ಆ್ಯಪ್ನಗರ

ದಿಲ್ಲಿ ಸಚಿವ ಸತ್ಯೇಂದ್ರ ಜೈನ್‌ ನಿವಾಸದ ಮೇಲೆ ಸಿಬಿಐ ದಾಳಿ

ದಿಲ್ಲಿ ಲೋಕೋಪಯೋಗಿ ಸಚಿವ ಸತ್ಯೇಂದ್ರ ಜೈನ್‌ ಅವರು ನಿಯಮ ಉಲ್ಲಂಘಿಸಿ ಇಲಾಖೆಯಲ್ಲಿ ವಾಸ್ತುಶಿಲ್ಪಿಗಳನ್ನು ನೇಮಕ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಜೈನ್‌ ವಿರುದ್ಧ ಸಿಬಿಐ ಕೇಸು ದಾಖಲಿಸಿಕೊಂಡಿದೆ. ಬುಧವಾರ ಜೈನ್‌ ನಿವಾಸ ಸೇರಿದಂತೆ ದಿಲ್ಲಿಯ ಹಲವೆಡೆ ತನಿಖಾ ಸಂಸ್ಥೆ ದಾಳಿ ನಡೆಸಿದೆ.

Vijaya Karnataka 31 May 2018, 10:18 am
ಹೊಸದಿಲ್ಲಿ: ದಿಲ್ಲಿ ಲೋಕೋಪಯೋಗಿ ಸಚಿವ ಸತ್ಯೇಂದ್ರ ಜೈನ್‌ ಅವರು ನಿಯಮ ಉಲ್ಲಂಘಿಸಿ ಇಲಾಖೆಯಲ್ಲಿ ವಾಸ್ತುಶಿಲ್ಪಿಗಳನ್ನು ನೇಮಕ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಜೈನ್‌ ವಿರುದ್ಧ ಸಿಬಿಐ ಕೇಸು ದಾಖಲಿಸಿಕೊಂಡಿದೆ. ಬುಧವಾರ ಜೈನ್‌ ನಿವಾಸ ಸೇರಿದಂತೆ ದಿಲ್ಲಿಯ ಹಲವೆಡೆ ತನಿಖಾ ಸಂಸ್ಥೆ ದಾಳಿ ನಡೆಸಿದೆ.
Vijaya Karnataka Web Satyendra Jain


ಪಿಡಬ್ಲ್ಯೂಡಿ ಅಧಿಕಾರಿಗಳ ನಿವಾಸ ಸೇರಿದಂತೆ ಇನ್ನೂ ಐದು ಸ್ಥಳಗಳಲ್ಲಿ ಶೋಧ ನಡೆಸಿರುವುದಾಗಿ ಸಿಬಿಐ ಅಧಿಕಾರಿಗಳು ಹೇಳಿದ್ದಾರೆ. ಜೈನ್‌ ವಿರುದ್ಧ ಈಗಾಗಲೇ ಭ್ರಷ್ಟಾಚಾರ ಪ್ರಕರಣವೂ ದಾಖಲಾಗಿದ್ದು, ಅದರ ತನಿಖೆ ಮುಂದುವರಿದಿದೆ. ಸಿಬಿಐ ತನ್ನ ನಿವಾಸದ ಮೇಲೆ ದಾಳಿ ನಡೆಸಿರುವ ಸಂಗತಿಯನ್ನು ಪಿಡಬ್ಲ್ಯೂಡಿ ಸಚಿವರು ಟ್ವೀಟ್‌ ಮೂಲಕ ದೃಢೀಕರಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ ಅನುಭವವಿಲ್ಲದ 24 ವಾಸ್ತುಶಿಲ್ಪಿಗಳನ್ನು ನೇಮಕ ಮಾಡಿರುವುದರ ಬಗ್ಗೆ ಸಿಬಿಐ ಪ್ರಾಥಮಿಕ ತನಿಖೆ ಆರಂಭಿಸಿದೆ.

ಕೇಜ್ರಿವಾಲ್‌ ಕಿಡಿ: ಸಿಬಿಐ ದಾಳಿ ಬೆನ್ನಲ್ಲೇ ಟ್ವಿಟರ್‌ನಲ್ಲಿ ಗುಡುಗಿದ ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌, '' ಮೋದಿಯವರಿಗೆ ಏನು ಬೇಕಿದೆ?'' ಎಂದು ಪ್ರಶ್ನಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ