ಆ್ಯಪ್ನಗರ

ರಾಜ್ಯಕ್ಕೆ ಮತ್ತೊಂದು ಭೂಗತ ತೈಲ ಸಂಗ್ರಹ ಘಟಕ: ಕೇಂದ್ರ ಒಪ್ಪಿಗೆ

ಖಾಸಗಿ ಸಹಭಾಗಿತ್ವದಲ್ಲಿ ಉಡುಪಿಯ ಕಾಪು ಸಮೀಪವಿರುವ ಪಡೂರಿನಲ್ಲಿ ಭೂಗತ ಕಚ್ಚಾ ತೈಲ ಸಂಗ್ರಹ ಘಟಕ ನಿರ್ಮಾಣಕ್ಕೆ ಕೇಂದ್ರ ಸರಕಾರ ತಾತ್ವಿಕ ಅನುಮೋದನೆ ನೀಡಿದೆ.

TIMESOFINDIA.COM 28 Jun 2018, 2:52 pm
ಹೊಸದಿಲ್ಲಿ: ಖಾಸಗಿ ಸಹಭಾಗಿತ್ವದಲ್ಲಿ ಉಡುಪಿಯ ಕಾಪು ಸಮೀಪವಿರುವಪಡೂರಿನಲ್ಲಿ ಭೂಗತ ಕಚ್ಚಾ ತೈಲ ಸಂಗ್ರಹ ಘಟಕ ನಿರ್ಮಾಣಕ್ಕೆ ಕೇಂದ್ರ ಸರಕಾರ ತಾತ್ವಿಕ ಅನುಮೋದನೆ ನೀಡಿದೆ.
Vijaya Karnataka Web oil


ಮಂಗಳೂರಿನಲ್ಲಿ ಈಗಾಗಲೇ 1.5 ಮೆಟ್ರಿಕ್‌ ಟನ್‌ ಸಾಮರ್ಥ್ಯದ ಭೂಗತ ತೈಲ ಸಂಗ್ರಹ ಘಟಕ ಸ್ಥಾಪಿಸಲಾಗಿದ್ದು, ಇದೀಗ ಒರಿಸ್ಸಾದಲ್ಲಿ 4 ಮೆಟ್ರಿಕ್‌ ಟನ್‌ ಹಾಗೂ ಕಾಪುವಿನಲ್ಲಿ 2.5 ಮೆಟ್ರಿಕ್‌ ಟನ್ ಸಾಮರ್ಥ್ಯದ 2 ಘಟಕಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.

2017-18ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕಚ್ಚಾ ತೈಲ ಬಳಕೆಗೆ ಸಂಗ್ರಹ ಘಟಕವನ್ನು ಸ್ಥಾಪಿಸುವ ಘೋಷಣೆ ಮಾಡಲಾಗಿತ್ತು. ಮೊದಲ ಹಂತದ ಯೋಜನೆ ಮಾಜಿ ಪ್ರಧಾನಿ ಅಟಲ್‌ ಬಿಹಾತಿ ವಾಜಪೇಯಿಯ ಎನ್‌ಡಿಎ ಸರಕಾರದ ಅವಧಿಯಲ್ಲಿ ನಿರ್ಮಿಸಲು ಅನುಮತಿ ನೀಡಲಾಗಿತ್ತು ಎಂದು ಹಣಕಾಸು ಸಚಿವ ಪಿಯೂಷ್‌ ಘೋಯಲ್‌ ಗುರುವಾರ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಘಟಕ ನಿರ್ಮಾಣಕ್ಕೆ ಬೇಕಾಗುವ ವೆಚ್ಚ ಹಾಗೂ ಇನ್ನಿತರ ವಿಚಾರಗಳನ್ನು ಎಂಜಿನಿಯರಿಂಗ್‌ ವಿಭಾಗದಿಂದ ಪಡೆದುಕೊಳ್ಳಲಾಗುತ್ತದೆ. ಮಂಗಳೂರು ಹಾಗೂ ವಿಶಾಖಪಟ್ನಂನಲ್ಲಿನ ಭೂಗತ ಘಟಕದ ಮೊದಲ ಹಂತವು 4,098 ಕೋಟಿ ರೂ.ನಲ್ಲಿ ನಿರ್ಮಾಣ ಮಾಡಲಾಗಿತ್ತು. ತುರ್ತು ಪರಿಸ್ಥಿತಿಯಲ್ಲಿ 12ರಿಂದ 22 ದಿನಗಳ ವರೆಗೆ ಬೇಕಾಗುವಷ್ಟು ಕಚ್ಚಾ ತೈಲವನ್ನು ಬಳಕೆ ಮಾಡಲು ದಾಸ್ತಾನು ಇಡಲು ಸಾಧ್ಯವಾಗಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ