ಆ್ಯಪ್ನಗರ

ಕಾವೇರಿ ನದಿ ವಿವಾದ: ನಿರ್ವಹಣೆ ಮಂಡಳಿ ರಚನೆಗೆ ಆಗ್ರಹಿಸಿ ತಮಿಳುನಾಡು ಬಂದ್‌

ಏಪ್ರಿಲ್‌ 5ರಂದು ಬಂದ್‌ಗೆ ಕರೆ ನೀಡಿರುವ ಪ್ರತಿಪಕ್ಷಗಳು

Vijaya Karnataka Web 1 Apr 2018, 2:21 pm
ಚೆನ್ನೈ: ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಕೇಂದ್ರ ಸರಕಾರ ವಿಳಂಬ ಧೋರಣೆ ತೋರುತ್ತಿದೆ. ಮಂಡಳಿ ರಚನೆಯನ್ನು ಕ್ಷಿಪ್ರಗತಿಯಲ್ಲಿ ಮಾಡಬೇಕು ಎಂಬ ಪ್ರಮುಖ ಬೇಡಿಕೆಯೊಂದಿಗೆ ಪ್ರತಿಪಕ್ಷ ಡಿಎಂಕೆ ತಮಿಳುನಾಡು ಬಂದ್‌ಗೆ ಕರೆ ನೀಡಿದೆ.
Vijaya Karnataka Web cauvery issue dmk call for tn bandh on april 5
ಕಾವೇರಿ ನದಿ ವಿವಾದ: ನಿರ್ವಹಣೆ ಮಂಡಳಿ ರಚನೆಗೆ ಆಗ್ರಹಿಸಿ ತಮಿಳುನಾಡು ಬಂದ್‌


ಏಪ್ರಿಲ್‌ 5ರಂದು ಬಂದ್‌ಗೆ ಡಿಎಂಕೆ ಕರೆ ನೀಡಿದ್ದು, ಇದಕ್ಕೆ ಹಲವು ಪಕ್ಷಗಳು ಬೆಂಬಲ ವ್ಯಕ್ತಪಡಿಸಿವೆ.

ಏಪ್ರಿಲ್‌ 5ರಂದು ಬೆಳಗ್ಗಿನಿಂದ ಸಂಜೆಯವರೆಗೆ ಬಂದ್‌ಗೆ ಡಿಎಂಕೆ ಕರೆ ನೀಡಿದೆ.

ಡಿಎಂಕೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಭೆ ನಡೆಸಿದ ನಂತರ ಬಂದ್‌ ಕರೆ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಯ ನಂತರ ಮಾತನಾಡಿದ ಡಿಎಂಕ ಕಾರ್ಯಕಾರಿ ಅಧ್ಯಕ್ಷ ಎಂ.ಕೆ. ಸ್ಟಾಲಿನ್‌, ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ಬಂದ್‌ಗೆ ಕರೆ ನೀಡಲು ನಿರ್ಧರಿಸಿದ್ದೇವೆ. ಈ ಬಂದ್‌ಗೆ ಬೆಂಬಲ ನೀಡಬೇಕೆಂದು ರೈತ ಸಂಘಟನೆಗಳು, ವ್ಯಾಪಾರಿಗಳು, ವಿದ್ಯಾಥಿ ಸಂಘಟನೆಗಳ ಪದಾಧಿಕಾರಿಗಳನ್ನು ಕೋರಿದ್ದೇವೆ ಎಂದರು.

ಏಪ್ರಿಲ್ 3ರಂದು ಬಹುತೇಕ ಪರೀಕ್ಷೆಗಳು ಪೂರ್ಣಗೊಳ್ಳಲಿವೆ. ಹೀಗಾಗಿ ಎಲ್ಲ ಪಕ್ಷಗಳು, ಸಂಘಟನೆಗಳು ಏಪ್ರಿಲ್‌ 5ರಂದು ಬಂದ್‌ಗೆ ಕರೆ ನೀಡಲು ನಿರ್ಧರಿಸಿವೆ ಎಂದು ಅವರು ತಿಳಿಸಿದರು.

ಕಾವೇರಿ ನಿರ್ವಹಣಾ ಮಂಡಳಿ ರಚನೆಯಾಗಲೇಬೇಕು. ಇದಕ್ಕಾಗಿ ನಾವು ಪಣ ತೊಡುತ್ತೇವೆ ಎಂದು ಸ್ಟಾಲಿನ್‌ ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ