ಆ್ಯಪ್ನಗರ

ಪುಲ್ವಾಮಾ ದಾಳಿ ಹಿನ್ನೆಲೆ: ಭದ್ರತೆ ಕುರಿತ ಸಂಪುಟ ಸಮಿತಿ ಮಹತ್ವದ ಸಭೆ ಮುಕ್ತಾಯ

'ಈ ಭಯೋತ್ಪಾದಕ ದಾಳಿಯನ್ನು ಜೈಷೆ ಮೊಹಮ್ಮದ್ ಉಗ್ರ ಸಂಘಟನೆ ನಡೆಸಿದೆ. ಇದಕ್ಕೆ ಪ್ರತೀಕಾರ ತೀರಿಸಲು ಏನು ಮಾಡಬೇಕೋ ಅದನ್ನು ಮಾಡಿಯೇ ತೀರುತ್ತೇವೆ ಎಂದು ದೇಶದ ಜನತೆಗೆ ಭರವಸೆ ನೀಡುತ್ತೇವೆ' ಎಂದು ರಾಜನಾಥ್ ಸಿಂಗ್‌ ಸಾರಿದರು.

Vijaya Karnataka Web 15 Feb 2019, 10:49 am
ಹೊಸದಿಲ್ಲಿ: ಪುಲ್ವಾಮಾ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಭದ್ರತೆ ಮೇಲಿನ ಸಂಪುಟ ಸಮಿತಿ ಇಂದು ಮಹತ್ವದ ಸಭೆ ಇದೀಗ ಮುಕ್ತಾಯಗೊಂಡಿದೆ. ವ್ಯೂಹಾತ್ಮಕ ನಿರ್ಧಾರಗಳನ್ನು ಕೈಗೊಳ್ಳುವ ಅತ್ಯುನ್ನತ ಅಧಿಕಾರದ ಸಮಿತಿ ಇದಾಗಿದ್ದು, ಗೃಹಸಚಿವರು, ರಕ್ಷಣಾ ಸಚಿವರು, ವಿದೇಶಾಂಗ ಸಚಿವರು ಮತ್ತು ಹಣಕಾಸು ಸಚಿವರು ಈ ಸಮಿತಿ ಸದಸ್ಯರಾಗಿದ್ದಾರೆ.
Vijaya Karnataka Web CCS Meeting (File Photo)


ಗೃಹಸಚಿವರು ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರಿಗೆ ಕರೆ ಮಾಡಿ ಸಂಪೂರ್ಣ ವಿವರಗಳನ್ನು ಪಡೆದಿದ್ದಾರೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗೌಬಾ, ಇಂಟೆಲಿಜೆನ್ಸ್ ಬ್ಯೂರೋ ನಿರ್ದೇಶಕ ರಾಜೀವ್ ಜೈನ್ ಮತ್ತು ಸಿಆರ್‌ಪಿಎಫ್‌ ಮಹಾ ನಿರ್ದೇಶಕ ಆರ್. ಆರ್‌. ಭಟ್ನಾಗರ್‌ ಅವರ ಜತೆ ಚರ್ಚಿಸಿದ್ದು ಅಗತ್ಯ ಸೂಚನೆಗಳನ್ನು ನೀಡಿದ್ದಾರೆ ಎಂದು ಸಚಿವಾಲಯದ ಅಧಿಕಾರಿ ತಿಳಿಸಿದರು.

ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ: ಪ್ರಧಾನಿ ಮೋದಿ
ಪುಲ್ವಾಮಾ ದಾಳಿಗೆ ಪ್ರತೀಕಾರ ಖಚಿತ: ರಾಜನಾಥ್ ಸಿಂಗ್
ಪುಲ್ವಾಮಾ ದಾಳಿ: ಅಂತಾರಾಷ್ಟ್ರೀಯ ಸಮುದಾಯ ಖಂಡನೆ, ಭಯೋತ್ಪಾದನೆ ವಿರುದ್ಧ ಭಾರತದ ಸಮರಕ್ಕೆ ಬೆಂಬಲ

ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಪುಲ್ವಾಮಾ ಜಿಲ್ಲೆಯಲ್ಲಿ ಗುರುವಾರ ನಡೆದ ಪಾಕ್ ಮೂಲದ ಜೈಷೆ ಮೊಹಮ್ಮದ್ ಉಗ್ರರ ದಾಳಿಗೆ ತಕ್ಕ ಪ್ರತೀಕಾರ ತೀರಿಸಲಾಗುವುದು ಎಂದು ಗೃಹಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಪುಲ್ವಾಮದಲ್ಲಿ ಮಂಡ್ಯದ ಯೋಧ ಹುತಾತ್ಮ, ನಾಲ್ಕು ದಿನಗಳ ಹಿಂದಷ್ಟೇ ರಜೆಯಿಂದ ಮರಳಿದ್ದರು!

'ಈ ಭಯೋತ್ಪಾದಕ ದಾಳಿಯನ್ನು ಜೈಷೆ ಮೊಹಮ್ಮದ್ ಉಗ್ರ ಸಂಘಟನೆ ನಡೆಸಿದೆ. ಇದಕ್ಕೆ ಪ್ರತೀಕಾರ ತೀರಿಸಲು ಏನು ಮಾಡಬೇಕೋ ಅದನ್ನು ಮಾಡಿಯೇ ತೀರುತ್ತೇವೆ ಎಂದು ದೇಶದ ಜನತೆಗೆ ಭರವಸೆ ನೀಡುತ್ತೇವೆ' ಎಂದು ರಾಜನಾಥ್ ಸಿಂಗ್‌ ಸಾರಿದರು.
ಪುಲ್ವಾಮಾ ದಾಳಿ ಬೆನ್ನಿಗೇ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕ್

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ