ಆ್ಯಪ್ನಗರ

ಅತೃಪ್ತ ಶಾಸಕರ ರಾಜೀನಾಮೆ, ಸ್ಪೀಕರ್‌ ಘನತೆಗೆ ತಕ್ಕಂತೆ ವರ್ತಿಸುತ್ತಿಲ್ಲ: ಪ್ರಹ್ಲಾದ್‌ ಜೋಷಿ

ಕರ್ನಾಟಕ ರಾಜಕೀಯ ಕ್ಷಿಪ್ರಕ್ರಾಂತಿ ಬಗ್ಗೆ ಇಡೀ ದೇಶದ ಕಣ್ಣು ಬಿದ್ದಿದೆ. ರಾಜಕೀಯ ದೊಂಬರಾಟದ ಬಗ್ಗೆ ಹಲವು ಕಡೆಯಿಂದ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ

Vijaya Karnataka Web 16 Jul 2019, 8:33 pm
ಹೊಸದಿಲ್ಲಿ: ಕರ್ನಾಟಕದಲ್ಲಿ ಅತೃಪ್ತ ಶಾಸಕರು ತಮ್ಮ ರಾಜೀನಾಮೆಯನ್ನು ಖುದ್ದಾಗಿ ಸಭಾಧ್ಯಕ್ಷರಿಗೆ ಸಲ್ಲಿಸಬೇಕೆಂದು ಸುಪ್ರೀಂಕೋರ್ಟ್‌ ಸೂಚಿಸಿರುವಂತೆ ಆ ಶಾಸಕರು ಸ್ವತಃ ರಾಜೀನಾಮೆ ಪತ್ರಗಳನ್ನು ಸಲ್ಲಿಸಿದರೂ ಅವುಗಳನ್ನು ಅಂಗೀಕರಿಸಲು ಸ್ಪೀಕರ್ ವಿನಾಕಾರಣ ವಿಳಂಬ ಮಾಡುತ್ತಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಷಿ ಆಕ್ಷೇಪಿಸಿದ್ದಾರೆ.
Vijaya Karnataka Web ಪ್ರಹ್ಲಾದ್‌ ಜೋಷಿ
ಪ್ರಹ್ಲಾದ್‌ ಜೋಷಿ


ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಪ್ರಹ್ಲಾದ್‌ ಜೋಷಿ ಮಾತನಾಡಿದರು.

ಸಾಂವಿಧಾನಿಕ ಹುದ್ದೆಯಾದ ಸಭಾಧ್ಯಕ್ಷರ ಸ್ಥಾನದಲ್ಲಿರುವವರು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಜನತೆ ಮತ್ತು ಪ್ರತಿಪಕ್ಷಗಳು ಇದನ್ನು ನಿರೀಕ್ಷಿಸುತ್ತವೆ ಎಂದರು.

ಸದ್ಯದ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ಕೆ.ಆರ್. ರಮೇಶ್‌ಕುಮಾರ್ ತಮ್ಮ ಹುದ್ದೆಯ ಘನತೆಗೆ ತಕ್ಕಂತೆ ವರ್ತಿಸುತ್ತಿಲ್ಲ. ಇದು ದುರುದೃಷ್ಟಕರ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ