ಆ್ಯಪ್ನಗರ

ಕೊರೊನಾದಿಂದ ಗುಣಮುಖನಾಗಿ ಕಚೇರಿಯನ್ನೇ ಕೋವಿಡ್‌ ಆಸ್ಪತ್ರೆಯಾಗಿಸಿದ ಉದ್ಯಮಿ; ಬಡವರಿಗೆ ಫ್ರೀ ಚಿಕಿತ್ಸೆ!

ಕೋವಿಡ್‌ನಿಂದ ಗುಣಮುಖರಾಗಿರುವ ಗುಜರಾತ್ ಮೂಲದ ಉದ್ಯಮಿಯೊಬ್ಬರು ತಮ್ಮ ಕಚೇರಿಯನ್ನು ಕೊರೊನಾ ಆಸ್ಪತ್ರೆಯನ್ನಾಗಿ ಪರಿವರ್ತಿಸಿ ಬಡವರಿಗೆ ಉಚಿತ ಚಿಕಿತ್ಸೆ ನೀಡುತ್ತಿದ್ದಾರೆ. ​​ಗುಜರಾತ್‌ನ ಸೂರತ್‌ ನಿವಾಸಿಯಾಗಿರುವ ಖಾದರ್‌ ಶೇಕ್‌ ಎಂಬುವವರು ಈ ರೀತಿಯ ಉತ್ತಮ ಕೆಲಸ ಮಾಡುತ್ತಿದ್ದಾರೆ.

ANI 31 Jul 2020, 9:38 am
ಸೂರತ್‌: ಕೊರೊನಾ ಸೋಂಕು ಸದ್ಯ ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಎಲ್ಲರನ್ನು ಬೆಂಬಿಡದೆ ಕಾಡುತ್ತಿದೆ. ಈ ಸಮಯದಲ್ಲಿ ಅನೇಕ ಗಣ್ಯರು ಕೊರೊನಾ ಹೋರಾಟಕ್ಕೆ ಸಹಾಯ ಹಸ್ತ ಚಾಚಿದ್ದಾರೆ. ಇದೀಗ ಕೋವಿಡ್‌ನಿಂದ ಗುಣಮುಖರಾಗಿರುವ ಗುಜರಾತ್ ಮೂಲದ ಉದ್ಯಮಿಯೊಬ್ಬರು ತಮ್ಮ ಕಚೇರಿಯನ್ನು ಕೊರೊನಾ ಆಸ್ಪತ್ರೆಯನ್ನಾಗಿ ಪರಿವರ್ತಿಸಿ ಬಡವರಿಗೆ ಉಚಿತ ಚಿಕಿತ್ಸೆ ನೀಡುತ್ತಿದ್ದಾರೆ.
Vijaya Karnataka Web EeORMvWUMAAcvLm


ಗುಜರಾತ್‌ನ ಸೂರತ್‌ ನಿವಾಸಿಯಾಗಿರುವ ಖಾದರ್‌ ಶೇಕ್‌ ಎಂಬುವವರು ಸೂರತ್‌ನ ಶ್ರೇಯಂ ಕಾಂಪ್ಲೆಕ್ಸ್‌ನಲ್ಲಿರುವ ತಮ್ಮ ಕಚೇರಿಯನ್ನು 85 ಹಾಸಿಗೆಗಳ ಕೊರೊನಾ ವಾರ್ಡ್‌ ಆಗಿ ಪರಿವರ್ತಿಸಿದ್ದಾರೆ. ಇಲ್ಲಿ ಆರ್ಥಿಕವಾಗಿ ಹಿಂದುಳಿದ ಕೊರೊನಾ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಸರ್ಕಾರಿ ಅಧಿಕಾರಿಗಳಿಂದ ಪರವಾನಗಿ ಪಡೆದು ಕೊರೊನಾ ವಾರ್ಡ್‌ ಆರಂಭಿಸಿಸ್ಸು ಆಸ್ಪತ್ರೆಯ ರೀತಿಯಲ್ಲಿಯೇ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಿದ್ದಾರೆ.

ಕಳೆದ ತಿಂಗಳು ಉದ್ಯಮಿ ಖಾದರ್‌ ಶೇಕ್‌ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಆ ಹಿನ್ನೆಲೆ ಸೂರತ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಅವರು ದಾಖಲಾಗಿದ್ದರು. ಗುಣಮುಖರಾದ ಬಳಿಕ ಆಸ್ಪತ್ರೆ ನೀಡಿದ ಬಿಲ್‌ ನೋಡಿ ಶೇಕ್‌ ಗಾಬರಿಗೊಂಡಿದ್ದರು.

ಭಾರತ, ಭೂತಾನ್ ನೆಲ ಕಬಳಿಸಲು ಬಂದ ಚೀನಾ ಜಗತ್ತಿನ ತಾಳ್ಮೆ ಪರಿಶೀಲಿಸುತ್ತಿದೆ: ಅಮೆರಿಕ ಗುಡುಗು!

ಹೀಗಾಗಿ ತಮ್ಮ ಕಚೇರಿಯನ್ನೇ ಕೊರೊನಾ ವಾರ್ಡ್‌ ಆಗಿ ಪರಿವರ್ತಿಸಿ ಬಡವರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. 'ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ವೆಚ್ಚವು ದುಬಾರಿಯಾಗಿದೆ. ಅಷ್ಟು ದೊಡ್ಡ ಮೊತ್ತವನ್ನು ಬಡ ಜನರು ಭರಿಸುವುದು ಕಷ್ಟಸಾಧ್ಯ. ಹಾಗಾಗಿ, ಕೋವಿಡ್‌ ವಿರುದ್ಧದ ಹೋರಾಟಕ್ಕೆ ಕೈಜೋಡಿಸಲು ನಿರ್ಧರಿಸಿದೆ' ಎಂದು ಶೇಕ್‌ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ