ಆ್ಯಪ್ನಗರ

ಅಪಘಾತಕ್ಕೀಡಾದ ಆರ್‌ಎಸ್‌ಎಸ್‌ ಮುಖ್ಯಸ್ಥರ ಬೆಂಗಾವಲು ವಾಹನ: ಮೋಹನ್‌ ಭಾಗವತ್‌ ಸೇಫ್‌

ಆರ್‌ಎಸ್‌ಎಸ್‌ ಮುಖ್ಯಸ್ಥರ ಬೆಂಗಾವಲು ಪಡೆ ವಾಹನವೊಂದು ಮಹಾರಾಷ್ಟ್ರದಲ್ಲಿ ಅಪಘಾತಕ್ಕೀಡಾಗಿದೆ. ಆದರೆ, ಮೋಹನ್‌ ಭಾಗವತ್‌ ಸಂಪೂರ್ಣ ಸುರಕ್ಷಿತವಾಗಿದ್ದಾರೆ ಎಂದು ಆರ್‌ಎಸ್‌ಎಸ್‌ ನಾಯಕ ರಾಜೀವ್‌ ತುಲಿ ಸ್ಪಷ್ಟಪಡಿಸಿದ್ದಾರೆ. ಅಪಘಾತದಲ್ಲಿ ಒಬ್ಬರು ಭದ್ರತಾ ಸಿಬ್ಬಂದಿಯ ಕಾಲು ಮುರಿದಿದೆ ಎಂದು ಸಹ ಅವರು ತಿಳಿಸಿದ್ದಾರೆ.

Times Now 16 May 2019, 9:00 pm
ಚಂದ್ರಾಪುರ: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಬೆಂಗಾವಲು ಪಡೆ ವಾಹನ ಅಪಘಾತಕ್ಕೀಡಾಗಿದೆ. ಮಹಾರಾಷ್ಟ್ರದ ಚಂದ್ರಾಪುರದಲ್ಲಿ ಗುರುವಾರ (ಮೇ 16,2019) ರಂದು ಈ ಘಟನೆ ನಡೆದಿದೆ.
Vijaya Karnataka Web RSS_chief car


ಆರ್‌ಎಸ್‌ಎಸ್‌ ಮುಖ್ಯಸ್ಥರ ಬೆಂಗಾವಲು ಪಡೆ ವಾಹನವೊಂದು ಮಹಾರಾಷ್ಟ್ರದಲ್ಲಿ ಅಪಘಾತಕ್ಕೀಡಾಗಿದೆ. ಆದರೆ, ಮೋಹನ್‌ ಭಾಗವತ್‌ ಸಂಪೂರ್ಣ ಸುರಕ್ಷಿತವಾಗಿದ್ದಾರೆ ಎಂದು ಆರ್‌ಎಸ್‌ಎಸ್‌ ನಾಯಕ ರಾಜೀವ್‌ ತುಲಿ ಸ್ಪಷ್ಟಪಡಿಸಿದ್ದಾರೆ. ಅಪಘಾತದಲ್ಲಿ ಒಬ್ಬರು ಭದ್ರತಾ ಸಿಬ್ಬಂದಿಯ ಕಾಲು ಮುರಿದಿದೆ ಎಂದು ಸಹ ಅವರು ತಿಳಿಸಿದ್ದಾರೆ.

ಚಂದ್ರಾಪುರ ಜಿಲ್ಲೆಯ ವರೋರಾದಲ್ಲಿ ವಾಹನದ ಟೈರ್‌ ಸ್ಫೋಟಗೊಂಡು ಈ ಘಟನೆ ನಡೆದಿದೆ ಎಂದು ಮಹಾರಾಷ್ಟ್ರ ಪೊಲೀಸರು ಮಾಹಿತಿ ನೀಡಿದ್ದಾರೆ. ಚಂದ್ರಾಪುರದಿಂದ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ನಾಗ್ಪುರಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ನಾಗ್ಪುರದ ಆರ್‌ಎಸ್‌ಎಸ್‌ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.

ಭಾಗವತ್‌ರ ಬೆಂಗಾವಲು ವಾಹನವೊಂದರ ಟೈರ್ ಸ್ಫೋಟಗೊಂಡು ಅಪಘಾತ ಸಂಭವಿಸಿದೆ. ಆ ವಾಹನದಲ್ಲಿದ್ದ ಒಬ್ಬ ವ್ಯಕ್ತಿಗೆ ಗಾಯವಾಗಿರುವ ವರದಿಯಾಗಿದೆ ಎಂದು ಚಂದ್ರಾಪುರದ ಪೊಲೀಸ್‌ ಸೂಪರಿಟೆಂಡೆಂಟ್‌ ಮಹೇಶ್‌ ರೆಡ್ಡಿ ಪಿಟಿಐಗೆ ಮಾಹಿತಿ ನೀಡಿದ್ದಾರೆ. ಚಂದ್ರಾಪುರ ಜಿಲ್ಲೆಯ ವರೋರಾ - ನಂದೋರಿ ರಸ್ತೆಯಲ್ಲಿ ಗುರುವಾರ ಸಂಜೆ 5 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ