ಆ್ಯಪ್ನಗರ

ಮಮತಾ ಬ್ಯಾನರ್ಜಿಗೆ ಮುಖಭಂಗ: ಬಿಜೆಪಿ ರಥಯಾತ್ರೆಗೆ ಕೋಲ್ಕತಾ ಹೈಕೋರ್ಟ್‌ ಹಸಿರು ನಿಶಾನೆ

ಬಿಜೆಪಿಯ ಮೂರು ರಥಯಾತ್ರೆಗಳಿಗೆ ಹೈಕೋರ್ಟ್‌ ಹಸಿರು ನಿಶಾನೆ ನೀಡಿದೆ ಅಲ್ಲದೇ, ಕಾನೂನು ಸುವ್ಯವಸ್ಥೆ ಕಾಪಾಡಬೇಕು, ಸೂಕ್ತ ಭದ್ರತಾ ವ್ಯವಸ್ಥೆ ಕೈಗೊಳ್ಳಬೇಕು ಎಂದು ಸರಕಾರಕ್ಕೆ ಸೂಚನೆ ನೀಡಿದೆ.

Vijaya Karnataka Web 20 Dec 2018, 7:53 pm
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಡೆಸಲು ಉದ್ದೇಶಿಸಿದ್ದ ರಥಯಾತ್ರೆಗಳಿಗೆ ಕೋಲ್ಕತಾ ಹೈಕೋರ್ಟ್‌ ಅನುಮತಿ ನೀಡಿದೆ.

ಇದರೊಂದಿಗೆ ರಥಯಾತ್ರೆ ತಡೆಯಲು ಮುಂದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಮುಖಭಂಗವಾಗಿದೆ.

ಬಿಜೆಪಿಯ ಮೂರು ರಥಯಾತ್ರೆಗಳಿಗೆ ಹೈಕೋರ್ಟ್‌ ಹಸಿರು ನಿಶಾನೆ ನೀಡಿದೆ ಅಲ್ಲದೇ, ಕಾನೂನು ಸುವ್ಯವಸ್ಥೆ ಕಾಪಾಡಬೇಕು, ಸೂಕ್ತ ಭದ್ರತಾ ವ್ಯವಸ್ಥೆ ಕೈಗೊಳ್ಳಬೇಕು ಎಂದು ಸರಕಾರಕ್ಕೆ ಸೂಚನೆ ನೀಡಿದೆ.

ರಥಯಾತ್ರೆ ನಡೆಸಲು ಪಶ್ಚಿಮ ಬಂಗಾಳ ಸರಕಾರ ಅನುಮತಿ ನಿರಾಕರಿಸಿತ್ತು. ಇದಕ್ಕೆ ಪ್ರಶ್ನಿಸಿ ಕೋಲ್ಕತಾ ಹೈಕೋರ್ಟ್‌ಗೆ ಮನವಿ ಸಲ್ಲಿಸಲಾಗಿತ್ತು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ತಪಬ್ರತ ಚಕ್ರವರ್ತಿ ನೇತೃತ್ವದ ಹೈಕೋರ್ಟ್‌ ವಿಭಾಗೀಯ ಪೀಠ, ಕೆಲ ಷರತ್ತುಗಳನ್ನು ವಿಧಿಸಿ ರಥಯಾತ್ರೆಗೆ ಅನುಮತಿ ನೀಡಿದೆ.

ಕಾಣೂನು ಸುವ್ಯವಸ್ಥೆಗೆ ಯಾವುದೇ ರೀತಿಯ ಧಕ್ಕೆ ಬಾರದಂತೆ ರಥಯಾತ್ರೆ ಆಯೋಜಿಸಬೇಕು ಎಂದು ಬಿಜೆಪಿಗೆ ನ್ಯಾಯಪೀಠ ತಾಕೀತು ಮಾಡಿದೆ.

ಈ ಹಿಂದೆ ಕೂಚ್‌ಬಿಹಾರ್‌ನಿಂದ ಆರಂಭವಾಗಬೇಕಿದ್ದ ರಥಯಾತ್ರೆಗೆ ಕೋಲ್ಕತಾ ಹೈಕೋರ್ಟ್‌ ಏಕ ಸದಸ್ಯ ಪೀಠ ಅನುಮತಿ ನಿರಾಕರಿಸಿತ್ತು.

ಪ್ರಜಾಪ್ರಭುತ್ವ ರಕ್ಷಿಸಿ ಹೆಸರಿನಡಿ ರಥಯಾತ್ರೆ ನಡೆಸಲು ಬಿಜೆಪಿ ಸಜ್ಜಾಗಿದೆ. ಡಿಸೆಂಬರ್‌ 22, 24 ಮತ್ತು 26ರಂದು ರಥಯಾತ್ರೆ ಆಯೋಜಿಸುವ ಸಾಧ್ಯತೆ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ