ಆ್ಯಪ್ನಗರ

ಕೊರೊನಾ ಲಾಕ್‌ಡೌನ್ ತೆರವುಗೊಳಿಸುವಾಗ ಎಚ್ಚರ! ವಿಶ್ವ ಆರೋಗ್ಯ ಸಂಸ್ಥೆ ವಾರ್ನಿಂಗ್

ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಜಾರಿಯಲ್ಲಿರುವ ಸಂಪೂರ್ಣ ಲಾಕ್‌ಡೌನ್‌ ತೆರವುಗೊಳಿಸುವಾಗ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಸೂಚನೆಯನ್ನು ನೀಡಿದೆ. ಏಕಾಏಕಿ ಲಾಕ್‌ಡೌನ್ ತೆರವುಗೊಳಿಸುವುದರಿಂದ ಮತ್ತಷ್ಟು ಸಮಸ್ಯೆಗಳು ಸೃಷ್ಟಿಯಾಗಲಿವೆ ಎಂದು ಎಚ್ಚರಿಕೆ ನೀಡಿದೆ.

Vijaya Karnataka Web 10 Apr 2020, 2:05 pm
ಹೊಸದಿಲ್ಲಿ: ಕೊರೊನಾ ನಿಯಂತ್ರಣಕ್ಕಾಗಿ ಜಾರಿಗೆ ತಂದಿರುವ ಸಂಪೂರ್ಣ ಲಾಕ್‌ಡೌನ್‌ ತೆರವುಗೊಳಿಸುವಾಗ ಸಾಕಷ್ಟು ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಿ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಸೂಚನೆ ನೀಡಿದೆ.
Vijaya Karnataka Web lock down


ಲಾಕ್‌ಡೌನ್ ತೆರವುಗೊಳಿಸುವ ಮೊದಲು ಆಯಾ ಪ್ರದೇಶಗಳಲ್ಲಿರುವ ಕೊರೊನಾ ಹಾಟ್‌ ಸ್ಪಾಟ್‌ಗಳನ್ನು ಗುರುತಿಸಿಕೊಳ್ಳಬೇಕು. ಆ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಸೂಕ್ತ ನಿರ್ಬಂಧಗಳನ್ನು ಹೇರಬೇಕು. ಈ ಮೂಲಕ ಬೇರೆ ಪ್ರದೇಶಗಳಿಗೆ ಸೋಂಕು ಹರಡದಂತೆ ಎಚ್ಚರಿಕೆಯ ಕ್ರಮಗಳನ್ನು ವಹಿಸಬೇಕು ಎಂದು ಮುನ್ನೆಚ್ಚರಿಕೆಯನ್ನು ನೀಡಿದೆ.

ಕೋವಿಡ್‌-19 ಕುರಿತಾಗಿ ಗುರುವಾರ ನಡೆದ ಆನ್‌ಲೈನ್‌ ಸಂವಾದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ವಿಶೇಷ ರಾಯಭಾರಿ ಡೇವಿಡ್‌ ನಬರೋ ಈ ಸೂಚನೆಯನ್ನು ನೀಡಿದ್ದಾರೆ.

ಕರ್ನಾಟಕದಲ್ಲಿ ಕೊರೊನಾ ದ್ವಿಶತಕ: 10 ಹೊಸ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 207ಕ್ಕೆ ಏರಿಕೆ

ಯಾವುದೇ ದೇಶ ಅಧಿಕ ಸಮಯಗಳ ಕಾಲ ಲಾಕ್‌ಡೌನ್‌ನಲ್ಲಿ ಇರಲು ಬಯಸೋದಿಲ್ಲ. ಆದರೆ ಏಕಾಏಕಿ ಲಾಕ್‌ಡೌನ್ ತೆರವುಗೊಳಿಸುವುದು ಮತ್ತಷ್ಟು ಸಮಸ್ಯೆಗಳನ್ನು ಸೃಷ್ಟಿ ಮಾಡಬಹುದು. ಈ ನಿಟ್ಟಿನಲ್ಲಿ ಸಮುದಾಯದ ಮಟ್ಟದಲ್ಲಿ ಸೋಂಕು ನಿಯಂತ್ರಣ ಮಾಡುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.

ಕೊರೊನಾ ಸೋಂಕಿಗೆ ಒಳಗಾಗಿರುವ ಡಾ. ನೀರಜ್ ಪಾಟೀಲ್ ಭಾವನಾತ್ಮಕ ತೊಳಲಾಟ!

ಇದೇ ವೇಳೆ ಮಾತನಾಡಿದ ಅವರು, ಕೊರೊನ ವೈರಸ್ ವಿರುದ್ಧ ಲಸಿಕೆ ಅಭಿವೃದ್ಧಿಪಡಿಸುವುದು ಸುಲಭದ ಮಾತಲ್ಲ.ಸಾಕಷ್ಟು ಲಸಿಕೆಗಳನ್ನು ಅಭಿವೃದ್ಧಿಪಡಿಸುವುದು ಸಹ ಕಠಿಣವಾಗಿದೆ. ಹೀಗಿದ್ದರೂ ಮುಂದಿನ 18 ತಿಂಗಳೊಳಗೆ ಲಸಿಕೆ ಲಬ್ಯವಾಗುವಂತಹ ನಿರೀಕ್ಷೆ ಇದೆ ಎಂಬ ಭರವಸೆಯನ್ನು ನೀಡಿದ್ದಾರೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆದ ಈ ವಿಡಿಯೋ ಸಂವಾದಲ್ಲಿ ಪ್ರಪಂಚದ ಪ್ರಮುಖ ಆರೋಗ್ಯ ತಜ್ಞರು ಉಪಸ್ಥಿತರಿದ್ದರು. ಸಂವಾದದಲ್ಲಿ ಕೊರೊನಾ ಲಸಿಕೆ ಹಾಗೂ ಲಾಕ್‌ಡೌನ್‌ ಕುರಿತಾಗಿ ವಿವಿಧ ದೇಶದ ತಜ್ಞರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ