ಆ್ಯಪ್ನಗರ

ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಬೇಡಿ: ಪ್ರಧಾನಿಗೆ ಪತ್ರ ಬರೆದ ತ.ನಾಡು ಸಿಎಂ

ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಬೇಡಿ. ಈ ಯೋಜನೆಯಿಂದ ತಮಿಳುನಾಡು ಪಾಲಿನ ನೀರಿಗೆ ಧಕ್ಕೆಯಾಗುತ್ತದೆ ಎಂದು ತಮಿಳುನಾಡು ಸಿಎಂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

TIMESOFINDIA.COM 25 Jun 2019, 11:52 am
ಹೊಸದಿಲ್ಲಿ: ಈಗಾಗಲೇ ತಾತ್ವಿಕ ಒಪ್ಪಿಗೆ ಪಡೆದಿರುವ ಮೇಕೆದಾಟು ಯೋಜನೆಗೆ ಸಂಪೂರ್ಣ ಒಪ್ಪಿಗೆ ನೀಡುವಂತೆ ಕರ್ನಾಟಕ ಸರಕಾರ ಕೇಂದ್ರದ ಅರಣ್ಯ ಮತ್ತು ಪರಿಸರ ಇಲಾಖೆಗೆ ಪತ್ರ ಬರೆದ ಬೆನ್ನಲ್ಲೆ ತಮಿಳುನಾಡು ಕ್ಯಾತೆ ತೆಗೆದಿದೆ.
Vijaya Karnataka Web TAMILNADU


ಹೌದು, ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ತಮಿಳುನಾಡು ಮುಖ್ಯಮಂತ್ರಿ ಎಡಪಾಡಿ ಪಳನಿಸ್ವಾಮಿ, ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಬೇಡಿ. ಈ ಯೋಜನೆಯಿಂದ ತಮಿಳುನಾಡು ಪಾಲಿನ ನೀರಿಗೆ ಧಕ್ಕೆಯಾಗುತ್ತದೆ ಎಂದಿದ್ದಾರೆ.

ಮೇಕೆದಾಟು ಜಲಾಶಯ ಯೋಜನೆಯ ತಾಂತ್ರಿಕ ಕಾರ್ಯ ವರದಿಗೆ ಅನುಮತಿ ನೀಡಬೇಕೆಂದು ಕೋರಿ ಕಾವೇರಿ ನೀರಾವರಿ ನಿಗಮ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದವಾಲಣೆ ಸಚಿವಾಲಕ್ಕೆ ಪತ್ರ ಬರೆದಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ