ಆ್ಯಪ್ನಗರ

'ಜಿಲ್ಲಾ ಗೋರಖ್‌ಪುರ' ಚಿತ್ರ ನಿರ್ಮಾಪಕರ ವಿರುದ್ಧ ದೂರು ದಾಖಲು

'ಜಿಲ್ಲಾ ಗೋರಖ್‌ಪುರ' ಚಿತ್ರ ನಿರ್ಮಾಪಕ ವಿನೋದ್‌ ತಿವಾರಿ ವಿರುದ್ಧ ವಿಭೂತಿ ಖಂಡ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Navbharat Times 30 Jul 2018, 6:00 pm
ಲಖನೌ: 'ಜಿಲ್ಲಾ ಗೋರಖ್‌ಪುರ' ಚಿತ್ರ ನಿರ್ಮಾಪಕ ವಿನೋದ್‌ ತಿವಾರಿ ವಿರುದ್ಧ ವಿಭೂತಿ ಖಂಡ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
Vijaya Karnataka Web Poster of the Movie


ಚಿತ್ರದ ಪೋಸ್ಟರ್‌ ಬಿಡುಗಡೆಯಾಗುತ್ತಿದ್ದಂತೆಯೇ ಬಿಜೆಪಿ ಮುಖಂಡರು ವಿನೋದ್‌ ತಿವಾರಿ ಮೇಲೆ ಮುಗಿಬಿದ್ದಿದ್ದಾರೆ.

ಪೋಸ್ಟರ್‌ನಲ್ಲಿ ಯೋಗಿ ಆದಿತ್ಯನಾಥ್‌, ನಾತ್‌ ಸಮುದಾಯವನ್ನು ತಪ್ಪಾಗಿ ಚಿತ್ರಿಸಲಾಗಿದೆ. ಅಂತೆಯೇ ಗೋ ರಕ್ಷಣೆ, ಸಾರ್ವಜನಿಕರಿಂದ ಹಲ್ಲೆ, ಕೇಸರಿ ಭಯೋತ್ಪಾದನೆ ಬಗೆಗೆ ಚಿತ್ರಿಸಲಾಗಿದೆ. ಹಿಂದುಗಳ ಭಾವನೆಗೆ ಧಕ್ಕೆ ಉಂಟು ಮಾಡುವ ಚಿತ್ರ ಎಂದು ಆರೋಪಿಸಿ, ಬಿಜೆಪಿ ಮುಖಂಡ ಐಪಿ ಸಿಂಗ್‌ ದೂರು ದಾಖಲಿಸಿದ್ದಾರೆ.

ಇತ್ತೀಚೆಗೆ ಚಿತ್ರದ ಪೋಸ್ಟರ್‌ ಬಿಡುಗಡೆಯಾಗಿದ್ದು, ಫೇಸ್‌ಬುಕ್‌ ಹಾಗೂ ಟ್ವಿಟರ್‌ನಲ್ಲಿ ವೈರಲ್‌ ಆಗಿದೆ. ಇದೇ ವೇಳೆ ಜಿಲ್ಲಾ ಗೋರಖ್‌ಪುರ ಚಿತ್ರವನ್ನು ಭಾರತದಲ್ಲಿ ಬಿಡುಗಡೆ ಮಾಡಲು ಬಿಡುವುದಿಲ್ಲ ಎಂದು ಐಪಿ ಸಿಂಗ್‌ ಎಚ್ಚರಿಕೆ ನೀಡಿದ್ದರು. ಚಿತ್ರದ ಕುರಿತು ಕೂಲಂಕಷ ವಿಚಾರಣೆ ನಡೆಸಬೇಕು ಎಂದು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಿದ್ದರು. ಈ ಸಂಬಂಧ ವಿನೋದ್‌ ತಿವಾರಿ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು, ಸೂಕ್ತ ವಿಚಾರಣೆ ನಡೆಸುವುದಾಗಿ ಹೇಳಿದ್ದಾರೆ.

ಪೋಸ್ಟರ್‌ನಲ್ಲಿ ಕೇಸರಿ ಖಾವಿ ಧರಿಸಿದ ವ್ಯಕ್ತಿಯ ಹಿಂಭಾದ ಚಿತ್ರ ಇದೆ. ಇದು ಸಿಎಂ ಯೋಗಿ ಆದಿತ್ಯನಾಥ್‌ ಅವರನ್ನು ಹೋಲುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಮೂಲ ವರದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ