka Web ayodhya ram mandir


2 ದಿನಗಳ ಕಾಲ ಅಯೋಧ್ಯಾ ಭೇಟಿಯಲ್ಲಿರುವ ಸುಬ್ರಹ್ಮಣ್ಯಂ ಸ್ವಾಮಿ, ಪೂಜಿಸುವ ಹಕ್ಕು ನಮ್ಮ ಮೂಲಭೂತ ಹಕ್ಕು. ಇದನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಭಗವಾನ್ ಶ್ರೀರಾಮ ಹುಟ್ಟಿದ ಸ್ಥಳದಲ್ಲಿ ನಿರ್ಮಾಣವಾಗುವ ರಾಮಮಂದಿರವನ್ನು ತೆರವುಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸ್ವಾಮಿ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ಆದಷ್ಟು ಬೇಗ ರಾಮಮಂದಿರ ನಿರ್ಮಿಸುವಂತೆ ಎನ್‌ಡಿಎ ಅಂಗಪಕ್ಷ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಮೋದಿ ಸರ್ಕಾರಕ್ಕೆ ಆಗ್ರಹಿಸಿದ ಮಾರನೇ ದಿನವೇ ಸುಬ್ರಹ್ಮಣ್ಯಂ ಸ್ವಾಮಿ ಅವರ ಈ ಪ್ರತಿಕ್ರಿಯೆ ಹೊರಬಿದ್ದಿದೆ. ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದ ನಿಲುವೇ ಮೋದಿ ಸರ್ಕಾರದ ದೃಢತೆಗೆ ಸಾಕ್ಷಿ ಎಂದು ಶಿವಸೇನೆ ಹೇಳಿತ್ತು. ಅನುಚ್ಛೇದ 370ರ ರದ್ದತಿ ಆಯ್ತು, ಇನ್ನೇನಿದ್ರೂ ರಾಮಮಂದಿರ ನಿರ್ಮಾಣ ಹಾಗೂ ಏಕರೂಪ ನಾಗರಿಕ ಸಂಹಿತೆ ಜಾರಿಯತ್ತ ಸರ್ಕಾರ ಗಮನ ಹರಿಸುವ ಸಮಯ ಬಂದಿದೆ ಎಂದು ಉದ್ಧವ್ ಠಾಕ್ರೆ ಮೋದಿ ಸರ್ಕಾರಕ್ಕೆ ಎಚ್ಚರಿಸಿದ್ದರು.

ಕಾಶ್ಮೀರ ವಿವಾದವನ್ನು ಬಗೆಹರಿಸುತ್ತೇವೆ ಎಂದು ಚುನಾವಣೆಗೆ ಮುನ್ನ ಎನ್‌ಡಿಎ ಹೇಳಿತ್ತು. ಆದ್ರೆ, ವಿರೋಧಪಕ್ಷಗಳು ಮಾತ್ರ ಯಾವುದೇ ಕಾರಣಕ್ಕೂ ಅನುಚ್ಛೇದ 370ರ ರದ್ದತಿಗೆ ಅವಕಾಶ ನೀಡಲ್ಲ ಎಂದಿದ್ದವು. ನಾವು ನಿಮಗೆ ಆಭಾರಿಯಾಗಿದ್ದೇವೆ ಎಂದು ಹೇಳಿದ್ದ ಉದ್ಧವ್‌ ಠಾಕ್ರೆ, ಆದಷ್ಟು ಬೇಗ ರಾಮಮಂದಿರ ನಿರ್ಮಾಣಕ್ಕೂ ಆಗ್ರಹಿಸಿದ್ದರು.

ಜನ ಜಾಗೃತರಾದರೆ ರಾಮಮಂದಿರ ನಿರ್ಮಾಣ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ