ಪುಣೆ: ವಿಚಾರವಾದಿ ನರೇಂದ್ರ ಧಾಬೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ, ಪುಣೆ ನ್ಯಾಯಾಲಯದಲ್ಲಿ ಬುಧವಾರ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದೆ. ಆರೋಪಿ ಶಾರ್ಪ್ ಶೂಟರ್ ಸಚಿನ್ ಅಂದುರೆ ಹಾಗೂ ಶರದ್ ಕಾಲಾಸ್ಕರ್ ವಿರುದ್ಧ ಕ್ರಿಮಿನಲ್ ಸಂಚು, ಕೊಲೆ ಮತ್ತಿತರ ಆರೋಪಗಳನ್ನು ಚಾರ್ಜ್ಶೀಟ್ನಲ್ಲಿ ಹೊರಿಸಲಾಗಿದೆ. ಇದೇ ವೇಳೆ ಹತ್ಯೆಗೆ ಹಂತಕರು ಬಳಸಿದ ಮೋಟಾರ್ ಸೈಕಲ್ ಹಾಗೂ ಪಿಸ್ತೂಲ್ಗಾಗಿ ಹುಡುಕಾಟ ಮುಂದುವರಿದಿದೆ ಎಂದು ಕೋರ್ಟ್ಗೆ ಸಿಬಿಐ ತಿಳಿಸಿದೆ. ಸಿಬಿಐ 2014ರ ಜೂನ್ 2ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಧಾಬೋಲ್ಕರ್ ಅವರು 2013ರ ಆಗಸ್ಟ್ 20ರಂದು ಪುಣೆಯ ಓಂಕಾರೇಶ್ವರ ಸೇತುವೆ ಬಳಿ ಹತ್ಯೆಗೀಡಾಗಿದ್ದರು.
ಧಾಬೋಲ್ಕರ್ ಹತ್ಯೆ: ಪೂರಕ ದೋಷಾರೋಪ ಪಟ್ಟಿ ಸಲ್ಲಿಕೆ
ಹತ್ಯೆಗೆ ಹಂತಕರು ಬಳಸಿದ ಮೋಟಾರ್ ಸೈಕಲ್ ಹಾಗೂ ಪಿಸ್ತೂಲ್ಗಾಗಿ ಹುಡುಕಾಟ ಮುಂದುವರಿದಿದೆ ಎಂದು ಕೋರ್ಟ್ಗೆ ಸಿಬಿಐ ತಿಳಿಸಿದೆ.
Vijaya Karnataka 14 Feb 2019, 5:00 am