ಆ್ಯಪ್ನಗರ

ಕಾವೇರಿ ಸಭೆ ತಣ್ಣಗಾಗಿಸಿದ ಧಾರಾಕಾರ ಮಳೆ

ಕಾವೇರಿ ಕಣಿವೆ ಪ್ರದೇಶದಲ್ಲಿ ಉತ್ತಮ ಮಳೆ ಸುರಿಯುತ್ತಿರುವುದರಿಂದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಅತ್ಯಂತ ಸುಸೂತ್ರವಾಗಿ ನಡೆದಿದ್ದು, ಮುಂದಿನ ಸಭೆ ಆ.9ಕ್ಕೆ ನಿಗದಿಯಾಗಿದೆ.

Vijaya Karnataka 20 Jul 2018, 7:26 am
Vijaya Karnataka Web cauvery
ಹೊಸದಿಲ್ಲಿ: ಕಾವೇರಿ ಕಣಿವೆ ಪ್ರದೇಶದಲ್ಲಿ ಉತ್ತಮ ಮಳೆ ಸುರಿಯುತ್ತಿರುವುದರಿಂದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಅತ್ಯಂತ ಸುಸೂತ್ರವಾಗಿ ನಡೆದಿದ್ದು, ಮುಂದಿನ ಸಭೆ ಆ.9ಕ್ಕೆ ನಿಗದಿಯಾಗಿದೆ.

ಗುರುವಾರ ಇಲ್ಲಿನ ಜಲ ಆಯೋಗದ ಕಚೇರಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ ಎರಡನೇ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಮಿತಿ ಅಧ್ಯಕ್ಷ ಮತ್ತು ಕೇಂದ್ರ ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿ ನವೀನ್‌ಕುಮಾರ್‌, ''ಕಾವೇರಿ ಕಣಿವೆ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಸಾಮಾನ್ಯ ವರ್ಷಕ್ಕಿಂತ ಹೆಚ್ಚು ಮಳೆ ಸುರಿಯುತ್ತಿರುವುದರಿಂದ ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ. ಹೀಗಾಗಿ ನೀರು ಬಿಡುಗಡೆ ಕುರಿತಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಸಲಹೆ ನೀಡುವ ಸಂಬಂಧ ಸಭೆಯಲ್ಲಿ ಯಾವುದೇ ಚರ್ಚೆ ನಡೆಯಲಿಲ್ಲ ,''ಎಂದರು.

''ಜಲಾಶಯಗಳ ನೀರಿನ ಮಟ್ಟ, ಒಳ ಹರಿವು, ಹೊರ ಹರಿವುಗಳ ಬಗ್ಗೆ ಅತ್ಯಂತ ಸೌಹಾರ್ದ ವಾತಾವರಣದಲ್ಲಿ ಮಾಹಿತಿ ವಿನಿಮಯ ನಡೆಯಿತು. ಮುಂದಿನ ಸಭೆಯೂ ದಿಲ್ಲಿಯಲ್ಲೇ ನಡೆಯಲಿದೆ,'' ಎಂದು ನವೀನ್‌ಕುಮಾರ್‌ ವಿವರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ