ಆ್ಯಪ್ನಗರ

ಉನ್ನಾವೋ ರೇಪ್ ಸಂತ್ರಸ್ತೆ ಅಪಘಾತ ಪ್ರಕರಣ ಸಿಬಿಐಗೆ

ಬಿಜೆಪಿ ಶಾಸಕನ ವಿರುದ್ಧ ರೇಪ್ ಅತ್ಯಾಚಾರ ಆರೋಪ ಮಾಡಿದ್ದ ಅಪ್ರಾಪ್ತ ಬಾಲಕಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾಳೆ.

TIMESOFINDIA.COM 29 Jul 2019, 3:10 pm
ಹೊಸದಿಲ್ಲಿ: ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಕಾರು ಅಪಘಾತ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲು ಉತ್ತರ ಪ್ರದೇಶದ ಪೊಲೀಸರು ನಿರ್ಧರಿಸಿದ್ದಾರೆ.
Vijaya Karnataka Web accident


ಪ್ರಕರಣ ಸಿಬಿಐ ತನಿಖೆಗೊಳಪಡಬೇಕು ಎಂಬ ಸಂತ್ರಸ್ತೆ ಕುಟುಂಬದ ಮನವಿಯನ್ನು ಪೊಲೀಸರು ಸರಕಾರಕ್ಕೆ ಕಳುಹಿಸಿದ್ದಾರೆ. ಈ ಪತ್ರವನ್ನು ಕೇಂದ್ರ ಸರಕಾರಕ್ಕೆ ಕಳುಹಿಸಬೇಕಾಗಿದ್ದು, ಬಳಿಕವಷ್ಟೇ ಸಿಬಿಐ ತನಿಖೆ ಬಗ್ಗೆ ಖಾತ್ರಿ ಸಿಗಲಿದೆ.

ಉನ್ನಾವೋ ಬಿಜೆಪಿ ಶಾಸಕ ಆರೋಪಿಯಾಗಿರುವ ಈ ಪ್ರಕರಣ ಕಳೆದೊಂದು ವರ್ಷದ ಹಿಂದೆ ನಡೆದಿತ್ತು.

ಭಾನುವಾರ ಸಂತ್ರಸ್ತೆ, ಆಕೆಯ ವಕೀಲ, ಮತ್ತು ಇಬ್ಬರು ಚಿಕ್ಕಮ್ಮಂದಿರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿತ್ತು. ಅವರೆಲ್ಲರು ಬೇರೊಂದು ಪ್ರಕರಣದಲ್ಲಿ ಜೈಲಿನಲ್ಲಿರುವ ಸಂತ್ರಸ್ತೆಯ ಚಿಕ್ಕಮ್ಮನ್ನನ್ನು ಭೇಟಿಯಾಗಲು ಹೊರಟಿದ್ದಾಗ ದುರ್ಘಟನೆ ನಡೆದಿತ್ತು.

ರಾಯಬರೇಲಿ ಬಳಿ ಕಾರು ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ ಆಕೆಯ ಇಬ್ಬರು ಚಿಕ್ಕಮ್ಮಂದಿರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಗಾಯಗೊಂಡ ಸಂತ್ರಸ್ತೆ ಮತ್ತು ವಕೀಲನನ್ನು ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯ ಆಸ್ಪತ್ರೆ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.

ಬಾಲಕಿ ಹಾಗೂ ಆಕೆಯ ಪರ ವಕೀಲರ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೆಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಲಖನೌ ವಿಭಾಗದ ಎಡಿಜಿಪಿ ರಾಜೀವ್ ಕೃಷ್ಣನ್ ತಿಳಿಸಿದ್ದಾರೆ.

2017ರಲ್ಲಿ ಬಿಜೆಪಿ ಶಾಸಕ ಕುಲದೀಪ್‌ ಸೆಂಗಾರ್‌ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ಆರೋಪಿಸಿದ್ದ ಬಾಲಕಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿವಾಸದ ಎದುರು ಆತ್ಮಹತ್ಯೆಗೆ ಯತ್ನಿಸಿದ್ದಳು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ