ಆ್ಯಪ್ನಗರ

ರಾಮ ಮಂದಿರ ನಿರ್ಮಾಣಕ್ಕೆ ಕೋರ್ಟ್‌ ಆದೇಶದವರೆಗೆ ಕಾಯಲು ಸಾಧ್ಯವಿಲ್ಲ: ವಿಎಚ್‌ಪಿ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ನ್ಯಾಯಾಲಯದ ಆದೇಶಕ್ಕಾಗಿ ಹಿಂದೂಗಳು ದೀರ್ಘಾವಧಿ ಕಾಯಲು ಸಾಧ್ಯವಿಲ್ಲ...

Vijaya Karnataka 2 Jan 2019, 10:25 pm
ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ನ್ಯಾಯಾಲಯದ ಆದೇಶಕ್ಕಾಗಿ ಹಿಂದೂಗಳು ದೀರ್ಘಾವಧಿ ಕಾಯಲು ಸಾಧ್ಯವಿಲ್ಲ. ಸುಗ್ರೀವಾಜ್ಞೆ ಹೊರಡಿಸುವುದೇ ಮಂದಿರ ನಿರ್ಮಾಣಕ್ಕಿರುವ ಏಕೈಕ ಸೂಕ್ತ ಮಾರ್ಗ ಎಂದು ವಿಶ್ವ ಹಿಂದೂ ಪರಿಷತ್‌ (ವಿಎಚ್‌ಪಿ) ಹೇಳಿದೆ.
Vijaya Karnataka Web ರಾಮಮಂದಿರ
ರಾಮಮಂದಿರ


ನ್ಯಾಯಾಲಯ ಪ್ರಕ್ರಿಯೆ ಪೂರ್ಣಗೊಂಡ ಬಳಿಕವೇ ರಾಮ ಮಂದಿರ ನಿರ್ಮಾಣ ಕುರಿತ ಸೂಕ್ತ ನಿರ್ಧಾರ ಕೈಗೊಳ್ಳಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂದರ್ಶನವೊಂದರಲ್ಲಿ ಮಂಗಳವಾರ ನೀಡಿದ ಹೇಳಿಕೆಯ ಬೆನ್ನಲ್ಲೇ ವಿಎಚ್‌ಪಿ ಈ ಪ್ರತಿಕ್ರಿಯೆ ನೀಡಿದೆ.

''ಸದ್ಯದ ಪರಿಸ್ಥಿತಿಯಲ್ಲಿ ಹಿಂದೂ ಸಮಾಜದ ದೃಷ್ಟಿಕೋನವನ್ನು ಪರಿಗಣಿಸಿದರೆ, ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್‌ ಆದೇಶದಕ್ಕಾಗಿ ಧೀರ್ಘ ಸಮಯದವರೆಗೆ ಕಾಯಲು ಸಾಧ್ಯವಿಲ್ಲ. ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಮಂದಿರ ನಿರ್ಮಾಣ ಮಾಡುವುದೇ ಈಗಿರುವ ಸೂಕ್ತ ಮಾರ್ಗ'' ಎಂದು ವಿಎಚ್‌ಪಿ ಅಂತರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಅಲೋಕ್‌ ಕುಮಾರ್‌ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ಶೀಘ್ರವಾಗಿ ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ಆರ್‌ಎಸ್‌ಎಸ್‌, ವಿಎಚ್‌ಪಿ ಸೇರಿದಂತೆ ಹಿಂದೂ ಸಂಘಟನೆಗಳಿಂದ ಒತ್ತಡ ತೀವ್ರವಾದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಮಂಗಳವಾರ ಪ್ರತಿಕ್ರಿಯಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ